Hassan ಕೌಟುಂಬಿಕ ಕಲಹ: ಸುಪಾರಿ ಕೊಟ್ಟು ಪತ್ನಿಯ ಕೊಲ್ಲಿಸಿದ ಪತಿ
Team Udayavani, Sep 10, 2024, 11:49 PM IST
ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸ್ನೇಹಿತನಿಗೆ ಸುಪಾರಿ ಕೊಟ್ಟು ಪತಿಯೇ ಪತ್ನಿಯನ್ನು ಕೊಲೆ ಮಾಡಿಸಿರುವ ಪ್ರಕರಣ ಬೇಲೂರು ತಾಲೂಕಿನ ಯಕಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಶೀಲಾ (42) ಕೊಲೆಯಾದವರು.
ಪತ್ನಿ ಹತ್ಯೆಗೆ ಸುಪಾರಿ ನೀಡಿದ್ದ ಪತಿ ಜಗದೀಶ್ ಮತ್ತು ಆತನ ಸ್ನೇಹಿತ ರಾಜಶೇಖರ್ನನ್ನು ಪೊಲೀಸರು ಬಂಧಿಸಿದ್ದಾರೆ. ಸಹಕರಿಸಿದ ಮತ್ತೂಬ್ಬ ಆರೋಪಿ ನಿರ್ವಾಣಯ್ಯ ತಲೆಮರೆಸಿಕೊಂಡಿದ್ದಾನೆ.
ಕೊಲೆ ಕೃತ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಶೀಲಾ-ಜಗದೀಶ್ ದಂಪತಿಗೆ 20 ವರ್ಷದ ಮಗಳಿದ್ದಾಳೆ. ಜಗದೀಶ್ ಮದ್ಯ ವ್ಯಸನಿಯಾಗಿದ್ದರಿಂದ ಕುಟುಂಬದಲ್ಲಿ ಕಲಹ ಮೂಡಿತ್ತು. ಶೀಲಾ ತನ್ನ ಮಗಳೊಂದಿಗೆ ಗಂಡನಿಂದ ಅಂತರ ಕಾಯ್ದುಕೊಂಡು ಅದೇ ಮನೆಯಲ್ಲಿ ವಾಸವಾಗಿದ್ದರು. ಪತ್ನಿಯನ್ನು ಕೊಲ್ಲುವಂತೆ ಸ್ನೇಹಿತ ರಾಜಶೇಖರ್ಗೆ ಜಗದೀಶ್ ಸುಪಾರಿ ನೀಡಿದ್ದ. ಗೌರಿ ಹಬ್ಬದ ದಿನವಾದ ಶನಿವಾರ ಟವೆಲ್ನಿಂದ ಕುತ್ತಿಗೆ ಬಿಗಿದು ಜಗದೀ ಶ್ ಕೊಲೆ ಮಾಡಿದ್ದ. ತಾಯಿ ಮನೆಗೆ ಬಾರದಿ ದ್ದರಿಂದ ಮಗಳು ಪೊಲೀಸರಿಗೆ ದೂರು ನೀಡಿ ದ್ದಳು. ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
High Court: ಬಾಂಬ್ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್ ರದ್ದು
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿನ್ ಸನಿಲ್ ಕುರ್ಕಾಲು
Commonwealth ಚಾಂಪಿಯನ್ಶಿಪ್ : ಅಲ್ಲುರಿ ಅಜಯ್ಗೆ ಬಂಗಾರ
High Court; “ಅರ್ಧ ಪಾಕಿಸ್ಥಾನ’: ಯತ್ನಾಳ್ ಹೇಳಿಕೆಗೆ ಹೈಕೋರ್ಟ್ ಸಿಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.