![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Sep 11, 2024, 11:51 AM IST
ಆಂಧ್ರಪ್ರದೇಶ(ಗುಂಟೂರು): ವಶಪಡಿಸಿಕೊಂಡಿದ್ದ ಅಕ್ರಮ ಮದ್ಯದ ಬಾಟಲಿಗಳನ್ನು ನಾಶ ಮಾಡುತ್ತಿದ್ದ ವೇಳೆಯಲ್ಲಿಯೇ ಪೊಲೀಸರ ಎಚ್ಚರಿಕೆಯ ನಡುವೆಯೇ ಮದ್ಯಪ್ರಿಯರು ಬಾಟಲಿಗಳನ್ನು ಹೊತ್ತೊಯ್ದ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರಾಜಧಾನಿ ಅಮರಾವತಿಯಿಂದ ಸುಮಾರು 40 ಕಿಲೋ ಮೀಟರ್ ದೂರದಲ್ಲಿರುವ ಗುಂಟೂರಿನಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಏಯ್, ಏಯ್ ಎಂದು ಕೂಗಾಡುತ್ತಿರುವ ನಡುವೆಯೇ ಜನರು ಗುಂಪಿನಲ್ಲಿ ಬಂದು ಬಾಟಲಿಗಳನ್ನು ಹೊತ್ತೊಯ್ದಿರುವುದಾಗಿ ವರದಿ ತಿಳಿಸಿದೆ.
ಪೊಲೀಸರ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ವಶಪಡಿಸಿಕೊಂಡಿದ್ದ ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಮದ್ಯವನ್ನು ಡಂಪಿಂಗ್ ಯಾರ್ಡ್ ನಲ್ಲಿ ನಾಶಪಡಿಸುತ್ತಿದ್ದ ವೇಳೆ ಏಕಾಏಕಿ ಜನರ ಗುಂಪು ಲಗ್ಗೆ ಇಟ್ಟು ಮದ್ಯದ ಬಾಟಲಿಗಳನ್ನು ಹೊತ್ತೊಯ್ದಿರುವ ಘಟನೆಯಿಂದ ಪೊಲೀಸರೇ ತಬ್ಬಿಬ್ಬಾದ ಘಟನೆ ನಡೆದಿದೆ.
View this post on Instagram
ಮದ್ಯದ ಬಾಟಲಿ ನಾಶದ ಸಂದರ್ಭದಲ್ಲಿ ಜನರು ಲಗ್ಗೆ ಇಟ್ಟು ಬಾಟಲಿ ಹೊತ್ತೊಯ್ಯುತ್ತಾರೆ ಎಂಬ ಊಹೆ ಪೊಲೀಸರಿಗೂ ಇದ್ದಿರಲಿಲ್ಲ. ಜನರು ಮುಗಿಬಿದ್ದು ಬಾಟಲಿ ಹೊತ್ತೊಯ್ಯುತ್ತಿದ್ದ ವೇಳೆ ಪೊಲೀಸರು ಅವರನ್ನು ತಡೆಯುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…
Jamui: ಸಾಲ ರಿಕವರಿಗೆ ಬಂದ ಏಜೆಂಟ್ ನನ್ನೇ ಮದುವೆಯಾದ ವಿವಾಹಿತ ಮಹಿಳೆ!
Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ
Malaysia; ಭಾರತ ಮೂಲದ ಮಹಿಳೆಯಿಂದ ಕೆಲಸಕ್ಕಾಗಿ ಪ್ರತಿದಿನ 700 ಕಿ.ಮೀ. ವಿಮಾನ ಯಾನ!
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.