PM Modi, ಅಬುಧಾಬಿ ಯುವರಾಜ ಖಾಲೀದ್ ಜತೆ ಹೈದ್ರಾಬಾದ್ Houseನಲ್ಲಿ ದ್ವಿಪಕ್ಷೀಯ ಮಾತುಕತೆ
ಉಭಯ ದೇಶಗಳ ನಡುವಿನ ಭವಿಷ್ಯದ ಬಾಂಧವ್ಯ ಮತ್ತು ಸಹಕಾರದ ಕುರಿತು ಚರ್ಚೆ
Team Udayavani, Sep 9, 2024, 12:57 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸೋಮವಾರ (ಸೆ.09) ಅಬುಧಾಬಿ (Abu Dhabi) ಯುವರಾಜ ಶೇಖ್ ಖಾಲೀದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಭಾರತ ಮತ್ತು ಯುಎಇ ನಡುವಿನ ಬಾಂಧವ್ಯ ವೃದ್ಧಿಗಾಗಿ ಚರ್ಚೆ ನಡೆಸಿರುವುದಾಗಿ ವರದಿ ತಿಳಿಸಿದೆ.
ಅಬು ಧಾಬಿ ಯುವರಾಜ ಶೇಖ್ ಖಾಲೀದ್ ಅವರು ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು, ಈ ಸಂದರ್ಭದಲ್ಲಿ ದ್ವಿಪಕ್ಷೀಯ ಮಾತುಕತೆ (Bilateral Talks) ನಡೆಸಿರುವುದಾಗಿ ವರದಿ ವಿವರಿಸಿದೆ.
ನವದೆಹಲಿಯಲ್ಲಿನ ಹೈದರಾಬಾದ್ ಹೌಸ್ (Hyderabad House) ನಲ್ಲಿ ಯುವರಾಜ ಶೇಖ್ ಖಾಲೀದ್ ಅವರು ಪ್ರಧಾನಿ ನರೇಂದ್ರ ಮೋದಿ ಅವರು, ಆತ್ಮೀಯವಾಗಿ ಸ್ವಾಗತ ಕೋರಿದ್ದು, ಉಭಯ ದೇಶಗಳ ನಡುವಿನ ಭವಿಷ್ಯದ ಬಾಂಧವ್ಯ ಮತ್ತು ಸಹಕಾರದ ಕುರಿತು ಚರ್ಚೆ ನಡೆಸಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.
#WATCH | Delhi: Sheikh Khaled Bin Mohamed Bin Zayed Al Nahyan, Crown Prince of Abu Dhabi meets Prime Minister Narendra Modi at Hyderabad House. pic.twitter.com/jiGWYnTwpB
— ANI (@ANI) September 9, 2024
ಐತಿಹಾಸಿಕ ಬಾಂಧವ್ಯ:
ಭಾನುವಾರ (ಸೆ.08) ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಯುವರಾಜ ಖಾಲೀದ್ ಅವರನ್ನು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯೆಲ್ ಆತ್ಮೀಯವಾಗಿ ಬರಮಾಡಿಕೊಂಡಿದ್ದರು. ಇದೊಂದು ಐತಿಹಾಸಿಕ ಸಂಬಂಧವಾಗಿದ್ದು, ಶೇಖ್ ಖಾಲೀದ್ ಅವರು ಮೊದಲ ಬಾರಿಗೆ ಅಧಿಕೃತವಾಗಿ ಭಾರತಕ್ಕೆ ಭೇಟಿ ನೀಡಿರುವುದಾಗಿ ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.