Jayam Ravi: 15 ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ ಖ್ಯಾತ ನಟ ಜಯಂ ರವಿ
Team Udayavani, Sep 9, 2024, 1:02 PM IST
ಚೆನ್ನೈ: ಕಾಲಿವುಡ್ ಸ್ಟಾರ್ ನಟ ಜಯಂ ರವಿ (Actor Jayam Ravi) ಅವರ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದೆ ಎನ್ನುವ ಸುದ್ದಿ ಕಳೆದ ಕೆಲ ತಿಂಗಳ ಹಿಂದೆ ಕಾಲಿವುಡ್ ವಲಯದಲ್ಲಿ ಹರಿದಾಡಿತ್ತು.
ಇದೀಗ ವಿಚ್ಚೇದನದ ಬಗ್ಗೆ ಸ್ವತಃ ಜಯಂರವಿ ಅವರೇ ಅಧಿಕೃತವಾಗಿ ವಿಚಾರವನ್ನು ಬಹಿರಂಗಪಡಿಸಿದ್ದು 15 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ್ದಾರೆ. ಸೋಮವಾರ(ಸೆ.9ರಂದು) ಪ್ರಕಟಣೆ ಮೂಲಕ ತಮ್ಮ ವಿಚ್ಚೇದನದ ಸುದ್ದಿಯನ್ನು ಅವರು ಬಹಿರಂಗ ಪಡಿಸಿದ್ದಾರೆ.
“ಬಹಳ ಯೋಚನೆ ಮತ್ತು ಚರ್ಚೆಗಳ ನಂತರ ಆರತಿ ಅವರೊಂದಿಗಿನ ನನ್ನ ವಿವಾಹ ಸಂಂಬಂಧಕ್ಕೆ ವಿಚ್ಚೇದನ ನೀಡುವ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಈ ನಿರ್ಧಾರವನ್ನು ತರಾತುರಿಯಿಂದ ಮಾಡಿಲ್ಲ” ಎಂದು ಅವರು ಬರೆದುಕೊಂಡಿದ್ದಾರೆ.
Grateful for your love and understanding.
Jayam Ravi pic.twitter.com/FNRGf6OOo8
— Jayam Ravi (@actor_jayamravi) September 9, 2024
“ಈ ಸಮಯದಲ್ಲಿ ನಮ್ಮ ಗೌಪ್ಯತೆಯನ್ನು ಮತ್ತು ನಮ್ಮ ಕುಟುಂಬದ ಸದಸ್ಯರ ಗೌಪ್ಯತೆಯನ್ನು ಗೌರವಿಸಲು ನಾನು ನಿಮ್ಮೆಲ್ಲರನ್ನು ವಿನಂತಿಸುತ್ತೇನೆ ಮತ್ತು ಈ ನಿಟ್ಟಿನಲ್ಲಿ ಯಾವುದೇ ಊಹಾಪೋಹಾ ಅಥವಾ ಆರೋಪಗಳನ್ನು ಮಾಡದಂತೆ ನಿಮ್ಮೆಲ್ಲರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಮತ್ತು ಈ ವಿಷಯ ಖಾಸಗಿಯಾಗಿ ಉಳಿಯಲಿ” ಎಂದು ಜಯಂ ಬರೆದುಕೊಂಡಿದ್ದಾರೆ.
“ನನ್ನ ಆದ್ಯತೆಯು ಯಾವಾಗಲೂ ಒಂದೇ ಆಗಿರುತ್ತದೆ – ನನ್ನ ಪ್ರೀತಿಯ ಪ್ರೇಕ್ಷಕರಿಗೆ ನನ್ನ ಚಲನಚಿತ್ರಗಳ ಮೂಲಕ ಸಂತೋಷ ಮತ್ತು ಮನರಂಜನೆಯನ್ನು ನೀಡುವುದನ್ನು ಮುಂದುವರಿಸುವುದಾಗಿ” ಅವರು ಹೇಳಿದ್ದಾರೆ.
ಈ ಹಿಂದೆಯೇ ಇಬ್ಬರ ನಡುವಿನ ವಿಚ್ಚೇದನ ವಿಚಾರ ಸುದ್ದಿಯಾಗಿತ್ತು. ಜಯಂ ರವಿ ಅವರ ಪತ್ನಿ ಆರತಿ ಅವರು ಪತಿ ಜಯಂ ಮತ್ತು ಅವರ ಮಕ್ಕಳಾದ ಆರವ್ ಮತ್ತು ಅಯಾನ್ ಅವರ ಫೋಟೋಗಳನ್ನು ಇನ್ಸ್ಟಾಗ್ರಾಮ್ ಖಾತೆಯಿಂದ ಡಿಲೀಟ್ ಮಾಡಿರುವುದು ವಿಚ್ಛೇದನದ ವಿಚಾರದ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿತ್ತು.
ಜಯಂ ರವಿ – ಆರತಿ ಜೂನ್ 2009 ರಲ್ಲಿ ವಿವಾಹವಾಗಿದ್ದರು. ಅವರಿಗೆ ಆರವ್ ಮತ್ತು ಅಯಾನ್ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ
Poonam Kaur: ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ನಟಿ ಪೂನಂ ಗಂಭೀರ ಆರೋಪ
Raghu Thatha: ಓಟಿಟಿಯಲ್ಲಿ ರಿಲೀಸ್ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.