Davenagere: ಸಿಎಂ ಬದಲಾವಣೆ ಪ್ರಸಂಗ ಬಂದರೆ ನಾನೂ ಸ್ಪರ್ಧೆ ಮಾಡುವೆ: ಶಾಮನೂರು ಶಿವಶಂಕರಪ್ಪ
ರಾಜಕೀಯದಲ್ಲಿ ಜೂನಿಯರ್, ಸೀನಿಯರ್ ಪ್ರಶ್ನೆ ಬರಲ್ಲ...
Team Udayavani, Sep 11, 2024, 2:58 PM IST
ದಾವಣಗೆರೆ: ಒಂದೊಮ್ಮೆ ಮುಖ್ಯಮಂತ್ರಿ ಬದಲಾವಣೆ ಪ್ರಸಂಗ ಬಂದರೆ ನಾನೂ ಸ್ಪರ್ಧೆ ಮಾಡುತ್ತೇನೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಜೂನಿಯರ್, ಸೀನಿಯರ್ ಪ್ರಶ್ನೆ ಬರುವುದಿಲ್ಲ. ಶಾಸಕರು ಯಾರಿಗೆ ಬಹುಮತ ಕೊಡುತ್ತಾರೋ ಅವರಿಗೆ ಹೈಕಮಾಂಡ್ ಒಪ್ಪುತ್ತದೆ ಎಂದರು.
ಸಿದ್ದರಾಮಯ್ಯನವರು ಒಳ್ಳೆಯ ಆಡಳಿತ ಮಾಡುತ್ತಿದ್ದಾರೆ. ಹೈಕಮಾಂಡ್ ಆಶೀರ್ವಾದ ಇರುವವರೆಗೂ ಅವರೇ (ಸಿದ್ದರಾಮಯ್ಯ) ಮಾಡಲಿ ಎಂದು ತಿಳಿಸಿದರು.
ಕೆಲವರು ಬಾಯಿಗೆ ಬಂದಂತೆ ಮಾತನಾಡಿ ಕೊಂಡು ಹೋಗುವುದರಿಂದ ಯಾರಿಗೂ ಏನು ಪ್ರಯೋಜನ ಆಗುವುದಿಲ್ಲ. ಮಾತನಾಡಿದವರೇ ಹಗುರ ಆಗುತ್ತಾರೆ ಅಷ್ಟೇ ಎಂದು ತಿಳಿಸಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುತ್ತೇನೆ. ನಾನು ಬಿಡುವುದಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ: M.Com ಸೆಮಿಸ್ಟರ್ ಪರೀಕ್ಷೆಯಲ್ಲಿ ಅಪೂರ್ಣ ಪ್ರಶ್ನೆ ಪತ್ರಿಕೆ… ಗೊಂದಲದಲ್ಲಿ ವಿದ್ಯಾರ್ಥಿಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.