Kottigehara:ಒಪ್ಪತ್ತಿನ ಊಟ ಬಿಟ್ಟು ದೇಶ ಸೇವೆಗೆ ಆರ್ಥಿಕ ನೆರವು ನೀಡುವ ಮಹಾನುಭಾವ

ಯೋಧರಿಗೆ ಆರ್ಥಿಕ ನೆರವು ನೀಡುವ ದೇಶ ಭಕ್ತ ನರಸಿಂಹರಾವ್ ಹೆಬ್ಬಾರ್

Team Udayavani, Sep 11, 2024, 2:57 PM IST

Kottigehara:ಒಪ್ಪತ್ತಿನ ಊಟ ಬಿಟ್ಟು ದೇಶ ಸೇವೆಗೆ ಆರ್ಥಿಕ ನೆರವು ನೀಡುವ ಮಹಾನುಭಾವ

ಕೊಟ್ಟಿಗೆಹಾರ: ಸೈನ್ಯಕ್ಕೆ ಸೇರಬೇಕೆಂಬ ಮಹಾ ಆಸೆಯಿಂದ ವಂಚಿತರಾಗಿದ್ದ ವ್ಯಕ್ತಿ ಒಬ್ಬರು ಸೈನ್ಯಕ್ಕೆ ಹಣ ಕಳಿಸುವ ಮೂಲಕ ದೇಶಪ್ರೇಮ ಮೆರೆದ ಅಪರೂಪದ ವ್ಯಕ್ತಿಯೊಬ್ಬರ ಕಥೆ ಇದು.

ಸೈನ್ಯಕ್ಕೆ ಸೇರಲಾಗದಿದ್ದರೂ ಒಪ್ಪತ್ತಿನ ಊಟ ಬಿಟ್ಟು ದೇಶ ಸೇವೆಗೆ ಆರು ದಶಕಗಳಿಂದ ದೇಶದ ಸೈನ್ಯದ ಖಾತೆಗೆ ಹಣ ಕಳುಹಿಸುತ್ತಿರುವ ದೇಶ ಭಕ್ತ ನರಸಿಂಹರಾವ್ ಹೆಬ್ಬಾರ್ ಕೂಡ ಒಬ್ಬರು.

ಸುಮಾರು 86 ವರ್ಷದ ಹೆಬ್ಬಾರ್ ಮೂಡಿಗೆರೆ ತಾಲ್ಲೂಕಿನ ಕೂವೆಯ ಮಾವಿನಕಟ್ಟೆ ನಿವಾಸಿ. ನಮಗೆ ವಯಸ್ಸಾಗಿದೆ ಮನೆಯಲ್ಲಿ ವಿಶ್ರಾಂತಿ ಪಡೆದರೆ ಸಾಕು ಎಂದು ಕೊಂಡು ಜೀವನ ನಡೆಸುವ ಜನರೇ ಹೆಚ್ಚು.‌ ಆದರೆ ನರಸಿಂಹರಾವ್ ಹೆಬ್ಬಾರ್ ಸಣಕಲು ದೇಹವಾಗಿದ್ದರೂ ಪಾದರಸದಂತೆ ಚುರುಕು. ಮನೆಯಲ್ಲಿ ಸುಮ್ಮನೇ ಕೂರುವುದಿಲ್ಲ.

 

ಕೊಟ್ಟಿಗೆಹಾರ, ಬಾಳೆಹೊನ್ನೂರು,ಮತ್ತಿತರ ಕಡೆ ವೀಳ್ಯದೆಲೆ ವ್ಯಾಪಾರದ ಕೆಲಸವನ್ನು ಮಾಡಿ ದಿನ ಸಾಗಿಸುತ್ತಾರೆ.

ಯುವಕನಿರುವಾಗ ಸೈನ್ಯಕ್ಕೆ ಸೇರಬೇಕೆನ್ನುವ ಕನಸು ಹೊತ್ತಿದ್ದರು. ಆದರೆ ಅವರಿಗೆ ಎರವಲು ಮಾರ್ಗದರ್ಶನದ ಕೊರತೆಯಿಂದ ಸೈನ್ಯಕ್ಕೆ ಸೇರಿ ದೇಶ ಸೇವೆ ಮಾಡುವ ಅವಕಾಶ ದೊರೆಯಲಿಲ್ಲ. ಆಗ ಅವರು ದೇಶ ಪ್ರೇಮ ಬೆಳೆಸಿಕೊಳ್ಳಲು ಸೈನ್ಯಕ್ಕೆ ಪ್ರತಿ ವಾರ ಒಂದು ದಿನ ಒಪ್ಪತ್ತಿನ ಉಪವಾಸ ಮಾಡಿ ತಿಂಗಳಿಗೆ ರೂ400ರಂತೆ ಹಣ ಕಳುಹಿಸುತ್ತಾರೆ. ಈಗಲೂ ಕೂಡ ಎಲೆ ಮರೆಯಂತೆ ಸೈನ್ಯದ ಖಾತೆಗೆ ಹಣ ಕಳುಹಿಸಿ ಮಾನವೀಯತೆ ದೇಶಪ್ರೇಮ ಬೆಳೆಸಿಕೊಂಡಿದ್ದಾರೆ.ಯೋಧರೆಂದರೆ ಇವರಿಗೆ ಅಪಾರ ಪ್ರೀತಿ.

6 ದಶಕಗಳ ಹಿಂದೆ ಭಾರತದ ಪ್ರಧಾನಿ ಲಾಲ್ ಬಹದ್ದೂರು ಶಾಸ್ತ್ರಿ ಯವರು 1964ರಲ್ಲಿ ಬರಗಾಲದ ಪರಿಸ್ಥಿತಿಯಲ್ಲಿ ದೇಶಕ್ಕಾಗಿ ಒಂದು ದಿನ ಉಪವಾಸ ಇದ್ದು ಸೇನಾ ರಕ್ಷಣಾ ನಿಧಿಗೆ ಹಣ ಕಳುಹಿಸಿ ಎಂದು ಸುತ್ತೋಲೆ ಹೊರಡಿಸಿದ್ದರಂತೆ. ಆ ಒಂದು ಮಾತು ನರಸಿಂಹರಾವ್ ಹೆಬ್ಬಾರರಿಗೆ ಆಳವಾಗಿ ನಾಟಿದ್ದು ಅದನ್ನು ಅವರು ಆಣೆ, ಪೈಸೆ ಬಳಿಕ ರೂಪಾಯಿಯಲ್ಲಿ ನೀಡಿದ ದಾಖಲೆ ಅವರು ಮನೆಯಲ್ಲಿ ಇಟ್ಟುಕೊಂಡಿದ್ದಾರೆ. ಚಾಚೂ ತಪ್ಪದೇ ತನ್ನ ದಿನದ ಪಡಿಯನ್ನು ಸಂಗ್ರಹಿಸಿ ದೇಶದ ಸೇವೆಗೆ ನೀಡುತ್ತಿರುವುದು ಅಪ್ಪಟ ದೇಶ ಭಕ್ತರ ಸಾಲಿನಲ್ಲಿ ಗುರುತಿಸಿಕೊಂಡಿದ್ದಾರೆ.

ಇವರ ದೇಶಪ್ರೇಮಕ್ಕೆ ವಿವಿಧ ಸಂಘ ಸಂಸ್ಥೆಗಳಿಂದ ಹಲವು ಪ್ರಶಸ್ತಿಗಳು ಸಂದಿವೆ. ಇವರು ಬರೀ ಸೈನ್ಯಕ್ಕೆ ಮಾತ್ರ ಹಣ ನೀಡುತ್ತಿಲ್ಲ. ವಿವಿಧ ಸಂಘ ಸಂಸ್ಥೆಗಳಿಗೂ ತನ್ನ ವ್ಯಾಪಾರದಲ್ಲಿ ಬಂದ ಹಣದಲ್ಲಿ ದಾನ ನೀಡುತ್ತಿದ್ದಾರೆ. ನಾನು ಕೊಡುವ ಹಣ ಉತ್ತಮ ಕೆಲಸಗಳಿಗೆ ಸದುದ್ದೇಶಕ್ಕೆ ವಿನಿಯೋಗವಾಗಲಿ ಎಂಬುದು ನರಸಿಂಹ ಅವರ ಕನಸು. ಏನೇ ಆಗಲಿ, 87ರ ಹರಯದಲ್ಲೂ ಮನೆಯಲ್ಲಿ ಕೂರದೇ ತನಗಾದ ಕೆಲಸವನ್ನು ನಿಷ್ಟೆಯಿಂದ ಮಾಡಿ ವಾರದಲ್ಲಿ ಮೂರು ದಿನ ಹೊರ ಬಂದು ದುಡಿಯುತ್ತಿದ್ದಾರೆ.

ಮಕ್ಕಳು ಮನೆಯಲ್ಲಿ ಇರಿ ಎಂದರೂ ಕೇಳದೇ ಓಡಾಡಿದರೆ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಅವರು ಉತ್ತರ ಕೊಡುತ್ತಾರೆ. ಹೆಬ್ಬಾರ್ ಅಪ್ಪಟ ಯಕ್ಷಗಾನ ಕಲಾವಿದರಾಗಿದ್ದು ಸ್ಥಳೀಯ ಯಕ್ಷಗಾನ ಕಲಾವಿದರಿಗೂ ನೆರವು ನೀಡಿದ್ದಾರೆ. ಹಿಂದಿನಿಂದಲೂ ಯಕ್ಷಗಾನ ಕಲಾವಿದರಿಗೆ ಸನ್ಮಾನ ಮಾಡುತ್ತಾ ಬಂದಿದ್ದು ಕಲಾವಿದರನ್ನು ಕಂಡರೂ ಇವರಿಗೆ ಅಪಾರ ಗೌರವ. ದೇಶಭಕ್ತ ನರಸಿಂಹರಾವ್ ಹೆಬ್ಬಾರ್ ಅವರ ಕಾರ್ಯವನ್ನು ಸ್ಥಳೀಯರು, ದೇಶಾಭಿಮಾನಿಗಳು ಶ್ಲಾಘಿಸಿದ್ದಾರೆ.

ಟಾಪ್ ನ್ಯೂಸ್

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ

Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ

CT Ravi ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ

CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.