Manipur; ಶಾಂತಿ ಸ್ಥಾಪನೆಗೆ ಕೇಂದ್ರಕ್ಕೆ ಮೊರೆ
Team Udayavani, Sep 9, 2024, 6:45 AM IST
ಮಣಿಪುರ ಸಿಎಂ ಬಿರೇನ್ ಸಿಂಗ್
ಇಂಫಾಲ್: ಗಲಭೆ ಪೀಡಿತ ಮಣಿಪುರದಲ್ಲಿ ಮೈತೇಯಿ ಸಮುದಾಯ ಮತ್ತು ಕುಕಿ ಬಂಡುಕೋರರ ನಡುವಿನ ಸಂಘರ್ಷವು ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಕಾಣಿಸುತ್ತಿಲ್ಲ. ಸತತ ಡ್ರೋನ್, ರಾಕೆಟ್ ದಾಳಿಯ ಬೆನ್ನಲ್ಲೇ ಶನಿವಾರ ಮುಂಜಾನೆ ನಡೆದ ಹಿಂಸಾಚಾರದಲ್ಲಿ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ, ಶಾಂತಿ ಪುನಃಸ್ಥಾಪನೆಯ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಿಕೊಳ್ಳಲು ಮುಂದಾಗಿವೆ.
ಅದರಂತೆ, ಮಣಿಪುರ ಸಿಎಂ ಬಿರೇನ್ ಸಿಂಗ್ ಮತ್ತು ಆಡಳಿತಾರೂಢ ಬಿಜೆಪಿ ಹಾಗೂ ಮಿತ್ರಪಕ್ಷ ಗಳ ಕೆಲವು ಶಾಸಕರು ಕೇಂದ್ರ ಸರಕಾರಕ್ಕೆ 8 ಅಂಶಗಳ ಕೋರಿಕೆಯುಳ್ಳ ಪಟ್ಟಿ ಸಲ್ಲಿಸಿದ್ದಾರೆ. ರಾಜ್ಯದ ಭದ್ರತಾ ಕಾರ್ಯಾಚರಣೆಗಳನ್ನು ನೋಡಿಕೊಳ್ಳುವ ಯುನಿಫೈಡ್ ಕಮಾಂಡ್ನ ನಿಯಂತ್ರಣ ಅಧಿಕಾರವನ್ನು ಸರಕಾರಕ್ಕೆ ನೀಡಬೇಕು, ಕೇಂದ್ರ, ರಾಜ್ಯ ಮತ್ತು ಕುಕಿ ಬಂಡುಕೋರರ ನಡುವೆ ನಡೆದ ತ್ರಿಪಕ್ಷೀಯ ಒಪ್ಪಂದ ರದ್ದು ಮಾಡಬೇಕು, ಶಾಂತಿ ಮರುಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು, ಗಡಿ ಬೇಲಿ ಹಾಕುವ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂಬಿತ್ಯಾದಿ ಒಳಗೊಂಡ ಬೇಡಿಕೆಯನ್ನು ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯಗೆ ಸಲ್ಲಿಕೆ ಮಾಡಿದ್ದಾರೆ.
ಡ್ರೋನ್ ನಿಗ್ರಹ ವ್ಯವಸ್ಥೆ: ಬಂಡುಕೋರರು ಡ್ರೋನ್, ರಾಕೆಟ್ ಮೂಲಕ ದಾಳಿ ಆರಂಭಿಸಿರುವ ಹಿನ್ನೆಲೆಯಲ್ಲಿ ಡ್ರೋನ್ ನಿಗ್ರಹ ವ್ಯವಸ್ಥೆಯನ್ನು ನಿಯೋಜಿಸಲಾಗಿದೆ. ಸೇನಾ ಕಾಪ್ಟರ್ಗಳೂ ಗಸ್ತು ತಿರುಗಲಾರಂಭಿಸಿವೆ. ಅನುಮಾನಾಸ್ಪದ ಪ್ರದೇಶಗಳಲ್ಲಿ ಕೂಂಬಿಂಗ್ ನಡೆಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವವರನ್ನು ಗುರುತಿಸಲೆಂದೇ ವಿಶೇಷ ತಂಡವನ್ನು ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.