Vijayapura: ಆಯುಷ್ ಆರೋಗ್ಯ ಮಂದಿರದಲ್ಲಿ ಕುಡುಕ ವೈದ್ಯನ ಅವಾಂತರ
Team Udayavani, Sep 10, 2024, 9:13 PM IST
ವಿಜಯಪುರ: ವೈದ್ಯನೊಬ್ಬ ಮದ್ಯ ಸೇವಿಸಿ ಆಸ್ಪತ್ರೆಗೆ ಬಂದು ಅವಾಂತರ ಸೃಷ್ಟಿಸಿದ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಶಿರನಾಳ ಆಯುಷ್ ಆರೋಗ್ಯ ಮಂದಿರದಲ್ಲಿ ನಡೆದಿದೆ. ಅಲ್ಲದೇ, ಮಹಿಳಾ ರೋಗಿಗಳಿಗೆ ಅವಾಚ್ಯವಾಗಿ ನಿಂದಿಸಿದ ಆರೋಪವೂ ಕೇಳಿ ಬಂದಿದೆ.
ಗ್ರಾಮದ ಆಯುಷ್ ಆರೋಗ್ಯ ಮಂದಿರದ ನಾರಾಯಣ ರಾಠೋಡ ಎಂಬ ವೈದ್ಯನೇ ಈ ರಂಪಾಟ ಮಾಡಿದ್ದಾನೆ. ಆರೋಗ್ಯ ನಿರೀಕ್ಷಣಾಧಿಕಾರಿಯಾದ ಈತ ಆಸ್ಪತ್ರೆಯ ಕಿಟಕಿ, ಗಾಜು ಮತ್ತು ಪೀಠೋಪಕರಣಗಳನ್ನೂ ಪುಡಿ ಮಾಡಿದ್ದಾನೆ. ಅಲ್ಲದೆ, ಮತ್ತಿನಲ್ಲಿ ಆಸ್ಪತ್ರೆಯಲ್ಲಿ ಬಿದ್ದು ಒದ್ದಾಡಿದ್ದಾನೆ. ಈ ಹಿಂದೆಯೂ ಇದೇ ರೀತಿಯಾಗಿ ಮದ್ಯ ಸೇವಿಸಿದ ಆರೋಪದ ಮೇಲೆ ನಾರಾಯಣ ರಾಠೋಡ ಅಮಾನತುಗೊಂಡಿದ್ದ ಎಂದು ತಿಳಿದುಬಂದಿದೆ.
ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಂಪತ್ ಪ್ರತಿಕ್ರಿಯಿಸಿ, ಆಸ್ಪತ್ರೆಗೆ ನಾರಾಯಣ ರಾಠೋಡ ಮದ್ಯ ಸೇವಿಸಿ ಬಂದಿರುವ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಸಂಪೂರ್ಣ ತನಿಖೆ ಮಾಡಿ ವರದಿ ನೀಡುವಂತೆ ತಾಲೂಕಾ ಆರೋಗ್ಯಾಧಿಕಾರಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಶಿಸ್ತುಕ್ರಮ ಜರುಗಿಸಲಾಗುವುದು. ಅಲ್ಲದೇ, ಪೀಠೋಪಕರಣಗಳಿಗೆ ಹಾನಿ ಮಾಡಿದ್ದರೆ, ಅದರ ಹಣವನ್ನು ನಾರಾಯಣ ರಾಠೋಡ ಅವರಿಂದಲೇ ಭರಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.