Paralympics 2024; ಪ್ಯಾರಾ ಸಾಧಕರಿಗೆ ಪ್ರೀತಿಯ ಸ್ವಾಗತ; ಚಿನ್ನ ಗೆದ್ದವರಿಗೆ 75 ಲಕ್ಷ ರೂ.


Team Udayavani, Sep 11, 2024, 5:47 AM IST

Paralympics 2024; ಪ್ಯಾರಾ ಸಾಧಕರಿಗೆ ಪ್ರೀತಿಯ ಸ್ವಾಗತ; ಚಿನ್ನ ಗೆದ್ದವರಿಗೆ 75 ಲಕ್ಷ ರೂ.

ಹೊಸದಿಲ್ಲಿ: ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ದಾಖಲೆ ಸಂಖ್ಯೆಯ 29 ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಹೆಮ್ಮೆಯ ಪ್ಯಾರಾತ್ಲೀಟ್‌ಗಳು ಮಂಗಳವಾರ ತವರಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಹೊಸದಿಲ್ಲಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರೀತಿಪೂರ್ವಕ ಸ್ವಾಗತ ಕೋರಲಾಯಿತು. ಇದೇ ವೇಳೆ ಪ್ಯಾರಾಲಿಂಪಿಕ್ಸ್‌ ಪದಕವೀರರಿಗೆ ಕೇಂದ್ರ ಕ್ರೀಡಾ ಸಚಿವರು ನಗದು ಬಹುಮಾನ ಘೋಷಿಸಿದರು.

ನೂರಾರು ಕ್ರೀಡಾಭಿಮಾನಿಗಳು, ನಿಲ್ದಾಣದ ಅಧಿಕಾರಿಗಳು, ಸಾಧಕರ ಕುಟುಂಬದ ಸದಸ್ಯರೆಲ್ಲ ಸೇರಿಕೊಂಡು ಕ್ರೀಡಾಪಟುಗಳನ್ನು ಹೃತೂ³ರ್ವಕವಾಗಿ ಬರಮಾಡಿಕೊಂಡರು. ಹೂವಿನ ಹಾರ ಹಾಕಿ, ಸಿಹಿ ತಿಂಡಿ ಹಂಚಿ ಸಂಭ್ರಮಿ ಸಿದರು. ಧೋಲ್‌ ಹಾಗೂ ವಾದ್ಯ ಕೂಡ ಈ ಸ್ವಾಗತದ ಸಂಭ್ರಮವನ್ನು ಹೆಚ್ಚಿಸಿತು.

ಮೊದಲು ಚಹಾ ಕುಡಿಯಬೇಕು!

“ಇಂಥದೊಂದು ಭವ್ಯ ಸ್ವಾಗತಕ್ಕೆ ಧನ್ಯವಾದಗಳು’ ಎಂಬುದಾಗಿ ಜಾವೆ ಲಿನ್‌ನಲ್ಲಿ ಸತತ 2 ಚಿನ್ನ ಗೆದ್ದ ಸುಮಿತ್‌ ಅಂತಿಲ್‌ ಹೇಳಿದರು.

“ನೀವು ಉತ್ತಮ ಸಿದ್ಧತೆಯೊಂದಿಗೆ ತೆರಳಿದಾಗ ಸಹಜವಾಗಿಯೇ ಆತ್ಮ ವಿಶ್ವಾಸ ಮೂಡುತ್ತದೆ. ಶೀಘ್ರದಲ್ಲೇ 75 ಮೀ. ಗುರಿ ತಲುಪಲು ಪ್ರಯ ತ್ನಿಸುತ್ತೇನೆ. ಕಳೆದ ಕೆಲವು ದಿನಗ ಳಿಂದ ನಾನು ಚಹಾ ಕುಡಿದಿಲ್ಲ. ಕುಟುಂಬ ದವರೊಂದಿಗೆ ಸೇರಿ ಚಹಾ ಕುಡಿಯುವ ಕಾತರದಲ್ಲಿದ್ದೇನೆ’ ಎಂದರು.

ಪ್ಯಾರಾ ಕ್ರೀಡಾಳುಗಳೇ ಸ್ಫೂರ್ತಿ

ಪ್ಯಾರಾಲಿಂಪಿಕ್ಸ್‌ ಆರ್ಚರಿಯಲ್ಲಿ ಭಾರತಕ್ಕೆ ಮೊಟ್ಟಮೊದಲ ಚಿನ್ನದ ಪದಕ ತಂದಿತ್ತ ಹರ್ವಿಂದರ್‌ ಸಿಂಗ್‌ ಕೂಡ ಈ ಸ್ವಾಗತ ಕಂಡು ಬೆರಗಾಗಿದ್ದರು. “ನಾನು ಯಾವಾಗಲೂ ಬ್ಯುಸಿ ಆಗಿರಲು ಬಯಸುತ್ತೇನೆ. ಸಂಕಷ್ಟದಲ್ಲಿರುವವರು ಅಥವಾ ಬದುಕಿನಲ್ಲಿ ಸೋಲುಂಡವರು, ಯಾರೇ ಆಗಿರಲಿ, ನಮ್ಮಂಥ ಪ್ಯಾರಾ ಆ್ಯತ್ಲೀಟ್‌ಗಳಿಂದ ಸ್ಫೂರ್ತಿ ಪಡೆಯ ಬಹುದು’ ಎಂದರು. ಆರ್ಮ್ಲೆಸ್‌ ವಂಡರ್‌ ಖ್ಯಾತಿಯ ಶೀತಲ್‌ದೇವಿ ಕೂಡ ಜತೆಯಲ್ಲಿದ್ದರು. ಅಭಿಮಾನಿಗಳು ಇವರ ಮೇಲೆ ಹೂವು ಸುರಿಸಿ ಹರ್ಷ ವ್ಯಕ್ತಪಡಿಸಿದರು.

“ನನ್ನ ಪಾಲಿಗೆ ಇದೊಂದು ಶ್ರೇಷ್ಠ ಅನುಭವ. ಆರ್ಚರಿಯಲ್ಲಿ ಭಾರತಕ್ಕೆ 2 ಪದಕ ಬಂದುದಕ್ಕೆ ಬಹಳ ಖುಷಿಯಾಗಿದೆ. ನಮಗೆ ಅತ್ಯುತ್ತಮ ಬೆಂಬಲ ಲಭಿಸಿದ್ದರಿಂದಲೇ ಇಷ್ಟೊಂದು ಪದಕಗಳು ಒಲಿದವು’ ಎಂದು ಶೀತಲ್‌ದೇವಿ ಅಭಿಪ್ರಾಯಪಟ್ಟರು.

ಜಾವೆಲಿನ್‌ ಎಫ್41 ವಿಭಾಗದಲ್ಲಿ ಚಿನ್ನ ಜಯಿಸಿದ ಕುಬj ಸಾಹಸಿ ನವದೀಪ್‌ ಸಿಂಗ್‌ ಅವರನ್ನು ಅಭಿಮಾನಿಗಳು ಎತ್ತಿ ಹಿಡಿದು ಸಂಭ್ರಮಿಸಿದರು.

ಚಿನ್ನ ಗೆದ್ದವರಿಗೆ 75 ಲಕ್ಷ ರೂ.

ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದವರಿಗೆ ಕೇಂದ್ರ ಕ್ರೀಡಾ ಸಚಿವ ಮನ್ಸುಖ್‌ ಮಾಂಡವೀಯ ಅವರು ಮಂಗಳವಾರ ಬಹುಮಾನದ ಚೆಕ್‌ ವಿತರಿಸಿದರು. ಇದರಂತೆ ಚಿನ್ನ ಗೆದ್ದವರಿಗೆ 75 ಲಕ್ಷ ರೂ., ಬೆಳ್ಳಿ ವಿಜೇತರಿಗೆ 50 ಲಕ್ಷ ರೂ. ಹಾಗೂ ಕಂಚು ಜಯಿಸಿದವರಿಗೆ 30 ಲಕ್ಷ ರೂ. ಬಹುಮಾನ ನೀಡಲಾಯಿತು. ಶೀತಲ್‌ದೇವಿ ಅವರಂತೆ ಮಿಶ್ರ ತಂಡ ವಿಭಾಗದಲ್ಲಿ ಪದಕ ಗೆದ್ದವರು 22.5 ಲಕ್ಷ ರೂ. ಪಡೆದರು.

ಪ್ಯಾರಾ ಕ್ರೀಡಾಪಟುಗಳನ್ನು ಸಮ್ಮಾನಿಸಿ ಮಾತನಾಡಿದ ಕ್ರೀಡಾ ಸಚಿವರು, “ಭಾರತ ಪ್ಯಾರಾಲಿಂಪಿಕ್ಸ್‌ ಹಾಗೂ ಪ್ಯಾರಾ ಕೂಟಗಳಲ್ಲಿ ಪ್ರಗತಿ ಕಾಣುತ್ತ ಇದೆ. 2016ರಲ್ಲಿ 4 ಪದಕವಿದ್ದದ್ದು, ಟೋಕಿಯೊದಲ್ಲಿ 19ಕ್ಕೆ, ಈಗ 29ಕ್ಕೆ ಏರಿದೆ. 18ನೇ ಸ್ಥಾನ ಪಡೆದಿದ್ದೇವೆ. ಮುಂದಿನ ಲಾಸ್‌ ಏಂಜಲೀಸ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಇನ್ನೂ ಹೆಚ್ಚಿನ ಪದಕ ಜಯಿಸಬೇಕು. ಇದಕ್ಕಾಗಿ ಸರಕಾರ ಎಲ್ಲ ರೀತಿಯ ಸೌಕರ್ಯ, ಬೆಂಬಲ, ಆರ್ಥಿಕ ನೆರವು ನೀಡಲು ಸಿದ್ಧವಿದೆ’ ಎಂದರು.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.