Central Governmnet: ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಜಿಲ್ಲೆಯ ಬ್ಯಾಂಕ್‌ಗಳ ಹಿನ್ನಡೆ

ಬ್ಯಾಂಕಿಂಗ್‌ ಸಲಹಾ ಸಮಿತಿ ಸಭೆಯಲ್ಲಿ ಮಾಹಿತಿ ಬಹಿರಂಗ

Team Udayavani, Sep 11, 2024, 6:28 AM IST

Chowta

ಮಂಗಳೂರು: ಕೇಂದ್ರ ಪುರಸ್ಕೃತ “ಮುದ್ರಾ’, ಪ್ರಧಾನ ಮಂತ್ರಿ ಜೀವನ್‌ಜ್ಯೋತಿ ವಿಮಾ, ಪಿಎಂ ಸ್ವನಿಧಿ ಸಹಿತ ಹಲವು ಯೋಜನೆಗಳಲ್ಲಿ ಜಿಲ್ಲೆಯ ಅನೇಕ ಬ್ಯಾಂಕ್‌ಗಳು ಹಿಂದುಳಿದಿರುವುದು ಮಂಗಳವಾರ ನಡೆದ ಬ್ಯಾಂಕಿಂಗ್‌ ಸಲಹಾ ಸಮಿತಿ ಸಭೆಯಲ್ಲಿ ಬಹಿರಂಗಗೊಂಡಿದೆ.

ಸ್ಟಾಂಡ್‌ ಅಪ್‌ ಇಂಡಿಯಾ ಯೋಜನೆಯಲ್ಲಿ ಜಿಲ್ಲೆಗೆ 1,300 ಗುರಿ ಇದ್ದರೂ 8 ಅರ್ಜಿಗಳಷ್ಟೇ ಬಂದಿರುವ ಬಗ್ಗೆ ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ಅಚ್ಚರಿ ವ್ಯಕ್ತಪಡಿಸಿದರು. ಸಾಮಾನ್ಯವಾಗಿ ಗುರಿ ಹಾಕುವಾಗಲೇ ಜಿಲ್ಲೆಯಲ್ಲಿ ಇಷ್ಟು ಬರಬಹುದು ಎಂಬ ಚರ್ಚೆ ನಡೆದಿರುತ್ತದೆ, ಆದರೆ ಶೇ. 50ರಷ್ಟಾದರೂ ಅರ್ಜಿ ಬಾರದಿರುವುದಕ್ಕೆ ಕಾರಣವೇನು? ಯೋಜನೆಯ ಬಗ್ಗೆ ಜನರಿಗೆ ಯಾಕೆ ಆಸಕ್ತಿ ಇಲ್ಲ? ಅಥವಾ ಬ್ಯಾಂಕ್‌ಗಳ ನಿರಾಸಕ್ತಿಯೇ ಎನ್ನುವುದರ ಬಗ್ಗೆ ಮಾಹಿತಿ ಒದಗಿಸುವಂತೆ ಬ್ಯಾಂಕ್‌ ಅಧಿಕಾರಿಗಳಿಗೆ ಸೂಚಿಸಿದರು.

ಸ್ಟಾಂಡ್‌ ಅಪ್‌ ಇಂಡಿಯಾದಂತಹ ಕಾರ್ಯಕ್ರಮಗಳಲ್ಲಿ ಇತರ ಯೋಜನೆಗಳಲ್ಲಿ ಹೆಚ್ಚಿನ ಪ್ರಯೋಜನವಿರುವಾಗ ಅದಕ್ಕೇ ಜನ ಹೋಗುತ್ತಾರೆ. ಮುದ್ರಾ ಸಾಲ ಯೋಜನೆಯಲ್ಲಿ ಸೆಕ್ಯೂರಿಟಿ ಇರಿಸಬೇಕಾದ ಪ್ರಮೇಯವಿಲ್ಲ ಎನ್ನುವುದು ಬಿಟ್ಟರೆ ಹೆಚ್ಚಿನ ಪ್ರಯೋಜನವಿಲ್ಲ ಎನ್ನುವ ಕಾರಣವಿರಬಹುದು ಎಂದು ಬ್ಯಾಂಕ್‌ ಅಧಿಕಾರಿಗಳು ತಿಳಿಸಿದರು. ಉಳಿತಾಯ ಖಾತೆ ಹೊಂದಿರು ವವರನ್ನೇ ಮನವೊಲಿಸಿ, ಅವರಿಗೆ ಜೀವ ವಿಮೆ ಹಾಗೂ ಅಪಘಾತ ವಿಮೆ ಒದಗಿಸುವ ಜೀವನ್‌ಜ್ಯೋತಿ ಉತ್ತಮ ಯೋಜನೆಯಾಗಿದ್ದು, ಅದರಲ್ಲಿ ಕೆಲವೊಂದು ಬ್ಯಾಂಕ್‌ಗಳು ಶೂನ್ಯ ಸಾಧನೆ ಮಾಡಿರುವುದರ ಬಗ್ಗೆ ಜಿ. ಪಂ. ಸಿಇಒ ಡಾ| ಆನಂದ್‌ ಅಸಮಾಧಾನ ವ್ಯಕ್ತಪಡಿಸಿದರು.

ಪಿಎಂ ಸ್ವನಿಧಿಗೆ ನೆರವಾಗಿ: ಪಿಎಂ ಸ್ವನಿಧಿ ಯೋಜನೆಯನ್ನು ಬೀದಿ ಬದಿ ವ್ಯಾಪಾರಿಗಳಿಗೆ ವಿನ್ಯಾಸ ಪಡಿಸಲಾಗಿದೆ, ಅಂತಹವರು ಬ್ಯಾಂಕ್‌ ಮೆಟ್ಟಿಲೇರಲು ಹೆದರುತ್ತಾರೆ, ಅವರಿಗೆ ಮನಪಾ ಅಧಿಕಾರಿಗಳು ನೆರವಾಗಬೇಕು ಎಂದು ಸಂಸದ ಚೌಟ ಸೂಚಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಮನಪಾ ಅಧಿಕಾರಿ, ಕೆಲವೊಮ್ಮೆ ಬ್ಯಾಂಕ್‌ ಶಾಖೆಗಳಿಗೆ 2-3 ಬಾರಿ ಹೋದರೂ ಬ್ಯಾಂಕ್‌ಗಳಿಂದ ಸರಿಯಾದ ಸ್ಪಂದನೆ ಇಲ್ಲದ ಕಾರಣ ಜನ ಬರುತ್ತಿಲ್ಲ ಎಂದರು. ಒಂದು ವೇಳೆ ಬ್ಯಾಂಕ್‌ಗಳು ಸಮಸ್ಯೆ ಮಾಡಿದರೆ, ಅದರ ಕುರಿತು ಲಿಖೀತವಾಗಿ ಮಾಹಿತಿ ನೀಡಿ ಎಂದು ಚೌಟ ಹೇಳಿದರು.

ಪಿಎಂಇಜಿಪಿಯಡಿ ಸಬ್ಸಿಡಿಗೆ ವಿಳಂಬ
ಪಿಎಂ ಉದ್ಯೋಗ ಸೃಷ್ಟಿ ಕಾರ್ಯಕ್ರಮ (ಪಿಎಂಇಜಿಪಿ) ದಡಿ ಕಿರು ಮತ್ತು ಮಧ್ಯಮ ಕೈಗಾರಿಕಾ ಚಚುವಟಿಕೆಗಳಿಗೆ ಸಾಲ ಪಡೆದು ಮರುಪಾವತಿಸಿದ್ದರೂ ನೂರಾರು ಉದ್ದಿಮೆದಾರರಿಗೆ ಸಿಗಬೇಕಾಗಿರುವ ಸಬ್ಸಿಡಿ ಹಲವು ವರ್ಷಗಳಿಂದ ದೊರೆತಿಲ್ಲ ಎಂಬ ಮಾಹಿತಿ ಬಗ್ಗೆ ಸಂಸದರು ಕಳವಳ ವ್ಯಕ್ತಪಡಿಸಿದರು. 2019ರಿಂದೀಚೆಗೆ ಪಿಎಂಇಜಿಪಿಯಡಿ ಸಾಲ ಪಡೆದವರು ಮರುಪಾವತಿ ಮಾಡಿದ್ದರೂ ಸಬ್ಸಿಡಿ ದೊರಕಿಲ್ಲ. ಇದರಿಂದಾಗಿ ಈ ಉದ್ದಿಮೆದಾರರು ಬೇರೆ ಯಾವುದೇ ರೀತಿಯ ಸಾಲ ಪಡೆಯಲು ಸಾಧ್ಯವಾಗದೆ ಉದ್ಯಮವನ್ನೇ ಮುಚ್ಚುವಂತಹ ಸ್ಥಿತಿ ಎದುರಾಗಿದೆ ಎಂಬ ಮಾಹಿತಿ ಸಭೆಯಲ್ಲಿ ಕೇಳಿಬಂತು.

ಸಾಲ ಪಡೆಯುವ ಉದ್ದಿಮೆದಾರರಿಗೆ ಅವರ ಖಾತೆಗೆ ಸಬ್ಸಿಡಿ ಹಣವನ್ನು ವರ್ಗಾಯಿಸಲಾಗುತ್ತದೆ. ಆದರೆ ಸಾಲ ಮರುಪಾವತಿ ಬಳಿಕ ತೃತೀಯ ಪಕ್ಷೀಯ ಪರಿಶೀಲನೆ ಆಗಬೇಕಾಗುತ್ತದೆ. ಹಿಂದೆ ಜೆನೆಸಿಸ್‌ ಸಂಸ್ಥೆ ನಡೆಸುತ್ತಿದ್ದ ಪರಿಶೀಲನೆಯನ್ನು ಇದೀಗ ಕೇಂದ್ರ ಸರಕಾರವು ಅಂಚೆ ಇಲಾಖೆಗೆ ವರ್ಗಾಯಿಸಿದೆ. ಎಲ್ಲ ರಾಜ್ಯಗಳಲ್ಲೂ ಇದೀಗ ಈ ಬಗ್ಗೆ ಪ್ರಕ್ರಿಯೆಗಳು ನಡೆಯುತ್ತಿದ್ದು ಇದರಿಂದಾಗಿ ಸಬ್ಸಿಡಿ ವಿತರಣೆ ವಿಳಂಬವಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರಗಳ ಸಹಾಯಕ ವ್ಯವಸ್ಥಾಪಕ ಅನಿಲ್‌ಕುಮಾರ್‌ ಮಾಹಿತಿ ನೀಡಿದರು.

ಶೇ.14ರಷ್ಟು ಬೆಳವಣಿಗೆ: ಜಿಲ್ಲೆಯ ಬ್ಯಾಂಕ್‌ಗಳು ಜೂನ್‌ ಅಂತ್ಯಕ್ಕೆ ಒಟ್ಟು ವ್ಯವಹಾರ 1,22,649.22 ಕೋಟಿ ರೂ. ದಾಖಲಿಸಿದ್ದು ವರ್ಷದಿಂದ ವರ್ಷಕ್ಕೆ ಲೆಕ್ಕಾಚಾರದಲ್ಲಿ ಶೇ.14.92ರಷ್ಟು ಬೆಳವಣಿಗೆ ಸಾಧಿಸಿವೆ. ಒಟ್ಟು ಠೇವಣಿ 70,806 ಕೋಟಿ ರೂ. ಹಾಗೂ ಒಟ್ಟು ಸಾಲ 51,843.10 ಕೋಟಿ ರೂ. ಆಗಿದೆ.
ಕೃಷಿ ಕ್ಷೇತ್ರಕ್ಕೆ ತ್ತೈಮಾಸಿಕ ಗುರಿಯಾದ 3782.42 ಕೋಟಿ ರೂ.ರಲ್ಲಿ 3032.01 ಕೋಟಿ ರೂ. ವಿತರಿಸಲಾಗಿದೆ. ಅದೇ ರೀತಿ ಎಂಎಸ್‌ಎಂಇ (ಸಣ್ಣ, ಅತಿ ಸಣ್ಣ , ಮಧ್ಯಮ ಉದ್ಯಮ) ತ್ತೈಮಾಸಿಕ ಗುರಿಯಾದ 2003.93 ರೂ. ಇದ್ದರೆ 3282.42 ಕೋಟಿ ರೂ. ಗುರಿ ಸಾಧಿಸಲಾಗಿದೆ.
ಭಾರತೀಯ ರಿಸರ್ವ್‌ ಬ್ಯಾಂಕ್‌ನ ಎಜಿಎಂ ಅರುಣ್‌ ಕುಮಾರ್‌, ಜಿಲ್ಲಾ ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ಕವಿತಾ ಶೆಟ್ಟಿ ಉಪಸ್ಥಿತರಿದ್ದರು.

ಗುರಿ ಮೀರಿದ ಸಾಧನೆಯ ಹಿಂದೆ…??
ಜಿಲ್ಲಾ ಸಾಲ ಯೋಜನೆಗಳಲ್ಲಿ ಯಾವಾಗಲೂ ದ.ಕ. ಗುರಿ ಮೀರಿದ ಸಾಧನೆ ಮಾಡುತ್ತಿದೆ, ಆದರೆ ಕೆಲವೊಮ್ಮೆ ಹೊರ ಜಿಲ್ಲೆಯವರಿಗೂ ಇಲ್ಲಿ ಸಾಲ ನೀಡಲಾಗುತ್ತಿದ್ದು, ಅದನ್ನೂ ಸೇರಿಸಿರುವ ಕಾರಣ ಇದು ನಡೆಯುತ್ತಿರಬಹುದು ಎಂದು ನಬಾರ್ಡ್‌ ಡಿಜಿಎಂ ಸಂಗೀತಾ ಕರ್ತ ಹೇಳಿದರು.
ಆದಷ್ಟೂ ಸಾಲ ನೀಡಿಕೆಯಿಂದ ದ.ಕ. ಜಿಲ್ಲೆಯೊಳಗೇ ಆಸ್ತಿಯ ಸೃಷ್ಟಿಯಾಗಬೇಕು, ಹೊರ ಜಿಲ್ಲೆಯವರಿಗೆ ಕೊಡಬಾರದು ಎಂದಿಲ್ಲ, ಆದರೆ ಅದನ್ನು ಸಾಲ ಯೋಜನೆ ವ್ಯಾಪ್ತಿಯೊಳಗೆ ತೋರಿಸದಿರುವುದು ಉತ್ತಮ ಎಂದರು.

ಟಾಪ್ ನ್ಯೂಸ್

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.