Kanpur: ಹಳಿ ಮೇಲೆ ಎಲ್ಪಿಜಿ ಸಿಲಿಂಡರ್ ಇರಿಸಿ ರೈಲು ಸ್ಫೋಟಕ್ಕೆ ಯತ್ನ… ತಪ್ಪಿದ ಅನಾಹುತ
Team Udayavani, Sep 9, 2024, 9:58 AM IST
ಕಾನ್ಪುರ: ರೈಲು ಹಳಿಗಳ ಮೇಲೆ ಎಲ್ಪಿಜಿ ಸಿಲಿಂಡರ್ ಇಟ್ಟು ರೈಲು ಸ್ಫೋಟಿಸುವ ಯತ್ನ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ ‘ಪ್ರಯಾಗರಾಜ್ನಿಂದ ಭಿವಾನಿ ಕಡೆಗೆ ಹೋಗುತ್ತಿದ್ದ ಕಾಳಿಂದಿ ಎಕ್ಸ್ಪ್ರೆಸ್ ಅನ್ನು ಗುರಿಯಾಗಿಸಿ ದುಷ್ಕರ್ಮಿಗಳ ತಂಡ ಇಲ್ಲಿನ ಶಿವರಾಜ್ಪುರ ಪ್ರದೇಶದ ಹಳಿಗಳ ಮೇಲೆ ಎಲ್ಪಿಜಿ ಸಿಲಿಂಡರ್ ಇಟ್ಟು ಹಳಿತಪ್ಪಿಸಲು ಯತ್ನಿಸಲಾಗಿದೆ ಆದರೆ ಅದೃಷ್ಟವಶಾತ್ ಯಾವುದೇ ರೈಲು ಎಲ್ಪಿಜಿ ಸಿಲಿಂಡರ್ ಗೆ ಡಿಕ್ಕಿ ಹೊಡೆದಿದ್ದು ಪರಿಣಾಮ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಹೇಳಿದ್ದಾರೆ.
ಅಲ್ಲದೆ ರೈಲ್ವೆ ಹಳಿಯಲ್ಲಿ ಎಲ್ಪಿಜಿ ಸಿಲಿಂಡರ್ ಮತ್ತು ಪೆಟ್ರೋಲ್ ಬಾಟಲಿಗಳು ಪತ್ತೆಯಾಗಿದ್ದು ಇದು ಸಾಮಾನ್ಯ ವಿಷಯವಲ್ಲ ಇದರ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಈ ಹಿಂದೆಯೂ ಉತ್ತರ ಪ್ರದೇಶದ ಹಲವೆಡೆ ರೈಲು ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟು ರೈಲು ಹಳಿ ತಪ್ಪಿಸುವ ಕೃತ್ಯ ಎಸೆಗಲಾಗಿತ್ತು ಎಂದು ಹೇಳಲಾಗಿದೆ.
ಭಾನುವಾರ ಬೆಳ್ಳಂಬೆಳಗ್ಗೆ ಹಳಿ ಮೇಲೆ ಇಟ್ಟ ಸಿಲಿಂಡರ್ಗೆ ರೈಲು ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಸಿಲಿಂಡರ್ ಹಳಿಯಿಂದ ದೂರ ಎಸೆಯಲ್ಪಟ್ಟಿದೆ ಹಾಗಾಗಿ ಸಂಭವನೀಯ ಅವಘಡ ತಪ್ಪಿದೆ ಎಂದು ಹೇಳಲಾಗಿದೆ.
ಘಟನೆ ಕುರಿತು ಮಾಹಿತಿ ಪಡೆದ ಕೂಡಲೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದು ಜೊತೆಗೆ ವಿಧಿವಿಜ್ಞಾನ ತಂಡವನ್ನು ಸಹ ಕರೆಸಲಾಗಿದೆ, ರೈಲ್ವೇ ರಕ್ಷಣಾ ಪಡೆ (ಆರ್ಪಿಎಫ್) ಕೂಡ ಈ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಎಲ್ಪಿಜಿ ಸಿಲಿಂಡರ್ ಹಳಿಗಳ ಮೇಲೆ ಇಟ್ಟಿರುವುದನ್ನು ಕಂಡ ಲೋಕೋ ಪೈಲಟ್ ತುರ್ತು ಬ್ರೇಕ್ ಹಾಕಿದ್ದಾರೆ ಆದರೂ ರೈಲು ಸಿಲಿಂಡರ್ ಗೆ ಡಿಕ್ಕಿ ಹೊಡೆದು ಸಿಲಿಂಡರ್ ದೂರ ಎಸೆಯಲ್ಪಟ್ಟಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಹರೀಶ್ ಚಂದ್ರ ಹೇಳಿದ್ದಾರೆ.
ಘಟನೆ ಸಂಬಂಧ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು ತಪ್ಪಿತಸ್ಥರನ್ನು ಆದಷ್ಟು ಬೇಗ ಪತ್ತೆ ಹಚ್ಚಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: Dilli Babu: ಸೂಪರ್ ಹಿಟ್ ಸಿನಿಮಾಗಳಿಗೆ ಬಂಡವಾಳ ಹಾಕಿದ್ದ ಖ್ಯಾತ ನಿರ್ಮಾಪಕ ಇನ್ನಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.