Bengaluru: ಕೊನೆಗೂ 3 ವಿಧೇಯಕಕ್ಕೆ ಗವರ್ನರ ಅಸ್ತು

ಕರ್ನಾಟಕ ಕಂದಾಯ ಕಾಯ್ದೆ ತಿದ್ದುಪಡಿ ವಿಧೇಯಕ ಮತ್ತೆ ವಾಪಸ್‌ ಮಾಡಿದ ರಾಜ್ಯಪಾಲರು

Team Udayavani, Sep 9, 2024, 10:10 PM IST

ಕೊನೆಗೂ 3 ವಿಧೇಯಕಕ್ಕೆ ಗವರ್ನರ ಅಸ್ತು

ಬೆಂಗಳೂರು: ಸರ್ಕಾರ ಹಾಗೂ ರಾಜಭವನದ ಮಧ್ಯೆ ಸೃಷ್ಟಿಯಾಗಿದ್ದ ಭಿನ್ನಸ್ವರ ಕೊಂಚ ಶಮನಗೊಂಡಿರುವ ಲಕ್ಷಣಗಳು ಕಾಣಿಸಿಕೊಳ್ಳಲಾರಂಭಿಸಿದ್ದು, ಈ ಹಿಂದೆ ವಾಪಸ್‌ ಕಳುಹಿಸಿದ್ದ 3 ವಿಧೇಯಕಗಳಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಅಂಗೀಕಾರ ಹಾಕಿದ್ದಾರೆ.

ಕರ್ನಾಟಕ ಸಾರ್ವಜನಿಕ ಪರೀಕ್ಷೆಯಲ್ಲಿನ (ನೇಮಕ) ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ನಿಯಂತ್ರಣ ವಿಧೇಯಕ, ರೇಣುಕಾ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಪೌರಾಡಳಿತ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ. ಈ ಸಂಬಂಧ ಕಳೆದ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಸೂಕ್ತ ಸ್ಪಷ್ಟೀಕರಣದೊಂದಿಗೆ ವಿಧೇಯಕಗಳನ್ನು ರಾಜ್ಯಪಾಲರಿಗೆ ವಾಪಸ್‌ ಕಳುಹಿಸಲಾಗಿತ್ತು.

ರಾಜ್ಯ ಸರ್ಕಾರ ಕಳುಹಿಸಿದ್ದ ಒಟ್ಟು 11 ವಿಧೇಯಕಗಳಿಗೆ ರಾಜ್ಯಪಾಲರು ಸ್ಪಷ್ಟನೆ ಕೇಳಿದ್ದರು. ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ಅನುಮತಿ ಕೊಡುವುದಕ್ಕಿಂತ ಪೂರ್ವದಲ್ಲಿಯೇ ಕೆಲ ವಿಧೇಯಕಗಳನ್ನು ವಾಪಸ್‌ ಕಳುಹಿಸಲಾಗಿತ್ತು. ಇದಾದ ಬಳಿಕ ರಾಜ್ಯಪಾಲರಿಗೆ 2 ಸಲಹೆಗಳನ್ನು ಕಳುಹಿಸಲು ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿತ್ತು. ಈ ಎಲ್ಲ ಹೊಯ್ದಾಟದ ಮಧ್ಯೆಯೇ ಮುಖ್ಯಮಂತ್ರಿಗಳ ಸಲಹೆಗಾರರ ನೇಮಕಕ್ಕೆ ಸಂಬಂಧಪಟ್ಟಂತೆ ‘ಲಾಭದಾಯಕ ಹುದ್ದೆ’ ಕಾಯಿದೆಗೆ ತಿದ್ದುಪಡಿ ಮಾಡಿ ಕಳುಹಿಸಿದ ವಿಧೇಯಕವನ್ನೂ ರಾಜ್ಯಪಾಲರು ವಾಪಸ್‌ ಕಳುಹಿಸಿದ್ದರು.
ಈ 3 ವಿಧೇಯಕಗಳಿಗೆ ಒಪ್ಪಿಗೆ ಸೂಚಿಸಿರುವ ರಾಜ್ಯಪಾಲರು ಕರ್ನಾಟಕ ಕಂದಾಯ ಕಾಯಿದೆ ತಿದ್ದುಪಡಿ ವಿಧೇಯಕಕ್ಕೆ ಸಂಬಂಧಪಟ್ಟಂತೆ ಕೆಲ ಪ್ರಶ್ನೆಗಳನ್ನು ಎತ್ತಿ ಕಡತ ವಾಪಸ್‌ ಕಳುಹಿಸಿದ್ದಾರೆ. ಇದು ಸಚಿವ ಕೃಷ್ಣಬೈರೇಗೌಡ ಅವರ ಆಕ್ರೋಶಕ್ಕೆ ಕಾರಣವಾಗಿದ್ದು,’ ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ತಂದ ವಿಧೇಯಕವನ್ನು ಬಿಜೆಪಿ ರಾಜ್ಯಪಾಲರು ವಾಪಾಸ್‌ ಕಳುಹಿಸಿದ್ದಾರೆ’ ಎಂದು ಟೀಕಿಸಿದ್ದಾರೆ.

ಯಾವಾಗ ಮಂಡನೆ?:
ಕರ್ನಾಟಕ ಸಾರ್ವಜನಿಕ ಪರೀಕ್ಷೆ ವಿಧೇಯಕ 2023ರ ಡಿಸೆಂಬರ್‌ 6ರಂದು ವಿಧಾನಸಭೆಯಲ್ಲಿ ಮಂಡನೆಯಾಗಿ, ಡಿ.13ರಂದು ಅಂಗೀಕಾರಗೊಂಡಿತ್ತು. ಬಳಿಕ ಡಿ.14ರಂದು ವಿಧಾನ ಪರಿಷತ್‌ನಲ್ಲೂ ಅಂಗೀಕಾರವಾಗಿ ರಾಜ್ಯಪಾಲರ ಸಹಿಗೆ ಕಳಿಸಿಕೊಡಲಾಗಿತ್ತು.

ವಿಧೇಯಕ ಕರಡು ತಯಾರಿ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಮುಖ್ಯಮಂತ್ರಿಯವರ ಅಭಿಪ್ರಾಯ, ಕಾನೂನು ಇಲಾಖೆ ಪ್ರಸ್ತಾಪ ಯಾವುದನ್ನೂ ಗಮನಿಸಿದೇ ಗೃಹ ಇಲಾಖೆ ತರಾತುರಿಯಲ್ಲಿ ವಿಧೇಯಕ ಮಂಡಿಸಿದ್ದನ್ನು ರಾಜ್ಯಪಾಲರು ಗಮನಿಸಿ ಸ್ಪಷ್ಟನೆ ಕೇಳಿದ್ದರು. ಈ ವಿಧೇಯಕದ ವ್ಯಾಪ್ತಿ ಸಾಕಷ್ಟು ವಿಸ್ತಾರವಾಗಿರುವುದರಿಂದ ಸ್ವಾಯತ್ತ ಸಂಸ್ಥೆಗಳು, ಪ್ರಾಧಿಕಾರಿಗಳು, ಮಂಡಳಿಗಳು ಅಥವಾ ನಿಗಮಗಳ ಅಭಿಪ್ರಾಯ ಪಡೆಯಬೇಕಾಗುತ್ತದೆ ಎಂದು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ ತನ್ನ ಟಿಪ್ಪಣಿಯಲ್ಲಿ ಉಲ್ಲೇಖೀಸಿತ್ತು. ಆದರೆ, ಅಭಿಪ್ರಾಯ ಪಡೆದಿರಲಿಲ್ಲ ಎಂಬ ಅಂಶವನ್ನು ರಾಜಭವನ ಗುರುತಿಸಿತ್ತು.

ರಾಜ್ಯ ಸರ್ಕಾರ ನಡೆಸುವ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುಚಿತ, ಭ್ರಷ್ಟ ವರ್ತನೆ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ತಡೆಗಟ್ಟಲು ಕಟ್ಟುನಿಟ್ಟಿನ, ಪರಿಣಾಮಕಾರಿ ಕ್ರಮಕೈಗೊಳ್ಳಲು ಈ ವಿಧೇಯಕ ಅಸ್ತ್ರವಾಗಿ ಬಳಕೆಯಾಗುವುದರಿಂದ ಇದು ಮಹತ್ವವಾಗಿದ್ದು, ಪೂರ್ವ ತಯಾರಿ ನಡೆದಿಲ್ಲ ಎಂಬುದು ರಾಜಭವನದ ಆಕ್ಷೇಪವಾಗಿತ್ತು.

ಅದೇ ರೀತಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬಹುಮಹಡಿ ಕಟ್ಟಡದಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚುವರಿ ಮಹಡಿ ಕಟ್ಟಿಕೊಳ್ಳಲು ಅನುಮತಿ ನೀಡುವ ಮೂಲಕ ಬೊಕ್ಕಸ ಭರ್ತಿಗೆ ಯೋಜಿಸಿ ರೂಪಿಸಿದ್ದ ವಿಧೇಯಕಕ್ಕೆ ರಾಜ್ಯಪಾಲರು ತಡೆ ಹಾಕಿದ್ದಾರೆ. ಅಕ್ರಮ-ಸಕ್ರಮವನ್ನು ಬೇರೆ ರೂಪದಲ್ಲಿ ತಂದಿದ್ದೀರಿ, ನಗರದಲ್ಲಿ ಈಗಾಗಲೇ ಮೂಲ ಸೌಕರ್ಯದ ಕೊರತೆ ಇದ್ದು, ಇಂತಹ ತೀರ್ಮಾನ ಮುಂದೆ ಸಮಸ್ಯೆಗೆ ಕಾರಣವಾಗುತ್ತದೆ ಎಂದು ರಾಜಭವನ ಅಪಸ್ವರ ಎತ್ತಿದೆ.

 

ಟಾಪ್ ನ್ಯೂಸ್

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.