ಕರಾವಳಿ ಭಾಗದಲ್ಲಿ ಸರಕಾರಿ ಆಯುರ್ವೇದ ಕಾಲೇಜು: ಆಗ್ರಹ


Team Udayavani, Sep 10, 2024, 6:20 AM IST

ಕರಾವಳಿ ಭಾಗದಲ್ಲಿ ಸರಕಾರಿ ಆಯುರ್ವೇದ ಕಾಲೇಜು: ಆಗ್ರಹ

ಮಂಗಳೂರು: ರಾಜ್ಯದಲ್ಲಿ ವೈದ್ಯಕೀಯ ಕ್ಷೇತ್ರ ದಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಬರುವ ದ.ಕ. ಜಿಲ್ಲೆಗೆ ಸರಕಾರಿ ಆಯುರ್ವೇದ ಕಾಲೇಜು (ಬೋಧಕ ಆಸ್ಪತ್ರೆ ಸಹಿತ) ಒದಗಿಸಬೇಕು ಎನ್ನುವ ಬೇಡಿಕೆಗೆ ಈಗ ಮತ್ತಷ್ಟು ಬಲಗೊಳ್ಳುತ್ತಿದೆ.

ಪ್ರಸ್ತುತ ರಾಜ್ಯದಲ್ಲಿ 100 ವರ್ಷ ಹಳೆಯ ಸರಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮೈಸೂರು (160 ಬೆಡ್‌), 75 ವರ್ಷ ಹಳೆಯ ಸರಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಬೆಂಗಳೂರು (180 ಬೆಡ್‌), ತಾರಾನಾಥ ಸರಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಬಳ್ಳಾರಿ (150) ಕಾರ್ಯ ನಿರ್ವಹಿಸುತ್ತಿದೆ. ಹಾವೇರಿಯ ಸವಣೂರಿನಲ್ಲಿ ಸರಕಾರಿ ಆಯುರ್ವೇದ ಮಹಾವಿದ್ಯಾಲಯ (150) ಪ್ರಸ್ತಾವನೆಯಲ್ಲಿದೆ. ಶಿವಮೊಗ್ಗದಲ್ಲಿ ಆಯುಷ್‌ ವಿಶ್ವವಿದ್ಯಾಲಯ ನಿರ್ಮಾಣ ಹಂತದಲ್ಲಿದೆ. ಇದು ಬಿಟ್ಟರೆ ಬೇರೆ ಯಾವುದೇ ಪ್ರಸ್ತಾವನೆ ಕಂಡುಬಂದಿಲ್ಲ. ಕರಾವಳಿಯಲ್ಲಿ ಇದುವರೆಗೆ ಯಾವುದೇ ಬೇಡಿಕೆ ಇರಲಿಲ್ಲ. ಕೆಲವು ಖಾಸಗಿ ಆಯುರ್ವೇದ ಕಾಲೇಜುಗಳು ಮಾತ್ರ ಸದ್ಯ ಕಾರ್ಯನಿರ್ವಹಿಸುತ್ತಿವೆ.

ಆಯುರ್ವೇದ ಪದ್ಧತಿಯಲ್ಲಿ ಯಾವುದೇ ಅಡ್ಡ ಪರಿಣಾಮ ವಿಲ್ಲದೆ ಉತ್ತಮ ಚಿಕಿತ್ಸೆ ಲಭ್ಯವಿದೆ. ಸದ್ಯ ದ.ಕ., ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕೈಗೆಟಕುವ ದರದಲ್ಲಿ ಆಯುರ್ವೇದ ಚಿಕಿತ್ಸೆಗೆ ಕೇರಳವನ್ನೇ ಅವಲಂಬಿಸುವಂತಾಗಿದೆ.

ಅಲ್ಲದೆ ಕರಾವಳಿ ಕರ್ನಾಟಕದ ಆಯುರ್ವೇದ ವೈದ್ಯ ವಿಷಯಾ ಸಕ್ತ ವಿದ್ಯಾರ್ಥಿಗಳು ಉತ್ತಮ ವೈದ್ಯಕೀಯ ಶಿಕ್ಷಣ ಪಡೆ ಯಲು ರಾಜ್ಯದ ಬೇರೆ ಜಿಲ್ಲೆಗಳಲ್ಲಿರುವ ಬೆರಳೆಣಿಕೆ ಸಂಖ್ಯೆಯ ಸರಕಾರಿ ಕಾಲೇಜುಗಳು ಹಾಗೂ ಖಾಸಗಿ ಕಾಲೇಜು ಗಳಿಗೆ ತೆರಳಬೇಕಾಗುತ್ತದೆ. ಜತೆಗೆ ಹೊರರಾಜ್ಯ ಗಳನ್ನು ಅವಲಂಬಿಸುತ್ತಿದ್ದಾರೆ.

ಕರಾವಳಿಯ ಭಾಗದಲ್ಲಿ ಆಯುರ್ವೇದ ಸರಕಾರಿ ಕಾಲೇಜು ಆರಂಭಿಸಿದರೆ ಈ ಭಾಗದ ವಿದ್ಯಾರ್ಥಿಗಳಿಗೆ ಆಯುರ್ವೇದ ಶಿಕ್ಷಣಕ್ಕೆ ಬೇರೆ ಜಿಲ್ಲೆ ಹಾಗೂ ಬೇರೆ ರಾಜ್ಯಗಳಿಗೆ ಹೋಗುವುದನ್ನು ತಪ್ಪಿಸಬಹುದು. ಜತೆಗೆ ಗುಣಮಟ್ಟದ ಆಯುರ್ವೇದ ಚಿಕಿತ್ಸೆ ದೊರೆಯುವುದಕ್ಕೂ ಉಪಯೋಗವಾಗಲಿದೆ. ಅಲ್ಲದೆ ಉತ್ತಮ ಸಂಶೋಧನೆಗಳು ನಡೆಯಲೂ ಸಹಕಾರಿಯಾಗುತ್ತದೆ.

ಪದವೀಧರರಿಂದ ಯತ್ನ
ಈ ನಿಟ್ಟಿನಲ್ಲಿ ಕರಾವಳಿ ಭಾಗದ ಆಯುರ್ವೇದ ಪದವೀಧರರು ಸರಕಾರಿ ಆಯುರ್ವೇದ ಕಾಲೇಜು ಸ್ಥಾಪನೆ ಕುರಿತು ಸರಕಾರಗಳು ಪ್ರಯತ್ನಿಸುವಂತೆ ಒತ್ತಾಯ ಹೇರ ತೊಡಗಿದ್ದಾರೆ. ಹಿಂದಿನ ಸಂಸದ ನಳಿನ್‌ ಕುಮಾರ್‌ ಕಟೀಲು ಹಾಗೂ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರಿಗೂ ಹಿಂದೆ ಮನವಿ ಕೊಡಲಾಗಿತ್ತು. ಈಗ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅವರಿಗೂ ಮನವಿ ಸಲ್ಲಿಸಲಾಗಿದೆ.

ಅನುದಾನಿತ ಕಾಲೇಜುಗಳೂ ಇಲ್ಲ
ಕರಾವಳಿ ಕರ್ನಾಟಕ ಭಾಗದಲ್ಲಿ ಖಾಸಗಿ ಆಯುರ್ವೇದ ಕಾಲೇಜುಗಳಷ್ಟೇ ಇವೆ, ಅನುದಾನಿತ ಕಾಲೇಜುಗಳೂ ಇಲ್ಲ. ಹಾಗಾಗಿ ಕರಾವಳಿ ಭಾಗದಲ್ಲಿ ಸರಕಾರಿ ಆಯುರ್ವೇದ ಕಾಲೇಜು ಹಾಗೂ ಬೋಧಕ ಆಸ್ಪತ್ರೆ ಸ್ಥಾಪಿಸಬೇಕು. ಇದರಿಂದ ಆ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾದೀತು. ಅಲ್ಲದೆ ಗರಿಷ್ಠ ಸಂಖ್ಯೆಯಲ್ಲಿರುವ ಆಯುರ್ವೇದ ಆಸಕ್ತರಿಗೂ ಉಚಿತವಾಗಿ ಚಿಕಿತ್ಸೆ ಪಡೆಯಲು ಸಾಧ್ಯ.
-ಡಾ| ಮಂಜುನಾಥ ಪೂಜಾರಿ, ಅಧ್ಯಕ್ಷರು, ಆಯುರ್ವೇದ ಸ್ನಾತಕೋತ್ತರ ಪದವೀಧರರ ಸಂಘ

ಟಾಪ್ ನ್ಯೂಸ್

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.