China; ರಜೆಯಿಲ್ಲದೆ 104 ದಿನ ಕೆಲಸ ಮಾಡಿದ ವ್ಯಕ್ತಿ ಸಾವು; ಸಿಕ್ಕ ಪರಿಹಾರ ಎಷ್ಟು ಗೊತ್ತಾ?


Team Udayavani, Sep 9, 2024, 6:07 PM IST

China; ರಜೆಯಿಲ್ಲದೆ 104 ದಿನ ಕೆಲಸ ಮಾಡಿದ ವ್ಯಕ್ತಿ ಸಾವು; ಸಿಕ್ಕ ಪರಿಹಾರ ಎಷ್ಟು ಗೊತ್ತಾ?

ಬೀಜಿಂಗ್: ಪ್ರತಿಯೊಂದು ಕಂಪೆನಿಯಲ್ಲಿ ಉದ್ಯೋಗಿಗಳಿಗೆ ವಾರದ ರಜೆ ಇರುತ್ತದೆ. ಕೆಲವು ಕಂಪೆನಿಗಳಲ್ಲಿ ವಾರದಲ್ಲಿ ಎರಡು ದಿನ ರಜೆಯೂ ಸಿಗುತ್ತದೆ. ಆದರೆ ‌ ಯಾವುದೇ ರಜೆ ಪಡೆಯದೆ ಸತತ ಕೆಲಸ ಮಾಡಿದರೆ ಏನಾಗುತ್ತದೆ? 104 ದಿನಗಳ ಕಾಲ ರಜೆ ಪಡೆಯದೆ ಕೆಲಸ ಮಾಡಿದ ಚೀನಾದ ವ್ಯಕ್ತಿಯೊಬ್ಬರು ಅಂಗಾಂಗ ವೈಫಲ್ಯದಿಂದ (Organ Failure) ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.

30 ವರ್ಷದ ಚೀನಾದ ವ್ಯಕ್ತಿಯೊಬ್ಬರು ಕೇವಲ ಒಂದು ದಿನದ ರಜೆ ಪಡೆದು ಸತತ 104 ದಿನ ಕೆಲಸ ಮಾಡಿ ಅಂಗಾಂಗ ವೈಫಲ್ಯದಿಂದ ಬಳಲಿ ಸಾವನ್ನಪ್ಪಿದ್ದಾರೆ. ಆತನ ಕೆಲಸದ ಮಾಲೀಕ ಆತನ ಸಾವಿಗೆ 20 ಪ್ರತಿಶತದಷ್ಟು ಹೊಣೆಗಾರ ಎಂದು ನ್ಯಾಯಾಲಯವು ತೀರ್ಪು ನೀಡಿದೆ.

ವೃತ್ತಿಯಲ್ಲಿ ಪೈಂಟರ್‌ ಆಗಿದ್ದ ಅಬಾವೊ ಎಂಬಾತ ಶ್ವಾಸಕೋಶದ ಸೋಂಕಿಗೆ ಒಳಗಾಗಿದ್ದ. ಅಂತಿಮವಾಗಿ ಅದು 2023 ರ ಜೂನ್ ನಲ್ಲಿ ಅವರ ಸಾವಿಗೆ ಕಾರಣವಾಯಿತು ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ.

ವರದಿಯ ಪ್ರಕಾರ, ಅಬಾವೊ ಕಳೆದ ವರ್ಷ ಫೆಬ್ರವರಿಯಲ್ಲಿ ಒಪ್ಪಂದಕ್ಕೆ ಸಹಿ ಹಾಕಿದ್ದರು. ಝೆಜಿಯಾಂಗ್ ಪ್ರಾಂತ್ಯದ ಝೌಶಾನ್‌ ನಲ್ಲಿ ಕೆಲಸ ಒಪ್ಪಿಕೊಂಡಿದ್ದರು. ಫೆಬ್ರವರಿಯಿಂದ ಮೇವರೆಗೆ ಅವರು ಪ್ರತಿದಿನ ಕೆಲಸ ಮಾಡಿದ್ದಾರೆ. ಮಧ್ಯದಲ್ಲಿ ಏಪ್ರಿಲ್‌ 6ರಂದು ಒಂದು ದಿನ ಮಾತ್ರ ರಜೆ ಪಡೆದಿದ್ದರು. ಮೇ 25ರಂದು ಅನಾರೋಗ್ಯವೆಂದು ರಜೆ ಮಾಡಿದ್ದರು. ಆದರೆ ಅಲ್ಲಿಂದ ಅವರ ಆರೋಗ್ಯ ಪರಿಸ್ಥಿತಿ ಹದಗೆಟ್ಟಿತ್ತು. ಹೀಗಾಗಿ ಮೇ 28ರಂದು ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ಜೂನ್‌ 1ರಂದು ಅಬಾವೊ ಅಸುನೀಗಿದ್ದರು. ಅವರು ನ್ಯುಮೋಕೊಕಲ್ ಸೋಂಕು ಮತ್ತು ಉಸಿರಾಟದ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.

ಅಬಾವೊ ಸಾವಿನ ಬಳಿಕ ಮಾಲಿಕನ ನಿರ್ಲಕ್ಷ್ಯದ ವಿರುದ್ದ ಅಬಾವೊ ಕುಟುಂಬ ಕಾನೂನು ಸಮರ ಆರಂಭಿಸಿತ್ತು. ಝೌಶನ್ ಇಂಟರ್ಮೀಡಿಯೇಟ್ ಪೀಪಲ್ಸ್ ಕೋರ್ಟ್ ಅಬಾವೊ ಅವರ ಸಾವಿಗೆ ಕಂಪನಿಯು ಶೇಕಡಾ 20 ರಷ್ಟು ಹೊಣೆಗಾರ ಎಂದು ತೀರ್ಪು ನೀಡಿದೆ. 104 ದಿನಗಳ ಕೆಲಸದ ವಿಸ್ತರಣೆಯು ಚೀನೀ ಕಾರ್ಮಿಕ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತೀರ್ಪು ನೀಡಿದೆ. ನಿಯಮದ ಪ್ರಕಾರ ಗರಿಷ್ಠ ಎಂಟು ಕೆಲಸದ ಸಮಯವನ್ನು ಮತ್ತು ವಾರಕ್ಕೆ ಸರಾಸರಿ 44 ಗಂಟೆಗಳ ಕಾಲ ಕಡ್ಡಾಯವಾಗಿದೆ.

ವರದಿಯ ಪ್ರಕಾರ, ನ್ಯಾಯಾಲಯವು ಅಬಾವೊ ಅವರ ಕುಟುಂಬಕ್ಕೆ 4,00,000 ಯುವಾನ್ (ಅಂದಾಜು ರೂ 47,46,000) ಪರಿಹಾರವನ್ನು ನೀಡಲು ಸೂಚಿಸಿದೆ. ಜೊತೆಗೆ 10,000 ಯುವಾನ್ (ಅಂದಾಜು ರೂ 1,17,000) ಭಾವನಾತ್ಮಕ ಯಾತನೆಗಾಗಿ ನೀಡಿತು. ಕಂಪನಿಯ ಮೇಲ್ಮನವಿ ವಿಫಲವಾಗಿದೆ.

ಟಾಪ್ ನ್ಯೂಸ್

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.