Shimoga;ಒಂದೆಡೆ ಬೆಂಬಲ,ಮತ್ತೊಂದೆಡೆ ಸಿಎಂಪದವಿ ಹಂಬಲ: ಕಾಂಗ್ರೆಸ್‌ ವಿರುದ್ದ ಈಶ್ವರಪ್ಪ ಟೀಕೆ


Team Udayavani, Sep 9, 2024, 1:21 PM IST

eshwarappa

ಶಿವಮೊಗ್ಗ: ಎಲ್ಲರೂ ಮುಖ್ಯಮಂತ್ರಿ ಸ್ಥಾನದ ಹಿಂದೆ ಬಿದ್ದಿದ್ದಾರೆ. ನೀವು ಯಾರಾದರೂ ಮುಖ್ಯಮಂತ್ರಿಯಾಗಿ ನಮಗೆ ಬೇಜಾರಿಲ್ಲ. ಸಿಎಂ ರೇಸ್ ನಲ್ಲಿ ಸಿದ್ದರಾಮಯ್ಯ (Siddaramaiah) ಬಿಟ್ಟು 135 ಜನ ಹೋಗಲಿ ಅಭ್ಯಂತರವಿಲ್ಲ. ಪಟ್ಟಿ ಹೇಳುತ್ತಾ ಹೋದರೆ ಚುನಾವಣೆ ಲಿಸ್ಟ್ ರೀತಿ ಆಗುತ್ತದೆ. ಒಂದು ಕಡೆ ಬೆಂಬಲ ಎನ್ನುತ್ತಾರೆ ಇನ್ನೊಂದು ಕಡೆ ಹಂಬಲ ಮಾಡುತ್ತಿದ್ದಾರೆ. ಸಂವಿಧಾನಕ್ಕೆ ಮಾಡಿದ ಅಪಮಾನ ಇದು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ (K. S. Eshwarappa) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ರಾಜೀನಾಮೆ ಕೋಡಬೇಕಿತ್ತು. ನನ್ನ ಮೇಲೆ ಅಪಾದನೆ ಬಂದಾಗ ರಾಜೀನಾಮೆ ಕೊಟ್ಟೆ. ಜಾರ್ಜ್ ಸಹ ರಾಜೀನಾಮೆ ಕೊಟ್ಟಿದ್ದರು ನಂತರ ಮಂತ್ರಿ ಸಹ ಆದರು. ಆದರೆ ತೀರ್ಪು ಬಂದರೂ ರಾಜೀನಾಮೆ ಕೊಡಲ್ಲ ಎನ್ನುತ್ತಾರೆ. ಸಿದ್ದರಾಮಯ್ಯ ನವರು ತಪ್ಪಿತಸ್ಥರಲ್ಲವೆಂದು ತಿರ್ಪು ಬರಲೆಂದು ಬೇಡಿಕೊಳ್ಳುತ್ತೇನೆ. ಕಾಂಗ್ರೆಸ್ ಸರ್ಕಾರವೇ ಐದು ವರ್ಷ ಆಡಳಿತ ಮಾಡಲಿ ಜನ ಆಯ್ಕೆ ಮಾಡಿದ್ದಾರೆ. ಸಿಎಂ ರಾಜೀನಾಮೆ ನೀಡಿದ ಮೇಲೆ ಇವರ ಯಕ್ಷಗಾನ ನೋಡಬೇಕು ಎಂದರು.

ಡಿಸಿಎಂ ಫಾರಿನ್ ಬೇಕಾದರೂ ಹೋಗಲಿ ಎಲ್ಲಾದರೂ ಹೋಗಲಿ. ಬಂಡೆ ತರ ನಿಲ್ಲುತ್ತಾರೋ, ತಲೆ ಮೇಲೆ ಬಂಡೆ ಹಾಕುತ್ತಾರೋ ನೋಡೊಣ ಎಂದರು.

ಸಿದ್ದು ಮುಸ್ಲಿಂ ಓಲೈಕೆ

ಸಿಎಂ ಹಣೆಗೆ ಕುಂಕುಮವೇ ಹಚ್ಚುತ್ತಿರಲಿಲ್ಲ ಈಗ ದೇವಸ್ಥಾನಕ್ಕೆ ಹೋಗಿ ಕುಂಕುಮ ಹಚ್ಚಿಕೊಳ್ಳುತ್ತಿದ್ದಾರೆ. ಮುಸ್ಲಿಮರಿಗಾಗಿ ನಾಟಕೀಯವಾಗಿ ಸಿದ್ದರಾಮಯ್ಯ ಬದುಕುತಿದ್ದಾರೆ. ಸಿದ್ದರಾಮಯ್ಯ ಪೂರ್ಣವಾಗಿ ಮುಸ್ಲಿಂಮರಿಗೆ ಒಪ್ಪಿಸಿಕೊಂಡಿದ್ದಾರೆ. ಈ ಹಿಂದೆ ದೇವೇಗೌಡರು ಹೀಗೆ ಮಾಡಿದ್ದರು. ಮುಸ್ಲಿಂರನ್ನು ಸಂತೃಪ್ತಿಪಡಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಪೇಟ, ಕುಂಕುಮ ಇಟ್ಟುಕೊಳ್ಳಲು ಯಾಕೆ ಹಿಂದೆ ಸರಿಯುತ್ತೀರಿ. ಸಂಕಟ ಬಂದಾಗ ವೆಂಕಟರಮಣ ಎನ್ನುವಂತೆ ಇರಬಾರದು. ರಾಧಾಕೃಷ್ಣ ಎನ್ನುವರಿಗೆ ಸರ್ಕಾರವೇ ಪ್ರಶಸ್ತಿ ಆದೇಶ ಮಾಡಿತ್ತು. ಎಸ್‌ ಡಿಪಿಐ ನವರು ಹೇಳಿದ ತಕ್ಷಣ ಪ್ರಶಸ್ತಿ ತಡೆಹಿಡಿದಿದ್ದೀರಿ. ಕೂಡಲೇ ರಾಜ್ಯ ಸರ್ಕಾರ ಪ್ರಶಸ್ತಿ ಕೊಡಬೇಕು. ಐವಾನ್ ಡಿಸೋಜಾ ಮೇಲೆ ಏನು ಕ್ರಮ ಕೈಗೊಂಡಿದ್ದೀರಾ ಹೇಳಿ ಎಂದು ಪ್ರಶ್ನಿಸಿದರು.

ದೇವರ ಪ್ರಸಾದ ಕೊಡುವಾಗ ಆರೋಗ್ಯ ಇಲಾಖೆಯಿಂದ ಪರೀಕ್ಷೆ ಮಾಡಬೇಕು ಎನ್ನುತ್ತಾರೆ. ರಂಜಾನ್ ಮಾಡುವಾಗ ಸಹ ಆಹಾರ ಪರೀಕ್ಷೆ ಮಾಡುತ್ತೀರಾ? ನೀವು ಎಷ್ಟೇ ಮುಸ್ಲಿಂಮರ ವೋಟು ಪಡೆದರೂ ದೇಶ ನಮ್ಮ ಕೈಯಲ್ಲೇ ಇರುತ್ತದೆ. ಹೆಚ್ಚು ಎಂಪಿ, ಎಂಎಲ್ಎಗಳು ನಮ್ಮವರೇ ಇದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಪರಿಹಾರಕ್ಕೆ ಆಗ್ರಹಿಸಿ ಜೈಲ್‌ ಭರೋ ಪ್ರತಿಭಟನೆ

ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಹೊರಬರಲು ಚಂದ್ರಶೇಖರನ್ ಕಾರಣ. ಈ ಭ್ರಷ್ಟಾಚಾರದ ಬಗ್ಗೆ ತನಿಖೆ ಮುಂದುವರೆದಿದೆ. ತನ್ನ ಕುಟುಂಬದ ಪರಿಸ್ಥಿತಿ ಸರಿ ಇಲ್ಲದಿದ್ದರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರ ಪರಿಹಾರ ಒಂದು ರೂ. ಕೂಡ ಇನ್ನೂ ನೀಡಿಲ್ಲ. 25 ಲಕ್ಷ ರೂ. ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಹೇಳಿತ್ತು. ನಾನು ಈಗಾಗಲೇ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹಾದೇವಪ್ಪನವರಿಗೆ ದೂರವಾಣಿ ಮೂಲಕ ಮಾತನಾಡಿದೆ. ನಾನು ಈ ಬಗ್ಗೆ ಗಮನ ನೀಡುತ್ತೇನೆ ಎಂದಿದ್ದರು. ಮುಖ್ಯಮಂತ್ರಿಗಳು ಪರಿಹಾರದ ಹಣ ನೀಡಲು ತಿಳಿಸಿದ್ದಾರೆ ಎಂದಿದ್ದರು. ಇದು ಹೇಳಿ ಹತ್ತು ದಿನಗಳಾಗಿವೆ. ಆದರೂ ಈವರೆಗೂ ಪರಿಹಾರದ ಹಣ ನೀಡಿಲ್ಲ. ಹೀಗಾಗಿ ನಾವು ಹಿಂದೆ ಹೇಳಿದಂತೆ ರಾಷ್ಟ್ರಭಕ್ತ ಬಳಗದಿಂದ 5 ಲಕ್ಷ ರೂ. ಪರಿಹಾರ ನೀಡಲಿದ್ದೇವೆ ಎಂದು ಈಶ್ವರಪ್ಪ ಹೇಳಿದರು.

ಸಮಾಜಕ್ಕೋಸ್ಕರ ಜೀವನವನ್ನೇ ಮುಡುಪಾಗಿಟ್ಟವರಿಗೆ ನಾವು ನೀಡುತ್ತೇವೆ. ಸೆ. 20 ರವರೆಗೆ ನಮ್ಮ ಬೇಡಿಕೆ ಈಡೇರಿಸದೆ ಇದ್ದರೆ ಜೈಲ್ ಭರೋ ಚಳವಳಿ ಹಮ್ಮಿಕೊಳ್ಳಲಿದ್ದೇವೆ. ನಮಗೆ ಜೈಲಿಗೆ ಹೋಗುವ ಚಟವಿಲ್ಲ. ಆದರೆ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಲಿ ಎಂಬುದೇ ನಮ್ಮ ಉದ್ದೇಶ. ರಾಜ್ಯ ಸರ್ಕಾರ ಬದುಕಿದ್ದರೆ ಪರಿಹಾರದ ಹಣ ಬಿಡುಗಡೆ ಮಾಡಲಿ. ರಾಜ್ಯ ಸರ್ಕಾರ ಕೇವಲ ರಾಜಕೀಯದಲ್ಲಿ ತೊಡಗಿಕೊಂಡಿದೆ. ಮುಖ್ಯಮಂತ್ರಿ ಯಾರು ಆಗಬೇಕೆಂದು ಹಠಕ್ಕೆ ಬಿದ್ದಿದ್ದಾರೆ. ಯಾರಾದರೂ ಸಿಎಂ ಆಗಿ ಹಾಳಾಗಿ ಹೋಗಲಿ. ಮೊದಲು ಚಂದ್ರಶೇಖರನ್ ಕುಟುಂಬಕ್ಕೆ ಪರಿಹಾರದ ಹಣ ನೀಡಿ ಎಂದರು.

ಟಾಪ್ ನ್ಯೂಸ್

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.