Arsikere; ಆಕಾಶದಲ್ಲಿ ಶೀಘ್ರ ದೊಡ್ಡ ಸುದ್ದಿ ಘಟಿಸಲಿದೆ: ಕೋಡಿ ಶ್ರೀ ಸ್ಫೋಟಕ ಭವಿಷ್ಯ

ಸರ್ಕಾರದ ಬಗ್ಗೆ ಮತ್ತೆ ಸ್ಫೋಟಕ ಭವಿಷ್ಯ ನುಡಿದ ಶ್ರೀ; ಮಾಡಾಳು ಮತ್ತೊಂದು ಗೌರಿ ಪ್ರತಿಷ್ಠಾಪನೆಗೆ ಬೇಸರ

Team Udayavani, Sep 9, 2024, 6:13 PM IST

ಆಕಾಶದಲ್ಲಿ ಶೀಘ್ರ ದೊಡ್ಡ ಸುದ್ದಿ ಘಟಿಸಲಿದೆ: ಕೋಡಿ ಶ್ರೀ ಸ್ಫೋಟಕ ಭವಿಷ್ಯ

ಹಾಸನ: ರಾಜಕೀಯದಲ್ಲಿ ಅದಲು ಬದಲು, ಸೋಲು-ಗೆಲುವು, ಕೇಂದ್ರ ಹಾಗೂ ರಾಜ್ಯದಲ್ಲೂ ಆಗಲಿದೆ ಎಂದು ಶ್ರೀಕ್ಷೇತ್ರ ಹಾರನಹಳ್ಳಿ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಶ್ರೀ ಮಠದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದವರ ಬದಲಾವಣೆ ಆಗಬಹುದು. ಆಕಾಶದಲ್ಲಿ ಘಟಿಸುವ ದೊಡ್ಡ ಸುದ್ದಿ ಇದೆ ಎಂದು ಹೇಳುವ ಮೂಲಕ ಕುತೂಹಲ ಜತೆಗೆ ಆತಂಕ ಹೆಚ್ಚುವಂತಹ ಭವಿಷ್ಯ ನುಡಿದರು.

ಅಭಿಮನ್ಯುವಿನ ಬಿಲ್ಲನ್ನು ಮೋಸದಿಂದ ಕರ್ಣನ ಕೈಯಲ್ಲಿ ದಾರ ಕಟ್‌ ಮಾಡಿಸುತ್ತಾರೆ. ಮಹಾಭಾರತದಲ್ಲಿ ಕೃಷ್ಣ ಇದ್ದ, ಗದಾಯುದ್ಧದಲ್ಲಿ ಭೀಮ ಗೆದ್ದ. ಇದೀಗ ಕೃಷ್ಣ ಇಲ್ಲದೆ ದುರ್ಯೋಧನ ಗೆಲ್ತಾನೆ ಎಂದು ಹೇಳಿದ್ದೇನೆ. ಅದರ ಅರ್ಥ ಆಮೇಲೆ ಹೇಳುವೆ ಎನ್ನುವ ಮೂಲಕ ರಾಜಕೀಯವಾಗಿ ನಾಯಕರಿಗೆ ಏಳು-ಬೀಳು, ಹಿನ್ನಡೆ-ಮುನ್ನಡೆಯ ಭವಿಷ್ಯವನ್ನು ಮಹಾ ಭಾರತದ ಪ್ರಸಂಗ ಉದ್ಧರಿಸಿ ಹೇಳಿದರು.

ಮಳೆಯಿಂದ ಹೆಚ್ಚು ತೊಂದರೆ ಇದೆ. ಒಂದು ಆಕಾಶ ತತ್ವದ ಪ್ರಕಾರ ತೊಂದರೆ ಆಗಬಹುದು. ಅದು ರಾಜನ ಮೇಲೆ ಭಂಗ ಬೀರಲಿದೆ. ಪ್ರಾಕೃತಿಕ ದೋಷ ಇದೆ, ಐದು ಕಡೆಯೂ ಅಂದರೆ ಭೂಮಿ, ಅಗ್ನಿ, ವಾಯು, ಆಕಾಶ ಎಲ್ಲ ಕಡೆಯಿಂದಲೂ ತೊಂದರೆ ಆಗುತ್ತದೆ ಎಂದರು.

ನಮ್ಮದೇ ಮೂಲಗೌರಿ: ಇದೇ ವೇಳೆ ತಾಲೂಕಿನ ಮಾಡಾಳು ಸ್ವರ್ಣಗೌರಿ ವಿಷಯದಲ್ಲಿ ದಾರಿ ತಪ್ಪಿಸುವ ಕೆಲಸ ಆಗುತ್ತಿದೆ ಎಂದು ಶ್ರೀಗಳು ಬೇಸರ ವ್ಯಕ್ತಪಡಿಸಿದರು.

ಶ್ರೀ ಮಠದ ಮೂಲ ಸ್ವಾಮೀಜಿ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರು 2 ಕೋಟಿ ತಪಸ್ಸು ಮಾಡಿ ಪವಾಡ ಶಕ್ತಿಯುಳ್ಳ ಮೂಗುತಿಯನ್ನು ಮುದ್ದೇಗೌಡರಿಗೆ ನೀಡಿದ್ದರು. ಪದ್ಧತಿ, ರೂಢಿ, ಸಂಸ್ಕೃತಿ ಇರುವ ಹಿಂದೂ ಪಂಚಾಂಗದ ಪ್ರಕಾರವೇ ನಾವು ಹಿಂದಿನಿಂದಲೂ ಸ್ವರ್ಣಗೌರಿ ಉತ್ಸವ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.

ಹಿರಿಯ ಸ್ವಾಮೀಜಿ ಅವರು ನೀಡಿರುವ ಮೂಗುತಿಯನ್ನು ಸ್ವರ್ಣಗೌರಿಗೆ ಧಾರಣೆ ಮಾಡಿದರೆ ಸಾಕ್ಷಾತ್ ದೇವರ ಸ್ವರೂಪವೇ ಮೂರ್ತಿಯಲ್ಲಿ ಮೈವೆತ್ತಲಿದೆ. ಮೂಗುತಿ ತೊಡಿಸಿದಾಗ ಮೂರ್ತಿಗೆ ಶಕ್ತಿ ಬರಲಿದೆ. ಅದೇ ಹಿನ್ನೆಲೆ, ಶಕ್ತಿ ಇರುವ ಗೌರಿಯನ್ನು ಮಾಡಾಳು ಗ್ರಾಮದ ಚನ್ನಬಸವೇಶ್ವರ ಟಾಕೀಸ್ ಹತ್ತಿರದ ಯರೇಹಳ್ಳಿ ರಸ್ತೆ ಪಕ್ಕದ ನೂತನ ದೇವಾಲಯದಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. ದೇವಿ ಕನಸಿನಲ್ಲಿ ಬಂದು ನನಗೊಂದು ನೆಲೆ ಕಲ್ಪಿಸು ಎಂದು ಹೇಳಿರುವ ಪ್ರಕಾರ, ಈ ವರ್ಷದಿಂದ ಹೊಸ ನೆಲೆಯಲ್ಲಿ ಸ್ವಣಗೌರಿಯನ್ನು ಪ್ರತಿಷ್ಠಾಪನೆಗೊಳಿಸಲಾಗಿದೆ ಎಂದು ಸ್ವಾಮೀಜಿ ಹೇಳಿದರು.

ಅದೇ ಗ್ರಾಮದಲ್ಲಿ ಮತ್ತೊಂದು ಕಡೆ ಗೌರಮ್ಮನನ್ನು ಪ್ರತಿಷ್ಠಾಪನೆ ಮಾಡಿ ದಾರಿ ತಪ್ಪಿಸುವ ಕೆಲಸ ಆಗುತ್ತಿದೆ ಎಂದು ಬೇಸರ ಹೊರ ಹಾಕಿದರು.

ಆ ಬಗ್ಗೆ ಏನನ್ನೂ ಮಾತನಾಡಲ್ಲ. ಮೂಲ ಗೌರಮ್ಮನಿಗೆ ಜಿಲ್ಲೆ, ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳನ್ನೂ ಭಕ್ತರಿದ್ದಾರೆ. ಗೊಂದಲದಿಂದ ಕರೆ ಕೇಳುತ್ತಿದ್ದಾರೆ. ಇದರ ನಿವಾರಣೆಗಾಗಿ ಬೋರ್ಡ್ ಹಾಕಲು ಬಿಟ್ಟಿಲ್ಲ, ಭಕ್ತರು ಯಾವುದೇ ಗೊಂದಲಕ್ಕೆ ಒಳಗಾಗದೆ ಮೂಲ ಗೌರಿಯ ದರ್ಶನ ಪಡೆದು ಪುನೀತರಾಗುವಂತೆ ಮನವಿ ಮಾಡಿದರು.

ಟಾಪ್ ನ್ಯೂಸ್

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

11

Hasan: 100 ರೂ.ಗೆ ಸ್ನೇಹಿನನ್ನೇ ಹತ್ಯೆಗೈದ ಕಿರಾತಕರು

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

ಸರಕಾರದ ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

State Govt ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

A vehicle caught fire at Shiradi Ghat

Shiradi ಘಾಟ್‌ನಲ್ಲಿ ವಾಹನ ಬೆಂಕಿಗೆ ಆಹುತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.