Duleep Trophy 2024; ಮೂರು ತಂಡಗಳಲ್ಲಿ ಹಲವು ಬದಲಾವಣೆ: ಮಯಾಂಕ್‌ ಗೆ ನಾಯಕತ್ವ


Team Udayavani, Sep 10, 2024, 5:41 PM IST

Duleep Trophy 2024; Many changes in all three teams: Mayank to captain India A

ಮುಂಬೈ: 2024-25ನೇ ಸಾಲಿನ ದುಲೀಪ್‌ ಟ್ರೋಫಿಯ (Duleep Trophy 2024) ಮೊದಲೆರಡು ಪಂದ್ಯಗಳು ಮುಕ್ತಾಯವಾಗಿದ್ದು, ಮುಂದಿನ ಪಂದ್ಯಗಳಿಗೆ ಸಿದ್ದತೆ ನಡೆಸಲಾಗುತ್ತಿದೆ. ಇದರ ನಡುವೆ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್‌ ಸರಣಿ ಆರಂಭವಾಗಲಿದೆ. ಹೀಗಾಗಿ ದುಲೀಪ್‌ ಟ್ರೋಫಿಯಲ್ಲಿದ್ದ ಕೆಲವು ಆಟಗಾರರನ್ನು ಬಿಡುಗಡೆ ಮಾಡಲಾಗಿದೆ.

ಇಂಡಿಯಾ ಎ ತಂಡದಲ್ಲಿದ್ದ ಶುಭಮನ್ ಗಿಲ್, ಕೆಎಲ್ ರಾಹುಲ್, ಧ್ರುವ್ ಜುರೆಲ್, ಕುಲದೀಪ್ ಯಾದವ್ ಮತ್ತು ಆಕಾಶ್ ದೀಪ್ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ದುಲೀಪ್‌ ಟ್ರೋಫಿಯಿಂದ ಈ ಐವರು ಸೇರಿ ಒಟ್ಟು ಎಂಟು ಮಂದಿಯನ್ನು ಬಿಡಲಾಗಿದೆ.

ಶುಭಮನ್‌ ಗಿಲ್‌ ಅನುಪಸ್ಥಿತಿಯ ಕಾರಣದಿಂದ ಮಯಾಂಕ್‌ ಅಗರ್ವಾಲ್‌ ಅವರನ್ನು ಇಂಡಿಯಾ ಎ ತಂಡದ ನಾಯಕರನ್ನಾಗಿ ಮಾಡಲಾಗಿದೆ. ಭಾರತದ ಪುರುಷರ ಆಯ್ಕೆ ಸಮಿತಿಯು ಇದೇ ವೇಳೆ ಗಿಲ್ ಬದಲಿಗೆ ಪ್ರಥಮ್ ಸಿಂಗ್, ಕೆಎಲ್ ರಾಹುಲ್ ಬದಲಿಗೆ ಅಕ್ಷಯ್ ವಾಡ್ಕರ್, ಧ್ರುವ್ ಜುರೆಲ್ ಬದಲಿಗೆ ಎಸ್‌ ಕೆ ರಶೀದ್, ಕುಲದೀಪ್ ಬದಲಿಗೆ ಶಮ್ಸ್ ಮುಲಾನಿ ಮತ್ತು ಆಕಾಶ್ ದೀಪ್ ಬದಲಿಗೆ ಆಕಿಬ್ ಖಾನ್ ಅವರನ್ನು ಹೆಸರಿಸಿದೆ.

ಇಂಡಿಯಾ ಬಿ ತಂಡದಲ್ಲಿ ಯಶಸ್ವಿ ಜೈಸ್ವಾಲ್, ರಿಷಭ್ ಪಂತ್ ಮತ್ತು ಯಶ್ ದಯಾಲ್ ಅವರನ್ನು ಹೊರಗಿಡಲಾಗಿದೆ. ಬದಲಿಯಾಗಿ ಸುಯಶ್ ಪ್ರಭುದೇಸಾಯಿ, ಹಿಮಾಂಶು ಮಂತ್ರಿ ಮತ್ತು ರಿಂಕು ಸಿಂಗ್ ಅವರನ್ನು ಆಯ್ಕೆ ಮಾಡಿದ್ದಾರೆ. ಭಾರತ ತಂಡದಲ್ಲಿ ಸ್ಥಾನ ಪಡೆದರೂ ಸರ್ಫರಾಜ್‌ ಖಾನ್‌ ಅವರು ದುಲೀಪ್‌ ಟ್ರೋಫಿಯ ಮುಂದಿನ ಪಂದ್ಯ ಆಡಲಿದ್ದಾರೆ.

ಇಂಡಿಯಾ ಸಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಇಂಡಿಯಾ ಡಿ ತಂಡದಲ್ಲಿದ್ದ ಅಕ್ಷರ್‌ ಪಟೇಲ್‌ ಅವರು ಟೆಸ್ಟ್‌ ಸರಣಿಗೆ ಆಯ್ಕೆಯಾಗಿದ್ದಾರೆ. ಅಕ್ಷರ್‌ ಬದಲಿಗೆ ನಿಶಾಂತ್‌ ಸಿಂಧು ಆಯ್ಕೆ ಮಾಡಲಾಗಿದೆ. ವೇಗಿ ತುಷಾರ್‌ ದೇಶಪಾಂಡೆ ಗಾಯಗೊಂಡಿದ್ದು, ಅವರ ಬದಲಿಗೆ ಇಂಡಿಯಾ ಎ ತಂಡದಲ್ಲಿದ್ದ ಕನ್ನಡಿಗ ವಿದ್ವತ್‌ ಕಾವೇರಪ್ಪ ಅವರನ್ನು ಇಂಡಿಯಾ ಡಿ ತಂಡಕ್ಕೆ ನೇಮಿಸಲಾಗಿದೆ.

ಎರಡನೇ ಸುತ್ತಿನಲ್ಲಿ ಇಂಡಿಯಾ ಎ ಮತ್ತು ಇಂಡಿಯಾ ಡಿ, ಇಂಡಿಯಾ ಬಿ ಮತ್ತು ಇಂಡಿಯಾ ಸಿ ತಂಡಗಳು ಮುಖಾಮುಖಿಯಾಗಲಿದೆ. ಸೆ.12ರಿಂದ ಅನಂತಪುರದಲ್ಲಿ ಈ ಪಂದ್ಯಗಳು ನಡೆಯಲಿದೆ.

ಇಂಡಿಯಾ ಎ ತಂಡ: ಮಯಾಂಕ್ ಅಗರ್ವಾಲ್ (ನಾ), ರಿಯಾನ್ ಪರಾಗ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಅವೇಶ್ ಖಾನ್, ಕುಮಾರ್ ಕುಶಾಗ್ರಾ, ಶಾಶ್ವತ್ ರಾವತ್, ಪ್ರಥಮ್ ಸಿಂಗ್, ಅಕ್ಷಯ್ ವಾಡ್ಕರ್, ಎಸ್‌ಕೆ ರಶೀದ್, ಶಮ್ಸ್ ಮುಲಾನಿ, ಆಕಿಬ್ ಖಾನ್.

ಇಂಡಿಯಾ ಬಿ ತಂಡ: ಅಭಿಮನ್ಯು ಈಶ್ವರನ್ (ನಾ), ಸರ್ಫರಾಜ್ ಖಾನ್, ಮುಶೀರ್ ಖಾನ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಮುಖೇಶ್ ಕುಮಾರ್, ರಾಹುಲ್ ಚಾಹರ್, ಆರ್ ಸಾಯಿ ಕಿಶೋರ್, ಮೋಹಿತ್ ಅವಸ್ತಿ, ಎನ್ ಜಗದೀಸನ್ (ವಿ.ಕೀ), ಸುಯಶ್ ಪ್ರಭುದೇಸಾಯಿ, ರಿಂಕು ಸಿಂಗ್ , ಹಿಮಾಂಶು ಮಂತ್ರಿ (ವಿ.ಕೀ)

ಇಂಡಿಯಾ ಡಿ ತಂಡ: ಶ್ರೇಯಸ್ ಐಯರ್ (ಸಿ), ಅಥರ್ವ ತಾಯ್ಡೆ, ಯಶ್ ದುಬೆ, ದೇವದತ್ ಪಡಿಕ್ಕಲ್, ರಿಕಿ ಭುಯಿ, ಸರನ್ಶ್ ಜೈನ್, ಅರ್ಷದೀಪ್ ಸಿಂಗ್, ಆದಿತ್ಯ ಠಾಕರೆ, ಹರ್ಷಿತ್ ರಾಣಾ, ಆಕಾಶ್ ಸೇನ್‌ಗುಪ್ತ, ಕೆಎಸ್ ಭರತ್ (ವಿ.ಕೀ), ಸೌರಭ್ ಕುಮಾರ್, ಸಂಜು ಸ್ಯಾಮ್ಸನ್ (ವಿ.ಕೀ), ನಿಶಾಂತ್ ಸಿಂಧು, ವಿದ್ವತ್ ಕಾವೇರಪ್ಪ

ಟಾಪ್ ನ್ಯೂಸ್

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.