![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 10, 2024, 6:45 AM IST
ಹೊಸದಿಲ್ಲಿ: ಕೋಲ್ಕತಾದ ಟ್ರೈನಿ ವೈದ್ಯೆ ಶವಪರೀಕ್ಷೆಗೆ ಅಗತ್ಯವಾದ ದಾಖಲೆ ನಾಪತ್ತೆ ಕುರಿತು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಈ ಕುರಿತು ತನಿಖೆ ನಡೆಸುವಂತೆ ಸಿಬಿಐಗೆ ನ್ಯಾಯ ಪೀಠ ಸೂಚಿಸಿದೆ. ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಜೆಐ ಡಿ.ವೈ.ಚಂದ್ರಚೂಡ ನೇತೃತ್ವದ ಪೀಠವು, ಮೃತದೇಹ ವನ್ನು ಶವಪರೀಕ್ಷೆಗೆ ನೀಡುವಾಗ ಅಗತ್ಯವಿರುವ ಚಲನ್ನ ಉಲ್ಲೇಖ ಎಲ್ಲಿದೆ ಎಂದು ಪೀಠ ಪ್ರಶ್ನಿಸಿತು. ಆಗ ಪಶ್ಚಿಮ ಬಂಗಾಲ ಸರಕಾರ ಪರ ವಕೀಲ ಕಪಿಲ್ ಸಿಬಲ್, ಸದ್ಯಕ್ಕೆ ಚಲನ್ ಸಿಗುತ್ತಿಲ್ಲ. ಈ ಕುರಿತು ಶೀಘ್ರವೇ ಕೋರ್ಟ್ಗೆ ಮಾಹಿತಿ ನೀಡಲಾ ಗುವುದು ಎಂದು ಹೇಳಿದರು. ಸೆ.17ರೊಳಗೆ ಹೊಸ ವರದಿ ಸಲ್ಲಿಸಲು ಸಿಬಿಐಗೆ ಸೂಚಿಸಿತು.
ಕರ್ತವ್ಯಕ್ಕೆ ಹಾಜರಾಗಲು ವೈದ್ಯರಿಗೆ ಸೂಚನೆ
ಸೋಮವಾರದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಪ್ರತಿಭಟನಾನಿರತ ವೈದ್ಯರು ಮಂಗಳವಾರ ಸಂಜೆ 5 ಗಂಟೆಯೊಳಗೆ ಕರ್ತವ್ಯಕ್ಕೆ ಮರಳಬೇಕು ಎಂದು ಸೂಚಿಸಿತು. ವರ್ಗಾವಣೆ ಸೇರಿದಂತೆ ಇನ್ನಿತರ ಕಠಿನ ಕ್ರಮಗಳನ್ನು ಕೈಗೊಳ್ಳುವುದಿಲ್ಲ ಎಂದು ಪಶ್ಚಿಮ ಬಂಗಾಲ ಸರಕಾರ ಭರವಸೆ ನೀಡಿದ ಬಳಿಕ, ಸುಪ್ರೀಂ ಕೋರ್ಟ್ ಈ ನಿರ್ದೇಶನ ನೀಡಿತು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.