BJP ಶಾಸಕ ಹೇಳಿಕೆ: ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆದರೆ ಸಂತೋಷ!
Team Udayavani, Sep 11, 2024, 11:47 AM IST
ಬೆಳಗಾವಿ : ಮುಖ್ಯಮಂತ್ರಿ ಸ್ಥಾನಕ್ಕೆ ಉತ್ತರ ಕರ್ನಾಟಕದ ನಾಯಕ ಸತೀಶ್ ಜಾರಕಿಹೊಳಿ ನೇಮಕವಾದರೆ ಸಂತೋಷ ಎಂದು ಖಾನಾಪುರ ಕ್ಷೇತ್ರದ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ ಹೇಳಿಕೆ ಬುಧವಾರ(ಸೆ11) ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಹಲಗೇಕರ, ‘ಸತೀಶ ಜಾರಕಿಹೊಳಿ ಬೆಳಗಾವಿ ಜಿಲ್ಲೆಯವರು. ಅದರಲ್ಲೂ ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಅವರು ಈ ಭಾಗದ ಸಮಸ್ಯೆಗಳಿಗೆ ಹೆಚ್ಚಾಗಿ ಸ್ಪಂದಿಸಲಿದ್ದಾರೆ. ಸತೀಶ ಜಾರಕಿಹೊಳಿ ಅವರಿಗೆ ಸ್ಥಳೀಯ ಸಮಸ್ಯೆಗಳ ಅರಿವಿದೆ. ಹಿಂದುಳಿದಿರುವ ಖಾನಾಪುರ ತಾಲೂಕಿನ ಸಮಸ್ಯೆಗಳಿಗೆ ಅವರು ಸ್ಪಂದಿಸಲಿದ್ದಾರೆ ಎಂಬ ವಿಶ್ವಾಸವಿದೆ. ಅವರ ಜತೆಗೆ ನನಗೆ ಉತ್ತಮ ಸಂಬಂಧ ಇದ್ದು ಒಂದು ವೇಳೆ ಅವರು ಮುಖ್ಯಮಂತ್ರಿ ಆದರೆ ಸಂತೋಷ’ ಎಂದರು.
ಸತೀಶ್ ಜಾರಕಿಹೊಳಿ ಪರವಾಗಿ ಅಭಿಮಾನಿಗಳು ಆರಂಭಿಸಿರುವ ಅಭಿಯಾನಕ್ಕೆ ಬಿಜೆಪಿ ಶಾಸಕ ಪರೋಕ್ಷ ಬೆಂಬಲ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ
Tungabhadra ಡ್ಯಾಂನ ಎಲ್ಲ 33 ಗೇಟ್ ಬದಲಿಸಲು ತಜ್ಞರ ಸಲಹೆ
Congress-NC ಮೈತ್ರಿಗೆ ಪಾಕ್ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
High Court: ಬಾಂಬ್ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.