Manipal: ಹಾಸ್ಟೆಲ್ ಕಿಟಕಿಯಿಂದ ಕೈಹಾಕಿ ವಿದ್ಯಾರ್ಥಿನಿಗೆ ಕಿರುಕುಳ… ಆರೋಪಿಯ ಬಂಧನ
Team Udayavani, Sep 11, 2024, 5:28 PM IST
ಮಣಿಪಾಲ: ರಾತ್ರಿ ಹೊತ್ತು ಹಾಸ್ಟೆಲ್ ಗೆ ಅಕ್ರಮವಾಗಿ ಪ್ರವೇಶಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಆರೋಪಿಯನ್ನು ಬಂಧಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ನವೀನ್ ನಾಯ್ಕ್ (22) ಎನ್ನಲಾಗಿದೆ.
ಏನಿದು ಪ್ರಕರಣ:
ಆರೋಪಿ ನವೀನ್ ಸೆಪ್ಟೆಂಬರ್ 09 ರಂದು ಬೆಳಗಿನ ಜಾವಾ ಸುಮಾರು 2.15 ರ ಹೊತ್ತಿಗೆ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಅನಂತನಗರದಲ್ಲಿರುವ ಬಾಲಕಿಯರ ಹಾಸ್ಟೆಲ್ ಗೆ ಅಕ್ರಮವಾಗಿ ಪ್ರವೇಶಿಸಿ ಕಿಟಕಿಯಿಂದ ಒಳಗೆ ಕೈಹಾಕಿ ಅಲ್ಲಿ ಮಲಗಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾನೆ ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದು ಖಚಿತ ಮಾಹಿತಿಯ ಮೇರೆಗೆ ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ನವೀನ್ ನಾಯ್ಕ್ ವಿರುದ್ಧ 2023 ರಲ್ಲಿ ಉಡುಪಿ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ನಗರ ಠಾಣೆಯಲ್ಲೂ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: Tulu ಲಿಪಿಗೆ ಯುನಿಕೋಡ್ ಕನ್ಸೋರ್ಟಿಯಂ ಶೀಘ್ರ ದೊರಕಲಿ: ದಯಾನಂದ ಕತ್ತಲ್ಸಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ
Tungabhadra ಡ್ಯಾಂನ ಎಲ್ಲ 33 ಗೇಟ್ ಬದಲಿಸಲು ತಜ್ಞರ ಸಲಹೆ
Congress-NC ಮೈತ್ರಿಗೆ ಪಾಕ್ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
High Court: ಬಾಂಬ್ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.