Problem Solve: ಬಿಪಿಸಿಎಲ್‌ ಅಧಿಕಾರಿಗಳ ಅಸಹಕಾರ: ತೈಲ ಸಾಗಾಟ ಟ್ಯಾಂಕರ್‌ ಮುಷ್ಕರ

ಜಿಲ್ಲಾಡಳಿತದ ಮಧ್ಯಸ್ಥಿಕೆಯಲ್ಲಿ ಸಂಧಾನ; ಲೋಡಿಂಗ್‌ ಆರಂಭ

Team Udayavani, Sep 11, 2024, 1:41 AM IST

BPCL-MUSKARA

ಬೈಕಂಪಾಡಿ: ಬೈಕಂಪಾಡಿಯ ಬಿಪಿಸಿಎಲ್‌ ಪೆಟ್ರೋಲಿಯಂ ಡಿಪೋದಲ್ಲಿ ಟ್ಯಾಂಕರ್‌ ಚಾಲಕರ ಸಮಸ್ಯೆಗಳಿಗೆ ಬಿಪಿಸಿಎಲ್‌ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ, ಜತೆಗೆ ಈ ಹಿಂದೆ ಇದ್ದಂತೆ ಮಾಸಿಕ ಐದು – ಆರು ಸಾವಿರ ಕಿಲೋಮೀಟರ್‌ಗಳ ಬದಲಾಗಿ ಕೇವಲ 2 ಸಾವಿರ ಕಿ.ಮೀ.ಗಳಿಗೆ ಸಂಚಾರ ನಿರ್ಬಂಧಿಸಿರುವುದನ್ನು ವಿರೋಧಿಸಿ ಎರಡು ದಿನಗಳ ಕಾಲ ನಡೆಯುತ್ತಿದ್ದ ಟ್ಯಾಂಕರ್‌ ಮುಷ್ಕರಕ್ಕೆ ತಾತ್ಕಾಲಿಕವಾಗಿ ವಿರಾಮ ದೊರೆತಿದೆ.

ಜಿಲ್ಲಾಡಳಿತದ ಮಧ್ಯಸ್ಥಿಕೆಯಲ್ಲಿ ಟ್ರಾನ್ಸ್‌ಫೋರ್ಟ್‌ ಪದಾಧಿಕಾರಿಗಳು, ಟ್ಯಾಂಕರ್‌ ಮಾಲಕರು ಸೇರಿ ಬಿಪಿಸಿಎಲ್‌ ಅಧಿಕಾರಿಗಳ ಜತೆ ಸುದೀರ್ಘ‌ ಮಾತುಕತೆ ನಡೆಸಿದರು. ಮಂಗಳವಾರ ಜಿಲ್ಲಾಧಿಕಾರಿಯ ಪ್ರತಿನಿಧಿಯಾಗಿ ಬಂದಿರುವ ಅಧಿಕಾರಿ ಗೋಕುಲ್‌ದಾಸ್‌ ನಾಯಕ್‌ ಅವರು ಮಾತುಕತೆ ನಡೆಸಿ, ಟ್ಯಾಂಕರ್‌ ಚಾಲಕರ ಸಮಸ್ಯೆಗಳಿಗೆ ಪರಿಹಾರ ದೊರಕಿಸುವಲ್ಲಿ ಪ್ರಯತ್ನವಾಗಿದೆ.

ತೈಲ ಸಾಗಾಟವನ್ನು ಒಂದು ಟ್ಯಾಂಕರ್‌ಗೆ ಹಿಂದಿನಂತೆಯೇ ಆರೇಳು ಸಾವಿರ ಕಿ.ಮೀ. ಸಂಚಾರಕ್ಕೆ ನೀಡುವ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಹಿರಿಯ ಅಧಿಕಾರಿಗಳ ತೀರ್ಮಾನವಾಗಬೇಕಿದೆ. ಇದರ ಬಗ್ಗೆ ಬಿಪಿಸಿಎಲ್‌ ಡಿಪೋ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ. ಮುಂದಿನ ಎರಡು ವಾರದೊಳಗಾಗಿ ಚಾಲಕರ ಸಮಸ್ಯೆ ಪರಿಹಾರವಾಗುವ ವಿಶ್ವಾಸವಿದೆ. ತತ್‌ಕ್ಷಣ ಮುಷ್ಕರವನ್ನು ನಿಲ್ಲಿಸಿ ತೈಲ ಸರಬರಾಜಿಗೆ ಟ್ಯಾಂಕರ್‌ ಚಾಲಕರ ಮುಂದಾಗಬೇಕು ಎಂದು ಮನವಿ ಮಾಡಿದರು.

ಸಮಸ್ಯೆಗಳ ಕುರಿತಾಗಿ ಟ್ಯಾಂಕರ್‌ ಚಾಲಕರು ಅಭಿಪ್ರಾಯ ವ್ಯಕ್ತಪಡಿಸಿ, ತೈಲ ಸಾಗಾಟ ಟ್ಯಾಂಕರ್‌ಗೆ ಸೂಕ್ತ ಸಮಯಕ್ಕೆ ಲೋಡಿಂಗ್‌ ಆಗುತ್ತಿಲ್ಲ, ಇದರಿಂದ ನಿಗದಿತ ಸಮಯದಲ್ಲಿ ಸಂಚಾರ, ಮನೆ ತಲುಪುವುದು ಕಷ್ಟವಾಗುತ್ತದೆ. ಕೆಲವು ಕಡೆ ಅನ್‌ಲೋಡಿಂಗ್‌ಗೆ ಮೂರ್‍ನಾಲ್ಕು ದಿನಗಳ ಕಾಲ ಕಾಯುವ ಸ್ಥಿತಿಯಿದೆ.
ಹಲವು ಸಂದರ್ಭಗಳಲ್ಲಿ ಸಂಸ್ಥೆಯ ನಿಗದಿತ ಅವಧಿಗಿಂತ ಹೆಚ್ಚು ಸಮಯ ಅನಿವಾರ್ಯವಾಗಿ ಟ್ಯಾಂಕರ್‌ಗಳನ್ನು ನಿಲ್ಲಿಸಿದ ಸಂದರ್ಭ ಜಿಪಿಎಸ್‌ ಲಾಕ್‌ ಸಿಸ್ಟಮ್‌ ತೆರವು ಮಾಡಲು ಹೇಳಿದರೆ ಇಲ್ಲಿನ ಡಿಪೋದ ಅಧಿಕಾರಿಗಳು ಸರಿಯಾದ ಸ್ಪಂದಿಸುತ್ತಿಲ್ಲ. ಜತೆಗೆ ಚಾಲಕರ ವಿಶ್ರಾಂತಿ ಕೊಠಡಿಯಲ್ಲಿ ಕುಡಿಯುವ ನೀರು, ಶೌಚಾಲಯ ಮತ್ತಿತರ ಸಮಸ್ಯೆಗಳು ಇವೆ. ಇದನ್ನು ಕೂಡ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಬೇಡಿಕೆಗೆ ಸ್ಪಂದನೆ
ಟ್ಯಾಂಕರ್‌ ಚಾಲಕರ ಬೇಡಿಕೆಗೆ ಸ್ಪಂದಿಸಿರುವ ಅಧಿಕಾರಿಗಳು ನಿಗದಿತ ಸಮಯದಲ್ಲಿ ಈಡೇರಿಸಲಾಗುವುದು ಎಂದು ಬಿಪಿಸಿಎಲ್‌ ಭರವಸೆ ನೀಡಿದ ಬಳಿಕ ತೈಲ ಲೋಡಿಂಗ್‌ ಆರಂಭಿಸಲಾಯಿತು. ತೈಲ ಸಾಗಾಟ ಟ್ಯಾಂಕರ್‌ ಮಾಲಕರ ವತಿಯಿಂದ ಸುಜಿತ್‌ ಆಳ್ವ, ಇಕ್ಬಾಲ್‌, ಬಿಪಿಸಿಎಲ್‌ನ ಹಿರಿಯ ಅಧಿಕಾರಿ ನೀರಜ್‌ ಅಗರ್ವಾಲ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.