Rajasthan: ಹಳಿ ಮೇಲೆ ಸಿಮೆಂಟ್ ಬ್ಲಾಕ್ ಇಟ್ಟು ದುಷ್ಕರ್ಮಿಗಳಿಂದ ರೈಲು ಹಳಿ ತಪ್ಪಿಸಲು ಸಂಚು


Team Udayavani, Sep 10, 2024, 10:55 AM IST

Rajasthan: ಹಳಿ ಮೇಲೆ ಸಿಮೆಂಟ್ ಬ್ಲಾಕ್ ಇಟ್ಟು ದುಷ್ಕರ್ಮಿಗಳಿಂದ ರೈಲು ಹಳಿ ತಪ್ಪಿಸಲು ಸಂಚು

ರಾಜಸ್ಥಾನ: ರೈಲು ಹಳಿಗಳ ಮೇಲೆ ಎಲ್‌ಪಿಜಿ ಸಿಲಿಂಡರ್ ಇಟ್ಟು ರೈಲು ಹಳಿ ತಪ್ಪಿಸುವ ಯತ್ನ ಕಾನ್ಪುರದಲ್ಲಿ ನಡೆದಿರುವ ಬೆನ್ನಲೇ ಇದೀಗ ರಾಜಸ್ಥಾನದ ಅಜ್ಮೀರ್‌ನಲ್ಲಿ ಅದೇ ರೀತಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಅಪರಿಚಿತ ದುಷ್ಕರ್ಮಿಗಳು ರಾಜಸ್ಥಾನದ ಅಜ್ಮೀರ್‌ನಲ್ಲಿ ರೈಲು ಹಳಿ ಮೇಲೆ 70 ಕೆಜಿ ತೂಕದ ಎರಡು ಸಿಮೆಂಟ್ ಬ್ಲಾಕ್‌ಗಳನ್ನು ಇಟ್ಟು ಗೂಡ್ಸ್ ರೈಲನ್ನು ಹಳಿತಪ್ಪಿಸಲು ಯತ್ನಿಸಿದ್ದಾರೆ.

ಆದರೆ ರೈಲು ಸಿಮೆಂಟ್ ಬ್ಲಾಕ್‌ಗಳಿಗೆ ಡಿಕ್ಕಿ ಹೊಡೆದಿದ್ದರೂ ಯಾವುದೇ ಅವಘಡ ಸಂಭವಿಸಿಲ್ಲ. ಭಾನುವಾರ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಘಟನೆ ಕುರಿತು ರೈಲ್ವೆ ನೌಕರರು ಪೊಲೀಸರಿಗೆ ದೂರು ನೀಡಿದ್ದಾರೆ.

ಹಳಿ ಮೇಲೆ ಸಿಮೆಂಟ್‌ ಬ್ಲಾಕ್‌ ಹಾಕಿರುವ ಮಾಹಿತಿ ಪಡೆದ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ ಈ ವೇಳೆ ಎರಡು ಸಿಮೆಂಟ್ ಬ್ಲಾಕ್ ಗಳು ಪತ್ತೆಯಾಗಿದ್ದು ರೈಲು ಡಿಕ್ಕಿ ಹೊಡೆದ ರಭಸಕ್ಕೆ ಸಿಮೆಂಟ್ ಬ್ಲಾಕ್ ಪುಡಿಯಾಗಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹಲವು ಪ್ರದೇಶಗಳಲ್ಲಿ ರೈಲು ಹಳಿತಪ್ಪಿಸುವ ಪ್ರಯತ್ನಗಳು ನಡೆಯುತ್ತಿವೆ. ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ರೈಲ್ವೆ ಹಳಿಗಳ ಮೇಲೆ ಎಲ್‌ಪಿಜಿ ಸಿಲಿಂಡರ್ ಇತ್ತು ಹಳಿ ತಪ್ಪಿಸುವ ಯತ್ನ ನಡೆದಿತ್ತು. ಈ ವೇಳೆ ಪ್ಯಾಸೆಂಜರ್ ರೈಲು ಸಿಲಿಂಡರ್‌ಗೆ ಡಿಕ್ಕಿ ಹೊಡೆದಿದೆ. ಆದರೆ ಘಟನೆಯಲ್ಲಿ ಯಾರಿಗೂ ಹಾನಿಯಾಗದ ಕಾರಣ ಅಧಿಕಾರಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಪ್ರಯಾಗ್‌ರಾಜ್‌ನಿಂದ ಹರಿಯಾಣದ ಭಿವಾನಿಗೆ ತೆರಳುತ್ತಿದ್ದ ಕಾಳಿಂದಿ ಎಕ್ಸ್‌ಪ್ರೆಸ್ ಕಾನ್ಪುರದ ಶಿವರಾಜ್‌ಪುರ ಪ್ರದೇಶದ ಮೂಲಕ ಹಾದು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಲೊಕೊಮೊಟಿವ್ ಪೈಲಟ್ ಟ್ರ್ಯಾಕ್‌ಗಳಲ್ಲಿ ಎಲ್‌ಪಿಜಿ ಸಿಲಿಂಡರ್ ಮತ್ತು ಇತರ ಅನುಮಾನಾಸ್ಪದ ವಸ್ತುಗಳನ್ನು ಗಮನಿಸಿ ತಕ್ಷಣ ಬ್ರೇಕ್ ಹಾಕಿದರು. ಆದರೆ ರೈಲು ನಿಲ್ಲುವ ಮುನ್ನವೇ ಸಿಲಿಂಡರ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯ ನಂತರ ಕಾನ್ಪುರ ಪೊಲೀಸ್ ಮತ್ತು ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಎಲ್‌ಪಿಜಿ ಸಿಲಿಂಡರ್, ಪೆಟ್ರೋಲ್ ಬಾಟಲಿ, ಸ್ಫೋಟಕಗಳು ಮತ್ತು ಬೆಂಕಿಕಡ್ಡಿಗಳನ್ನು ವಶಪಡಿಸಿಕೊಂಡಿದ್ದಾರೆ.

ಅದೇ ರೀತಿ ಪೂಲೇರಾ – ಅಹ್ಮದಾಬಾದ್ ಮಾರ್ಗದ ರೈಲು ಹಳಿ ಮೇಲೆ ದುಷ್ಕರ್ಮಿಗಳು ಸುಮಾರು 70 ಕೆ.ಜಿ ತೂಕದ ಸಿಮೆಂಟ್ ಬ್ಲಾಕ್ ಇಟ್ಟಿದ್ದಾರೆ. ಇದರಿಂದ ರೈಲು ಸಿಮೆಂಟ್ ಬ್ಲಾಕ್‌ಗೆ ಡಿಕ್ಕಿ ಹೊಡೆದು ಮುಂದೆ ಸಾಗಿದೆ. ಘಟನೆಯಲ್ಲಿ ರೈಲಿನ ಇಂಜಿನ್‌ನ ಒಂದು ಭಾಗಕ್ಕೆ ಹಾನಿಯಾಗಿದೆ. ಘಟನೆಯ ಬಗ್ಗೆ ಲೊಕೊ ಪೈಲಟ್ ಆರ್‌ಪಿಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಪಘಾತದ ಸ್ಥಳದಲ್ಲಿ ಮುರಿದ ಸಿಮೆಂಟ್ ಬ್ಲಾಕ್ ಭಾಗಗಳು ಪತ್ತೆಯಾಗಿವೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: AAP Kisan Wing Leader: ಆಪ್ ನಾಯಕನ ಗುಂಡಿಕ್ಕಿ ಹತ್ಯೆ… ರಸ್ತೆ ಬದಿಯಲ್ಲಿತ್ತು ದೇಹ

ಟಾಪ್ ನ್ಯೂಸ್

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.