Kundapura ಬಸ್ಸಿನಲ್ಲಿ ಚಿನ್ನದ ಕರಿಮಣಿ ಕಳವು
Team Udayavani, Sep 10, 2024, 9:01 PM IST
ಕುಂದಾಪುರ: ಮುಳ್ಳಿಕಟ್ಟೆಯಿಂದ ಕುಂದಾಪುರಕ್ಕೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ 24 ಗ್ರಾಂ ತೂಕದ, 1.20 ಲಕ್ಷ ರೂ. ಮೌಲ್ಯದ ಚಿನ್ನದ ಕರಿಮಣಿಯನ್ನು ಯಾರೋ ಕಳ್ಳತನ ಮಾಡಿರುವ ಘಟನೆ ಸೆ. 10 ರಂದು ಸಂಭವಿಸಿದೆ.
ಕುಂದಬಾರಂದಾಡಿ ಗ್ರಾಮದ ಸಾಕು (50) ಅವರು ಮುಳ್ಳಿಕಟ್ಟೆಯಲ್ಲಿ ಖಾಸಗಿ ಬಸ್ಸಿಗೆ ಬೆಳಗ್ಗೆ 8 ಗಂಟೆಗೆ ಹತ್ತಿದ್ದು, 8.20 ಕ್ಕೆ ಕುಂದಾಪುರದ ಶಾಸ್ತ್ರಿ ಸರ್ಕಲ್ ಬಳಿ ಬಸ್ಸಿನಿಂದ ಇಳಿದಾಗ ಕುತ್ತಿಗೆಯಲ್ಲಿ ಧರಿಸಿದ್ದ ಚಿನ್ನದ ಸರ ಕಳವಾಗಿದೆ.
ಇವರು ಕುಂದಾಪುರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಸಗಿಯಾಗಿ ಕೆಲಸ ಮಾಡುತ್ತಿದ್ದು, ಸೆ.10ರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ಬರುತ್ತಿದ್ದ ವೇಳೆ ಬಸ್ಸಿನಲ್ಲಿ ಯಾರೋ ಇವರ ಚಿನ್ನದ ಕರಿಮಣಿಯನ್ನು ಕಳವುಗೈದಿರುವುದಾಗಿದೆ.
ಸಾಕು ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.