Siddaramaiah ರಾಜೀನಾಮೆಗೆ ಬಿಜೆಪಿ ಆಗ್ರಹ

ವಾಲ್ಮೀಕಿ ಹಗರಣ ಸರಕಾರಿ ಪ್ರಾಯೋಜಿತ: ಸುನಿಲ್‌; ತುಕಾರಾಂ ವಜಾ ಮಾಡಿ: ರವಿಕುಮಾರ್‌

Team Udayavani, Sep 11, 2024, 12:25 AM IST

Siddaramaiah ರಾಜೀನಾಮೆಗೆ ಬಿಜೆಪಿ ಆಗ್ರಹ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ವ್ಯಾಪಕ ಅಕ್ರಮದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಪಾತ್ರದ ಬಗ್ಗೆ ಜಾರಿ ನಿರ್ದೇಶನಾಲಯ ತನ್ನ ಆರೋಪ ಪಟ್ಟಿಯಲ್ಲಿ ಉಲ್ಲೇಖೀಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

ವಾಲಿ¾ಕಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಮಧ್ಯಾಂತರ ಚಾರ್ಜ್‌ಶೀಟ್‌ ಸಲ್ಲಿಸಿದ್ದು, ಮಾಜಿ ಸಚಿವ ನಾಗೇಂದ್ರ ಅವರ ಹೆಸರನ್ನು ಉಲ್ಲೇಖಿಸಲಾಗಿದೆ.

ನಾಗೇಂದ್ರ ಅಣತಿಯಂತೆಯೇ ಸಂಪೂರ್ಣ ಹಣದ ವಹಿವಾಟು ನಡೆದಿದೆ. 21 ಕೋಟಿ ರೂ.ಗಳನ್ನು ಲೋಕಸಭಾ ಚುನಾವಣೆಗೆ ಬಳಸಿಕೊಳ್ಳಲಾಗಿದೆ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಇದರಿಂದ ವಾಲ್ಮೀಕಿ ಹಗರಣ ಸರಕಾರಿ ಪ್ರಾಯೋಜಿತ ಎಂಬುದು ಸಾಬೀತಾಗಿದೆ ಎಂದು ಮಾಜಿ ಸಚಿವ ವಿ. ಸುನಿಲ್‌ ಕುಮಾರ್‌ ಆರೋಪಿಸಿದ್ದಾರೆ.

ರಾಜ್ಯ ಸರಕಾರ ರಚಿಸಿದ ಎಸ್‌ಐಟಿ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ನಾಗೇಂದ್ರ ಹೆಸರನ್ನು ಉದ್ದೇಶಪೂರ್ವಕವಾಗಿ ಬಚ್ಚಿಡಲಾಗಿತ್ತು. ಸಿಎಂ ಸಿದ್ದರಾಮಯ್ಯ ಅವರ ಮೂಗಿನ ನೇರದಲ್ಲಿ ಈ ಎಲ್ಲ ತಪ್ಪುಗಳು ಹಾಗೂ ಅವ್ಯವಹಾರ ನಡೆದಿದ್ದು ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಐತಿಹಾಸಿಕ ಅನ್ಯಾಯ ಎಸಗಲಾಗಿದೆ. ಸಿದ್ದರಾಮಯ್ಯನವರೇ ನೈತಿಕತೆ ಎಂಬ ಪದ ನಿಮ್ಮ ಡಿಕ್ಷನರಿಯಲ್ಲಿದ್ದರೆ ಕೂಡಲೇ ರಾಜೀನಾಮೆ ಕೊಡಿ ಎಂದು ಆಗ್ರಹಿಸಿದ್ದಾರೆ.

ವಜಾ ಮಾಡಿ
ವಾಲ್ಮೀಕಿ ನಿಗಮದ 21 ಕೋಟಿ ಮೊತ್ತವನ್ನು ಬಳ್ಳಾರಿ ಚುನಾವಣೆಗೆ ಖರ್ಚು ಮಾಡಿದ್ದಾಗಿ ಇ.ಡಿ. ತನ್ನ ದೋಷಾರೋಪ ಪಟ್ಟಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಆದ್ದರಿಂದ ಬಳ್ಳಾರಿ ಸಂಸದರ ಸ್ಥಾನದಿಂದ ತುಕಾರಾಂ ಅವರನ್ನು ಚುನಾವಣ ಆಯೋಗವು ಕೂಡಲೇ ವಜಾ ಮಾಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ್‌ ಒತ್ತಾಯಿಸಿದ್ದಾರೆ.

ಇದು ಅಂತಾರಾಜ್ಯ ಭ್ರಷ್ಟಾಚಾರ ಪ್ರಕರಣ. ಸಿದ್ದರಾಮಯ್ಯ ಮತ್ತು ಶಿವಕುಮಾರರ ಇನ್ವೆಸ್ಟಿಗೇಶನ್‌ ಟೀಂ (ಎಸ್‌ಐಟಿ) ನಾಗೇಂದ್ರ ಹೆಸರನ್ನು ತನ್ನ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿರಲಿಲ್ಲ. ಅವರಿಗೆ ಕ್ಲೀನ್‌ ಚಿಟ್‌ ಕೊಡಲಾಗಿತ್ತು. ಎಸ್‌ಐಟಿ ಮೂಲಕ ಮಾಜಿ ಸಚಿವರನ್ನು ಉಳಿಸುವ ಪ್ರಯತ್ನ ನಡೆದಿತ್ತು. ಸರ್ಕಾರದ ಹಸ್ತಕ್ಷೇಪ, ಬೆಂಬಲ ಇಲ್ಲದೆ, ವಾಲ್ಮೀಕಿ ನಿಗಮದ ಹಗರಣ ನಡೆಯಲು ಸಾಧ್ಯವೇ ಇಲ್ಲ ಎಂದು ಆರೋಪಿಸಿದರು.

ಸಂಚು
ರಾಜ್ಯ ಸರಕಾರ ರಚಿಸಿದ ಎಸ್‌ಐಟಿ ಚಾರ್ಜ್‌ಶೀಟ್‌ಗೂ ಇಡಿ ಆರೋಪ ಪಟ್ಟಿಗೂ ಅಜಗಜಾಂತರವಿದೆ. ಈ ಪ್ರಕರಣವನ್ನು ಮುಚ್ಚಿ ಹಾಕುವುದಕ್ಕೆ ರಾಜ್ಯ ಸರಕಾರ ಸಂಚು ನಡೆಸಿತ್ತು. ಇದಕ್ಕಾಗಿ ಪೊಲೀಸ್‌ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.