Hubli; ದೀಪಾವಳಿ ವೇಳೆಗೆ ರಾಜ್ಯ ಸರ್ಕಾರ ಢಮಾರ್…: ಭವಿಷ್ಯ ನುಡಿದ ಸಿ.ಟಿ.ರವಿ
Team Udayavani, Sep 9, 2024, 12:50 PM IST
ಹುಬ್ಬಳ್ಳಿ: ಇದೊಂದು ಸುಳ್ಳು ಲೆಕ್ಕ, ಕಳ್ಳ ಬಿಲ್ ನ ಭ್ರಷ್ಟಾಚಾರ ಸರ್ಕಾರವಾಗಿದ್ದು, ಹಗರಣ ಹಾಗೂ ಕಾಂಗ್ರೆಸ್ ನ ಆಂತರಿಕ ಕಚ್ಚಾಟದಿಂದಾಗಿ ದೀಪಾವಳಿ ವೇಳೆಗೆ ರಾಜ್ಯ ಸರ್ಕಾರ ಢಮಾರ್ ಖಚಿತ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ (C.T.Ravi) ತಿಳಿಸಿದರು.
ಇಲ್ಲಿನ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಿಎಂ ಸಿದ್ದರಾಮಯ್ಯ (Siddaramaiah) ಕೆಳಗಿಳಿಯುವುದು ಖಚಿತ ಎಂಬ ನಿಟ್ಟನಲ್ಲಿ ಕಾಂಗ್ರೆಸ್ ನಲ್ಲಿ ಡಜನ್ ಆಕಾಂಕ್ಷಿಗಳು ಸಕ್ರಿಯರಾಗಿದ್ದಾರೆ. ಬಾಹ್ಯವಾಗಿ ಸಿಎಂ ಬೆಂಬಲ ಎನ್ನುತ್ತಲೇ ಆಂತರಿಕವಾಗಿ ಸಿದ್ದು ಕೆಳಗಿಳಿಯುವುದು ಯಾವಾಗ ಎಂದು ಎದುರು ನೋಡುತ್ತಿದ್ದಾರೆ. ಸರ್ಕಾರದ ಆಯುಷ್ಯ ಸಂಕ್ರಾಂತಿವರೆಗೆ ಎಂಬುದು ದೂರವಾಯಿತು, ದೀಪಾವಳಿಗೆ ಈ ಸರ್ಕಾರ ಢಮಾರ್ ಖಚಿತ ಎಂದರು.
ಮುಂದಿನ ದಿನಗಳಲ್ಲಿ ಹೊಸ ಸಿಎಂ ಬರುತ್ತಾರೋ, ಹೊಸ ಸರ್ಕಾರ ಬರುತ್ತದೋ? ಕೆಲ ವಿಷಯಗಳನ್ನು ಕಾಲವೇ ನಿರ್ಣಯಿಸುತ್ತದೆ. ಕಾದು ನೋಡಿ ಎಂದು ಸಿ.ಟಿ ರವಿ ಹೇಳಿದರು.
ಹಿಂದೂಗಳು ಸಂಘಟಿತರಾಗದಿದ್ದರೆ, ನಮ್ಮ ಶಕ್ತಿ ಕುಂದಿದರೆ ಮತ್ತೊಂದು ಬಾಂಗ್ಲಾ, ಪಾಕ್ ಆಗಲಿದೆ ಎಂದ ಅವರು, ಹುಬ್ಬಳ್ಳಿ ಚನ್ನಮ್ಮ ಮೈದಾನದಲ್ಲಿ 30 ವರ್ಷಗಳ ಹಿಂದೆ ಚನ್ನಮ್ಮ ಮೈದಾನದಲ್ಲಿ ರಾಷ್ಟ್ರಧ್ವಜ ಹೋರಾಟ ಮಾಡಿ ಯಶಸ್ವಿಯಾಗಿದ್ದ ನಾವು ಇದೀಗ ಅದೇ ಮೈದಾನದಲ್ಲಿ ಭಗವಾಧ್ವಜ ಹಾರಿಸಿದ್ದೇವೆ ಎಂದರು.
ಅರ್ಕಾವತಿ, ವಾಲ್ಮೀಕಿ, ಮುಡಾ ಹೀಗೆ ಸಾಲು, ಸಾಲು ಹಗರಣ, ಭ್ರಷ್ಟಾಚಾರದ ಸರ್ಕಾರ ಇದಾಗಿದೆ. ಶೇ.100 ಭ್ರಷ್ಟಾಚಾರದ ಸರ್ಕಾರ ಇದು. ಈ ಸರ್ಕಾರ ಉಳಿಯಬಾರದು. ತಮ್ಮ ಹಗರಣಗನ್ನು ಮುಚ್ಚಿಕೊಳ್ಳಲು ಸರ್ಕಾರ ಬಿಜೆಪಿ ಕಾಲದ ಹಗರಣ ತನಿಖೆ ಎಂಬ ಬೆದರಿಕೆಗೆ ಮುಂದಾಗಿದೆ. ತನಿಖೆ ಮಾಡಲಿ ಬೇಡ ಎನ್ನುವವರು ಯಾರು? ತಪ್ಪು ಮಾಡಿದವರು ಯಾರೇ ಇರಲಿ ಶಿಕ್ಷೆ ಆಗಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.