CM Race: ನಾನ್ಯಾಕೆ ಸಿಎಂ ಆಗಬಾರದು, ನಾನೂ ಸಿಎಂ ಆಕಾಂಕ್ಷಿ: ಬಸವರಾಜ ರಾಯರೆಡ್ಡಿ


Team Udayavani, Sep 9, 2024, 3:14 PM IST

ನಾನ್ಯಾಕೆ ಸಿಎಂ ಆಗಬಾರದು, ನಾನೂ ಸಿಎಂ ಆಕಾಂಕ್ಷಿ: ಬಸವರಾಜ ರಾಯರೆಡ್ಡಿ

ಕೊಪ್ಪಳ: ರಾಜ್ಯದಲ್ಲಿ ಸಿಎಂ ಆಗಲು ಕೆಲವರು ಆಸೆ ಪಡುತ್ತಿದ್ದಾರೆ. ಆಸೆ ಪಡುವುದರಲ್ಲಿ ತಪ್ಪಿಲ್ಲ. ನಾನು ಸಿಎಂ ಆಕಾಂಕ್ಷಿ ಎಂದು ಸಿಎಂ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಾತನಾಡಿದ ಅವರು, ಸಿಎಂ ಕುರ್ಚಿ ಖಾಲಿ ಎಲ್ಲಿದೆ? ನನ್ನ ಪ್ರಕಾರ ಸಿಎಂ ಸಿದ್ದರಾಮಯ್ಯ ಉಳಿದ ಅವಧಿಗೂ ಮುಂದುವರಿಯಲಿದ್ದಾರೆ. ಅವರು ಸಿಎಂ ಆಗಿ ಮುಂದುವರಿಯುವುದರಿಂದ ರಾಜ್ಯಕ್ಕೆ ಒಳ್ಳೆಯದಾಗಲಿದೆ. ನನಗೇನು ಸಿದ್ದರಾಮಯ್ಯ ಅವರಿಂದ ಆಗಬೇಕಾಗಿದ್ದೇನಿಲ್ಲ. ಅವರಿಂದ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎನ್ನುವ ಕಾರಣಕ್ಕಾಗಿ ನಾನು ಸಿಎಂ ಪರ ಮಾತನಾಡುತ್ತಿರುವೆ ಎಂದರು.

ಅವರಿಗೆ ಆಡಳಿತದ ಅನುಭವ ಇದೆ. ಆದ್ದರಿಂದ ಅವರೇ ಸಿಎಂ ಆಗಿ ಮುಂದುವರಿಯಲಿ. ಅವರು ಸಿಎಂ ಕುರ್ಚಿಯಿಂದ ಕೆಳಗೆ ಇಳಿಯುತ್ತಾರೆ ಎಂದು ಯಾರು ಹೇಳಿದ್ದಾರೆ? ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬಾರದು ಎಂಬುದು ನನ್ನ ಅಭಿಪ್ರಾಯ. ಅವರ ಮೇಲೆ ಯಾವುದೇ ಭ್ರಷ್ಟಾಚಾರದ ಆರೋಪವಿಲ್ಲ ಸಿಎಂ ಕುರ್ಚಿ ಖಾಲಿ ಇಲ್ಲ. ಯಾರೂ ಆಸೆ ಪಡುವ ಅವಶ್ಯಕತೆ ಇಲ್ಲ ಎಂದರು.

ದೇಶಪಾಂಡೆ ಅವರು ಸಿಎಂ ಆಗುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಸಹಿತ ಸಿದ್ದರಾಮಯ್ಯ ಸಲಹೆ ನೀಡಿದರೆ ಸಿಎಂ ಆಗುವುದಾಗಿ ಹೇಳುದ್ದಾರೆ. ಅವರ ಹೇಳಿಕೆಯಲ್ಲಿ ತಪ್ಪಿಲ್ಲ. ಇನ್ನು ಸತೀಶ್ ಜಾರಕಿಹೊಳಿ, ಎಂ.ಬಿ‌.ಪಾಟೀಲ್ ಹೇಳಿಕೆಯೂ ತಪ್ಪಿಲ್ಲ. ಯಾರೂ ಬೇಕಾದರೂ ಸಿಎಂ ಆಗಬಹುದು. ಈಗ ನಾನು ಇದ್ದೇನೆ. ನಾನೇಕೆ ಸಿಎಂ ಆಗಬಾರದು. ನಾನು ಸಹಿತ 1985 ರಿಂದ ಶಾಸಕನಾಗಿದ್ದೇ‌ನೆ. ಲಿಂಗಾಯತ ಸಮುದಾಯದ ಹಿರಿಯ ನಾಯಕನಾಗಿದ್ದೇನೆ. ಬಿ.ಆರ್. ಪಾಟೀಲ್ ಹೊರತು ಪಡಿಸಿದರೆ ನಾನೇ ಸಮುದಾಯ ಹಿರಿಯ ಶಾಸಕನಾಗಿದ್ದೇನೆ. ನಾನು ಅತಿ ಹೆಚ್ಚು ಚುನಾವಣೆಯಲ್ಲಿ ಗೆದ್ದಿದ್ದೇನೆ. ನಾನು ಸಿಎಂ ಆಗಬಾರದು ಎಂದೇನಿಲ್ಲ‌ ಹೈ.ಕ. ಭಾಗದಲ್ಲಿ ಹೆಚ್ಚು ಬಾರಿ ಗೆದ್ದಿರುವ ವ್ಯಕ್ತಿಯಾಗಿದ್ದೇನೆ. ಪಕ್ಷ ಒಂದು ವೇಳೆ ಜಾತಿವಾರು ಪರಿಗಣಿಸಿದರೆ ಅಥವಾ ಹಿರಿತನ ಪರಿಗಣಿಸಿದರೆ ನನ್ನನ್ನು ಸಿಎಂ ಅಭ್ಯರ್ಥಿಯಾಗಿ ಪರಿಗಣಿಸಿ ಎಂದು ಮನವಿ ಮಾಡುವೆ ಎಂದು ತಿಳಿಸಿದರು.

ಒಕ್ಕಲಿಗರಿಗೆ ಆದ್ಯತೆ ನೀಡಿದರೆ ಡಿ.ಕೆ. ಶಿವಕುಮಾರ್ ಹಾಗೂ ಜಯಚಂದ್ರ ಅವರು ಕೂಡ ಸಿಎಂ ರೇಸ್ ನಲ್ಲಿ ಇದ್ದಾರೆ. ಮುನ್ನಲೆಯ ನಾಯಕರಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಹಿರಿಯ ನಾಯಕರಾಗಿದ್ದು, ಅವರು ಪ್ರಧಾನಮಂತ್ರಿ ಆಗಲಿ ಎಂಬುದು ನನ್ನ ಅಭಿಲಾಷೆ. ರಾಹುಲ್ ಗಾಂಧಿ ಅವರು ಪಿಎಂ ಆಗಬಾರದು ಎಂದಿಲ್ಲ. ಇದು ನನ್ನ ವೈಯಕ್ತಿಕ ಅಭಿಲಾಷೆಯಾಗಿದೆ. ಹೈ‌.ಕ ಭಾಗಕ್ಕೆ ಸಿಎಂ ಸ್ಥಾನ ನೀಡುವುದಾದರೆ ಹಾಗೂ ಲಿಂಗಾಯತ ಸಮುದಾಯಕ್ಕೆ ನೀಡುವುದಾದರೆ ನಾನು ಆಕಾಂಕ್ಷಿಯಾಗಿದ್ದೇನೆ ಎಂದರು.

ಸಿದ್ದರಾಮಯ್ಯ ಮೂರುವರೆ ವರ್ಷ ಸಿಎಂ ಆಗಿರುತ್ತಾರೆ‌. ಯಾವುದೇ ಕಾರಣಕ್ಕೂ ಬದಲಾವಣೆ ಆಗಲ್ಲ. ಒಂದು ವೇಳೆ ಪಕ್ಷ ತೀರ್ಮಾನಿಸಿದರೆ ನಾನು ಆಕಾಂಕ್ಷಿ. ನಾನು ಸಿಎಂ ಕುರ್ಚಿಗೆ ಆಸೆ ಪಡುತ್ತಿದ್ದೇನೆ. ಪಕ್ಷ ಹಾಗೂ ವರಿಷ್ಠರು ತೀರ್ಮಾನಿಸಿದರೆ ಜತೆಗೆ ಸಿದ್ದರಾಮಯ್ಯ ಆಶೀರ್ವಾದ ಮಾಡಿದರೆ ಸಿಎಂ ಆಗುವೆ. ಯಾವಾಗ ಯಾವ ಸಂದರ್ಭದಲ್ಲಿ ಹಾಗೂ ಪ್ರಜಾಪ್ರಭುತ್ವ ಯಾರಿಗೆ ಏನ್ ಲಕ್ ಬರುತ್ತದೆ ಎಂಬುದು ಗೊತ್ತಾಗುವುದಿಲ್ಲ. ಮೋದಿಯವರು ಪ್ರಧಾನಿಯಾಗುತ್ತಾರೆಂದು ಗೊತ್ತಿತ್ತಾ?. ಯಾರು ಏನು ಬೇಕಾದರೂ ಆಗಬಹುದು ಎಂದು ತಿಳಿಸಿದರು.

ಸಿಎಂ ಬದಲಾವಣೆ ಚರ್ಚೆ ಹಾಗೂ ನ್ಯಾಯಾಲಯದಲ್ಲಿ ತೀರ್ಪು ಹೀಗಾಗುತ್ತೇ? ಹಾಗಾಗುತ್ತದೆ ಎಂದು ಊಹೆ ಮಾಡಿಕೊಂಡು ಸಂತೋಷ ಪಟ್ಟುಕೊಳ್ಳಲು ಚರ್ಚೆ ನಡೆಯುತ್ತಿದೆ. ನನಗೆ ಲಾಟರಿ ಹೊಡೆದರೆ ನಾನು ಸಿಎಂ ಆಗುವೆ ಎಂದರು.

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.