Water; ಮುಂಗಾರಿಗೆ ಮನೆ, ಮನೆಗೆ ಎತ್ತಿನಹೊಳೆ ನೀರು? ಪೈಪ್‌ಲೈನ್‌ಗಳ ಅಳವಡಿಕೆಗೆ ಸಿದ್ಧತೆ

ಕುಡಿಯುವ ನೀರು ಸಂಗ್ರಹಕ್ಕೆ ಪ್ರತ್ಯೇಕ ಕೆರೆ ನಿರ್ಮಿಸಲು ಯೋಜನೆ

Team Udayavani, Sep 9, 2024, 7:30 AM IST

Water; ಮುಂಗಾರಿಗೆ ಮನೆ, ಮನೆಗೆ ಎತ್ತಿನಹೊಳೆ ನೀರು? ಪೈಪ್‌ಲೈನ್‌ಗಳ ಅಳವಡಿಕೆಗೆ ಸಿದ್ಧತೆ

ಬೆಂಗಳೂರು: ಪಶ್ಚಿಮಘಟ್ಟದ ಮಡಿಲಿನಿಂದ ನೀರು ಎತ್ತುವಲ್ಲಿ ಸರಕಾರ ಭಾಗಶಃ ಯಶಸ್ವಿಯಂತೂ ಆಗಿದೆ. ಈ ಯೋಜನೆ 2027ರ ಒಳಗೆ ಪೂರ್ಣಗೊಳಿಸುವ “ಗ್ಯಾರಂಟಿ’ ಕೂಡ ಸಿಕ್ಕಿದೆ. ಅದಕ್ಕೂ ಮೊದಲೇ ಎತ್ತಿನಹೊಳೆ ನೀರು ಬರದ ನಾಡಿನ ಮನೆಗಳ ನಲ್ಲಿಗಳಲ್ಲಿ ಹರಿಯುವ ಸಾಧ್ಯತೆ ಇದೆ !

ಹೌದು, ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಹಂತ-1ರಲ್ಲಿ ಏತ ಕಾಮಗಾರಿಗಳು ಮತ್ತು ವಿದ್ಯುತ್‌ ಪೂರೈಕೆ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಗುರುತ್ವ ಕಾಲುವೆ ಮೂಲಕ ನೀರು ಹರಿಸಿದ ಬೆನ್ನಲ್ಲೇ ಹೀಗೆ ಎತ್ತಿದ ನೀರನ್ನು ದಶಕಗಳಿಂದ ಎದುರು ನೋಡುತ್ತಿರುವ ಜನರ ಮನೆಬಾಗಿಲಿಗೆ ಹರಿಸಲು ಈಗಾಗಲೇ ತೆರೆಮರೆಯಲ್ಲಿ ಸಿದ್ಧತೆಗಳು ನಡೆದಿದ್ದು ಅಂದುಕೊಂಡಂತೆ ನಡೆದರೆ, ಒಂದೂವರೆ ವರ್ಷದಲ್ಲಿ ಈ ನಿಟ್ಟಿನಲ್ಲಿ ಪ್ರಯೋಗ ಕೂಡ ನಡೆಯಲಿದೆ.

ನೀರೆತ್ತುವ ಕಾಮಗಾರಿಗಳಿಗೆ ಪರ್ಯಾಯವಾಗಿ ಎತ್ತಿನಹೊಳೆ ಯೋಜನೆ ಅಡಿ ಸಣ್ಣ ನೀರಾವರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯಿಂದ ಉದ್ದೇಶಿತ ಯೋಜನೆ ಅಡಿ ಹರಿದ ನೀರನ್ನು ಕುಡಿಯಲಿಕ್ಕಾಗಿಯೇ ಸಂಗ್ರಹಿಸಲು ಪ್ರತ್ಯೇಕ ಕೆರೆ ಅಥವಾ ಬಂಡುಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗುತ್ತಿದೆ. ಈಗಾಗಲೇ ಸಣ್ಣ ನೀರಾವರಿ ಇಲಾಖೆಯು ತುಮಕೂರಿನ ಕೊರಟಗೆರೆ, ಮಧುಗಿರಿ ತಾಲೂಕುಗಳಲ್ಲಿನ ಕೆರೆಗಳನ್ನು ತುಂಬಿಸಲು ಅಗತ್ಯವಿರುವ ಪೈಪ್‌ಲೈನ್‌ಗಳ ಅಳವಡಿಕೆಗೆ ಟೆಂಡರ್‌ ಆಹ್ವಾನಿಸಲಾಗಿದೆ.

ಬೆನ್ನಲ್ಲೇ ತಿಪಟೂರು, ಚಿಕ್ಕನಾಯಕನಹಳ್ಳಿ, ಹಾಸನದ ಅರಸೀಕೆರೆಯಲ್ಲಿ ಈ ಸಂಬಂಧ ಸಿದ್ಧತೆಗಳು ನಡೆದಿವೆ. ಇದಕ್ಕೆ ಪೂರಕವಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯು ಕೆರೆಗಳಿಂದ ಮನೆಗಳಿಗೆ ನೀರು ಕೊಂಡೊಯ್ಯಲು ಅಗತ್ಯ ಪೈಪ್‌ಗ್ಳ ಅಳವಡಿಕೆಗೆ ಪೂರಕವಾಗಿ ಸಮಗ್ರ ಯೋಜನ ವರದಿ (ಡಿಪಿಆರ್‌) ಸಿದ್ಧಪಡಿಸುತ್ತಿದೆ.

ಎತ್ತಿನಹೊಳೆ ಯೋಜನೆ ಅಡಿ ಕುಡಿಯಲು ಮತ್ತು ಅಂತರ್ಜಲ ಮರುಪೂರಣ ಸೇರಿ ಎರಡು ಉದ್ದೇಶಗಳಿಗೆ ಕೆರೆಗಳಲ್ಲಿ ನೀರು ಸಂಗ್ರಹವಾಗಲಿದೆ. ಈ ಪೈಕಿ ಕುಡಿಯಲಿಕ್ಕಾಗಿಯೇ ಪ್ರತ್ಯೇಕ ಕೆರೆಗಳನ್ನು ನಿರ್ಮಿಸಿ, ಅಲ್ಲಿ ಸಂಗ್ರಹಿಸಲಾಗುವುದು. ಯೋಜನೆ ಫ‌ಲಾನುಭವಿ ಹಳ್ಳಿಗಳನ್ನು “ಟೆಕ್ನೋ ಎಕನಾಮಿಕ್‌ ಸ್ಟಡಿ’ ಮೂಲಕ ಮ್ಯಾಪಿಂಗ್‌ ಮಾಡಿ, ಜನಸಂಖ್ಯೆ ಮತ್ತು ಪ್ರದೇಶಕ್ಕೆ ಅನುಗುಣವಾಗಿ ಇಂತಿಷ್ಟು ಹಳ್ಳಿಗಳಿಗೆ ಒಂದು ಕೆರೆ ಮತ್ತು ಪೈಪ್‌ ಗಳನ್ನು ಅಳವಡಿಸಲಾಗುವುದು. ಮುಂದಿನ 3 ತಿಂಗಳಲ್ಲಿ ಪೈಪ್‌ಲೈನ್‌ಗಳ ಅಂದಾಜು ಸಿದ್ಧಗೊಂಡು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಉದ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಉದಯವಾಣಿ’ಗೆ ತಿಳಿಸಿದರು.

ಮುಂದಿನ ಮುಂಗಾರಿಗೆ
ತುಮಕೂರಿಗೆ ನೀರು?
ಸ್ವತಃ ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದಂತೆ ಮುಂದಿನ 4 ತಿಂಗಳಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಆಗ ತುಮಕೂರಿಗೆ ನೀರು ಹರಿಸುವ ಕಾರ್ಯ ಸುಗಮವಾಗಲಿದೆ. ಅಂದಾಜು ಮುಂದಿನ ಮುಂಗಾರು ಹೊತ್ತಿಗೆ ಯೋಜನೆ ಅಡಿ ತುಮಕೂರಿಗೆ ನೀರು ಹರಿಸಲು ಸಾಧ್ಯವಾಗಲಿದೆ ಎಂದು ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ (ವಿಜೆಎನ್‌ಎಲ್‌) ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ ಮಾಹಿತಿ ನೀಡಿದರು.

ಯೋಜನೆಯಡಿ ಮೊದಲು ತುಮಕೂರಿನ ವಿವಿಧ ಹಳ್ಳಿಗಳಿಗೆ ನೀರು ಹರಿಯಲಿದೆ. ಇದಕ್ಕಾಗಿ ಅಲ್ಲಿನ ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 35-40 ಕೆರೆಗಳನ್ನು ನಿರ್ಮಿಸಲಾಗುತ್ತಿದೆ. ಅನಂತರದಲ್ಲಿ ಇತರ ಪ್ರದೇಶಗಳಲ್ಲೂ ಹಂತ-ಹಂತವಾಗಿ ಟೆಂಡರ್‌ ಕರೆಯಲಾಗುವುದು. ಯೋಜನೆ ಪ್ರಗತಿಗೆ ಅನುಗುಣವಾಗಿ ಇತ್ತ ನೀರನ್ನು ಮನೆಬಾಗಿಲಿಗೆ ಕೊಂಡೊಯ್ಯುವ ಕಾರ್ಯ ನಡೆಯಲಿದೆ. ಅದನ್ನು ಆಯಾ ಸ್ಥಳೀಯ ಸಂಸ್ಥೆಗಳು ಅಥವಾ ಸಣ್ಣ ನೀರಾವರಿ ಅಥವಾ ಗ್ರಾಮೀಣಾಭಿವೃದ್ಧಿ ಇಲಾಖೆಗಳು ಜವಾಬ್ದಾರಿ ವಹಿಸಿಕೊಂಡಿವೆ ಎಂದು ವಿಶ್ವೇಶ್ವರಯ್ಯ ಜಲ ನಿಗಮದ ಹಿರಿಯ ಎಂಜಿನಿಯರೊಬ್ಬರು ಸ್ಪಷ್ಟಪಡಿಸಿದರು.

ಹಂತ-1ರಲ್ಲಿ ಆಗಿದ್ದೇನು?
ಏತ ಕಾಮಗಾರಿಗಳು ಮತ್ತು ವಿದ್ಯುತ್‌ ಪೂರೈಕೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ (ವಿಯರ್‌-3ರ ವಿದ್ಯುತ್‌ ಕಾಮಗಾರಿ ಹೊರತುಪಡಿಸಿ)
ಹಂತ-2ರಲ್ಲಿ ಸ್ಥಿತಿಗತಿ
-ಒಟ್ಟು ಕಾಲುವೆ ಉದ್ದ 252.61 ಕಿ.ಮೀ.
– ಪೂರ್ಣಗೊಂಡಿದ್ದು 164.47 ಕಿ.ಮೀ.
– ಪ್ರಗತಿಯಲ್ಲಿರುವುದು 25.87 ಕಿ.ಮೀ.

ಯೋಜನೆಯ ಅಂಕಿ-ಅಂಶ
– 24.01 ಟಿಎಂಸಿ ಯೋಜನೆ ಅಡಿ ದೊರೆಯಲಿರುವ ನೀರು
– 14.05 ಟಿಎಂಸಿ ಕುಡಿಯುವ ಉದ್ದೇಶಕ್ಕೆ
-9.95 ಟಿಎಂಸಿ ಕೆರೆಗಳನ್ನು ತುಂಬಿಸುವುದು (ಶೇ. 50ರಷ್ಟು ಮಾತ್ರ)

ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.