Mallikarjun Kharge ಕಿಡಿ: ಮಣಿಪುರ ವಿಚಾರದಲ್ಲಿ ಮೋದಿಯ ಹೀನಾಯ ವೈಫಲ್ಯ ಅಕ್ಷಮ್ಯ
ಅಸಮರ್ಥತೆಯನ್ನು ನಾಚಿಕೆಯಿಲ್ಲದೆ ಹೊರಹಾಕುವಲ್ಲಿ ದಾಖಲೆ ನಿರ್ಮಿಸಿದ್ದಾರೆ....
Team Udayavani, Sep 9, 2024, 7:56 PM IST
ಹೊಸದಿಲ್ಲಿ: ಮಣಿಪುರದಲ್ಲಿ ಹಿಂಸಾಚಾರ ಉಲ್ಬಣಗೊಂಡಿದ್ದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರನ್ನು ಕೂಡಲೇ ವಜಾಗೊಳಿಸಬೇಕು ಮತ್ತು ಸೂಕ್ಷ್ಮ ಭದ್ರತಾ ಪರಿಸ್ಥಿತಿಯ ಸಂಪೂರ್ಣ ಜವಾಬ್ದಾರಿಯನ್ನು ಕೇಂದ್ರ ಸರಕಾರ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಸೋಮವಾರ ಒತ್ತಾಯಿಸಿದೆ.ಸುಪ್ರೀಂ ಕೋರ್ಟ್ ಆದೇಶದ ಮಣಿಪುರ ತನಿಖಾ ಆಯೋಗವು ತನ್ನ ತನಿಖೆಯನ್ನು ತ್ವರಿತಗೊಳಿಸಬೇಕು ಎಂದು ಹೇಳಿದೆ.
ಮಣಿಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೀನಾಯ ವೈಫಲ್ಯವನ್ನು ಕ್ಷಮಿಸಲು ಸಾಧ್ಯವಾಗದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ (ಸೆ9) ಎಕ್ಸ್ ಪೋಸ್ಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.
ಶನಿವಾರ ಜಿರಿಬಾಮ್ ಜಿಲ್ಲೆಯಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ ತಾಜಾ ಹಿಂಸಾಚಾರ ವರದಿಯ ಬಳಿಕ ವಿಪಕ್ಷದ ಪ್ರತಿಕ್ರಿಯೆ ಇದದಾಗಿದೆ. ಪೊಲೀಸರ ಪ್ರಕಾರ, ಉಗ್ರರು ವ್ಯಕ್ತಿಯ ಮನೆಗೆ ನುಗ್ಗಿ ನಿದ್ದೆಯಲ್ಲಿದ್ದಾಗಲೇ ಗುಂಡಿಕ್ಕಿ ಹತ್ಯೆಗೈದಿದ್ದಾರೆ. ನಂತರ ಸಮುದಾಯಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆದು ನಾಲ್ಕು ಶಸ್ತ್ರಸಜ್ಜಿತ ವ್ಯಕ್ತಿಗಳ ಸಾವಿಗೆ ಕಾರಣವಾಗಿದೆ.
”ಮಣಿಪುರದ ಮಾಜಿ ರಾಜ್ಯಪಾಲರಾದ ಅನುಸೂಯಾ ಉಯಿಕೇ ಮಣಿಪುರದ ಜನರ ಧ್ವನಿಯನ್ನು ಪ್ರತಿಧ್ವನಿಸಿದ್ದಾರೆ. ಕಲಹ ಪೀಡಿತ ರಾಜ್ಯದ ಜನರು ಅಸಮಾಧಾನಗೊಂಡಿದ್ದಾರೆ ಮತ್ತು ದುಃಖಿತರಾಗಿದ್ದಾರೆ, ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಬೇಕೆಂದು ಅವರು ಬಯಸಿದ್ದರು. ಕಳೆದ 16 ತಿಂಗಳುಗಳಲ್ಲಿ, ಪ್ರಧಾನಿ ಮೋದಿ ಮಣಿಪುರದಲ್ಲಿ ಒಂದೇ ಒಂದು ಸೆಕೆಂಡ್ ಸಮಯ ಕಳೆದಿಲ್ಲ, ರಾಜ್ಯದಲ್ಲಿ ಹಿಂಸಾಚಾರ ಅಡೆತಡೆಯಿಲ್ಲದೆ ಮುಂದುವರೆದಿದ್ದು ಜನರು ಮೋದಿ ಮತ್ತು ಶಾ ಅವರ ಸಹಭಾಗಿತ್ವದ ಪರಿಣಾಮಗಳನ್ನು ಅನುಭವಿಸುತ್ತಿದ್ದಾರೆ” ಕಿಡಿ ಕಾರಿದ್ದಾರೆ.
“ಮಣಿಪುರದ ಬಿಜೆಪಿ ಸಿಎಂ ತಮ್ಮ ದರ್ಜೆಯ ಅಸಮರ್ಥತೆಯನ್ನು ನಾಚಿಕೆಯಿಲ್ಲದೆ ಹೊರಹಾಕುವಲ್ಲಿ ದಾಖಲೆ ನಿರ್ಮಿಸಿದ್ದಾರೆ, ಅವರು ಏಕೀಕೃತ ಕಮಾಂಡ್ ಅನ್ನು ರಾಜ್ಯ ಸರಕಾರಕ್ಕೆ ವರ್ಗಾಯಿಸಿದ್ದಾರೆ” ಎಂದು ಖರ್ಗೆ ಆಕ್ರೋಶ ಹೊರ ಹಾಕಿದ್ದಾರೆ.
“ಪ್ರಧಾನಿ ಅವರಂತೆಯೇ, ಕೇಂದ್ರ ಗೃಹ ಸಚಿವರೂ ಸಹ ಮಣಿಪುರದಲ್ಲಿ ಭದ್ರತೆಯನ್ನು ಖಾತ್ರಿಪಡಿಸುವ ತಮ್ಮ ಸಾಂವಿಧಾನಿಕ ಜವಾಬ್ದಾರಿಯನ್ನು ಬಿಟ್ಟುಕೊಟ್ಟಿದ್ದಾರೆ ಮತ್ತು ರಾಜ್ಯಗಳ ಚುನಾವಣೆಗಳಲ್ಲಿ ರ್ಯಾಲಿಗಳನ್ನು ಉದ್ದೇಶಿಸಿ ರಾಜಕೀಯ ಮತ್ತು ಭಾಷಣದಲ್ಲಿ ನಿರತರಾಗಿದ್ದಾರೆ” ಎಂದು ಖರ್ಗೆ ಕಿಡಿ ಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.