Manipur: ಮತ್ತೆ ಉದ್ವಿಗ್ನ, ಇಂಟರ್ನೆಟ್ ಸ್ಥಗಿತ, ಕರ್ಫ್ಯೂ ಜಾರಿಗೊಳಿಸಿದ ಸರಕಾರ
ಭದ್ರತಾ ಪಡೆಗಳ ಜೊತೆ ವಿದ್ಯಾರ್ಥಿಗಳು, ಮಹಿಳಾ ಪ್ರತಿಭಟನಾಕಾರರಿಂದ ಸಂಘರ್ಷ, 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
Team Udayavani, Sep 10, 2024, 8:34 PM IST
ಇಂಫಾಲ್: ಮಣಿಪುರದ ಪೊಲೀಸ್ ಮುಖ್ಯಸ್ಥ (ಡಿಜಿಪಿ) ಹಾಗೂ ರಾಜ್ಯ ಸರಕಾರದ ಭದ್ರತಾ ಸಲಹೆಗಾರರ ಪದಚ್ಯುತಗೊಳಿಸಬೇಕು ಎಂಬ ಬೇಡಿಕೆಗೆ ಸಂಬಂಧಿಸಿ ವಿದ್ಯಾರ್ಥಿಗಳ ಪ್ರತಿಭಟನಾ ಮೆರವಣಿಗೆ ನಡೆಸಿ ಭದ್ರತಾ ಪಡೆಗಳೊಂದಿಗೆ ಮಂಗಳವಾರ ನಡೆದ ಘರ್ಷಣೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದರಿಂದ ಮಣಿಪುರ ಸರ್ಕಾರ ಐದು ದಿನಗಳ ಕಾಲ ಇಂಟರ್ನೆಟ್ ಸೇವೆ ಸ್ಥಗಿತ ಹಾಗೂ ಇಂಫಾಲ್ ಪೂರ್ವ ಮತ್ತು ಪಶ್ಚಿಮ ಜಿಲ್ಲೆಗಳಲ್ಲಿ ಕರ್ಫ್ಯೂ ಮತ್ತು ತೌಬಲ್ನಲ್ಲಿ ನಿಷೇಧಾಜ್ಞೆಗಳ ವಿಧಿಸಿದೆ.
ಮಂಗಳವಾರ ಬೆಳಗ್ಗೆ ಪ್ರತಿಭಟನಾಕಾರರು ರಾಜಭವನದ ಕಡೆಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದಾಗ ವಿದ್ಯಾರ್ಥಿಗಳು ಮತ್ತು ಮಹಿಳಾ ಪ್ರತಿಭಟನಾಕಾರರು ಅವರೊಂದಿಗೆ ಘರ್ಷಣೆ ನಡೆಸಿದ್ದರಿಂದ ಭದ್ರತಾ ಪಡೆಗಳು ಅಶ್ರುವಾಯು ಶೆಲ್ಗಳ ಸಿಡಿಸಿದರು. ಸೋಮವಾರದಿಂದ ಖ್ವೈರಾಂಬಂಡ್ ಮಹಿಳಾ ಮಾರುಕಟ್ಟೆಯಲ್ಲಿ ಮೊಕ್ಕಾಂ ಹೂಡಿರುವ ನೂರಾರು ವಿದ್ಯಾರ್ಥಿಗಳು ಬಿಟಿ ರಸ್ತೆಯ ಮೂಲಕ ರಾಜಭವನದತ್ತ ಮೆರವಣಿಗೆ ನಡೆಸಲು ಯತ್ನಿಸಿದರಾದರೂ ಕಾಂಗ್ರೆಸ್ ಭವನದ ಬಳಿ ಭದ್ರತಾ ಪಡೆಗಳು ತಡೆದರು.
ದ್ವೇಷದ ಚಿತ್ರಗಳು, ಭಾಷಣ ಮತ್ತು ವಿಡಿಯೋಗಳ ಪ್ರಸಾರ ಮಾಡಲು ಸಾಮಾಜಿಕ ಮಾಧ್ಯಮಗಳ ಬಳಕೆ ತಡೆಯಲು ಗೃಹ ಇಲಾಖೆಯು ಇಂಟರ್ನೆಟ್ ಅನ್ನು ನಿಷೇಧಿಸುವ ನಿರ್ಧಾರ ತೆಗೆದುಕೊಂಡಿದೆ. ಸೆ.15 ರಂದು ನಿಷೇಧ ತೆಗೆದುಹಾಕುವ ಸಾಧ್ಯತೆಯಿದೆ. ಆರೋಗ್ಯ, ಇಂಜಿನಿಯರಿಂಗ್ ವಿಭಾಗ, ಮುನ್ಸಿಪಲ್ ಸಂಸ್ಥೆಗಳು, ವಿದ್ಯುತ್ , ಪೆಟ್ರೋಲ್ ಪಂಪ್ಗಳು, ನ್ಯಾಯಾಲಯಗಳ ಕಾರ್ಯನಿರ್ವಹಣೆ, ವಿಮಾನ ಪ್ರಯಾಣಿಕರು ಮತ್ತು ಮಾಧ್ಯಮಗಳ ಓಡಾಟ, ಅಗತ್ಯ ಸೇವೆಗಳಲ್ಲಿ ತೊಡಗಿಸಿಕೊಂಡಿರುವವರ ಮುಕ್ತ ಸಂಚಾರಕ್ಕೆ ಸರ್ಕಾರ ಅನುಮತಿ ನೀಡಿದೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಕೇಂದ್ರಿಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್)ಯ ಎರಡು ಬೆಟಾಲಿಯನ್ನನ್ನು ಹೆಚ್ಚುವರಿಯಾಗಿ ನಿಯೋಜಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.