![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Sep 11, 2024, 10:50 AM IST
ಉದಯವಾಣಿ ಸಮಾಚಾರ
ಬೈಲಹೊಂಗಲ: ಪಟ್ಟಣದ ಮೌಲಾನಾ ಅಬ್ದುಲ್ ಕಲಾಮ್ ಆಝಾದ ಹೈಸ್ಕೂಲ್ ಉಳಿಸಿ, ಬೆಳೆಸುವಲ್ಲಿ ಹಳೆಯ ವಿದ್ಯಾರ್ಥಿಗಳ
ಸಂಘ ಅತ್ಯುತ್ತಮ ಕಾರ್ಯ ಮಾಡುತ್ತಿದೆ. ಶಾಲೆಯ ಅಭಿವೃದ್ಧಿಯ ಚಿಂತನೆ ಮಾಡಬೇಕಾಗಿದೆ ಎಂದು ಕರ್ನಾಟಕ ಉರ್ದು
ಅಕಾಡೆಮಿ ನಿರ್ದೇಶಕ ಶರೀಫ ಮೊಕಾಶಿ, ಹಳೆಯ ವಿದ್ಯಾರ್ಥಿ ನಜೀರ ತೊಲಗಿ ಹೇಳಿದರು.
ಪಟ್ಟಣದ ಇಂಚಲ ರಸ್ತೆಯ ಈದ್ಗಾ ಮೈದಾನದಲ್ಲಿರುವ ಮೌಲಾನಾ ಅಬ್ದುಲ್ ಕಲಾಮ ಆಝಾದ ಹೈಸ್ಕೂಲ್ ಸ್ಟುಡೆಂಟ್
ಅಲ್ಯಮಿನಿ ಅಸೋಷಿಯನ್ ಏರ್ಪಡಿಸಿದ್ದ ವಾರ್ಷಿಕ ಸಭೆ ಹಾಗೂ ಮುಸ್ಲಿಂ ಸಮಾಜದ ಅಭಿಪ್ರಾಯ ಸಂಗ್ರಹ ಕಾರ್ಯಕ್ರಮದಲ್ಲಿ
ಅವರು ಮಾತನಾಡಿದರು.
ನಮ್ಮ ಸಮಾಜದ ಮಕ್ಕಳ ಉಜ್ವಲ ಭವಿಷ್ಯದ ಬಗ್ಗೆ ಚಿಂತಿಸುವ ಅವಶ್ಯಕತೆ ಇದೆ. ನಮ್ಮ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಶಾಲೆಯ ಅಭಿವೃದ್ಧಿಗೆ ಹಗಲಿರುಳು ಸೇವೆ ಸಲ್ಲಿಸುತ್ತಿದ್ದಾರೆ. ಕಮೀಟಿಯವರ ವೈಯಕ್ತಿಕ ಹಿತಾಸಕ್ತಿಯಿಂದ ಶಾಲೆಯ ಅಭಿವೃದ್ಧಿ ಕುಂಠಿತವಾಗಿದೆ.
ನ್ಯಾಯಾಲಯದಲ್ಲಿರುವ ಪ್ರಕರಣವನ್ನು ಎರಡು ಕಮೀಟಿಯವರು ಹಿಂಪಡೆಯಬೇಕು. ಎರಡೂ ಕಮೀಟಿಗಳು ರಾಜೀನಾಮೆ ನೀಡಬೇಕೆಂದು ಸಮಾಜ ಬಾಂಧವರು ಆಗ್ರಹಿಸಿದ್ದಾರೆ ಎಂದರು.
ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಸಾಜೀದ ಬಾಬಣ್ಣವರ, ನಿರ್ದೇಶಕ ರಫೀಕ ದೇಶನೂರ ಮಾತನಾಡಿ, ನಮ್ಮ ಹಳೆಯ
ವಿದ್ಯಾರ್ಥಿಗಳ ಸಂಘದಿಂದ ಯಾವುದೇ ಅಧ್ಯಕ್ಷ, ಕಮೀಟಿ ಮಾಡುವುದಿಲ್ಲ. ನಮ್ಮ ಮುಖ್ಯ ಉದ್ದೇಶ ಶಾಲೆಯ ಅಭಿವೃದ್ಧಿ. ಒಂದು ವೇಳೆ ರಾಜೀನಾಮೆ ನೀಡದಿದ್ದರೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಮುಸ್ಲಿಂ ಸಮಾಜದ ಮುಖಂಡರು ಎರಡು ಕಮೀಟಿಗಳು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಅಂಜುಮನ್ ಎ-ಇಸ್ಲಾಂ
ಕಮಿಟಿಯವರು ಸೂಕ್ತ ನಿರ್ಧಾರ ಮಾಡಿ, ಶಾಲೆಯನ್ನು ಉಳಿಸಬೇಕು ಎಂದು ಸಲಹೆ ನೀಡಿದರು. ಎರಡು ಕಮೀಟಿಯವರು
ರಾಜೀನಾಮೆ ನೀಡುವುದಾಗಿ ಸಭೆಯಲ್ಲಿ ಘೋಷಿಸಿದರು. ನಂತರ ಒಂದು ಕಮೀಟಿಯ ಅಬ್ದುಲರೆಹಮಾನ ನಂದಗಡ, ಬಾಬಾಸಾಬ ಸುತಗಟ್ಟಿ, ಹಾರೂನ್ ಕಿತ್ತೂರ, ಸಮೀವುಲ್ಲಾ ನೇಸರಗಿ, ನಜೀರ ಕಿತ್ತೂರ ರಾಜೀನಾಮೆ ನೀಡಿದರು. ಇನ್ನೊಂದು ಕಮೀಟಿಯ 11 ಜನ ಸದಸ್ಯರಲ್ಲಿ ಅಧ್ಯಕ್ಷರು ಹಾಗೂ ಇನ್ನಿಬ್ಬರು ಮಾತ್ರ ರಾಜೀನಾಮೆ ನೀಡಿದ್ದು, ಉಳಿದವರ ರಾಜೀನಾಮೆ ಪಡೆಯುವುದಾಗಿ ಅಂಜುಮನ್ ಎ-ಇಸ್ಲಾಂ ತಿಳಿಸಿದೆ.
ಅಂಜುಮನ್ ಎ-ಇಸ್ಲಾಂ ಕಮಿಟಿ ಅಧ್ಯಕ್ಷ ಡಾ.ಐಜಾಜ ಬಾಗೇವಾಡಿ, ಇಮ್ತಿಯಾಜ ನೇಸರಗಿ, ಮದರಸಾದ ಮುಖ್ಯಸ್ಥ ಶೌಕತಲಿ
ಬಾದಿ, ಪುರಸಭೆ ಉಪಾಧ್ಯಕ್ಷ ಬುಡ್ಡೆಸಾಬ ಶಿರಸಂಗಿ, ಶಬ್ಬೀರ ಕುದರಿ, ಅಣ್ಣಾಸಾಹೇಬ ಮಾನೂರಶೇಖ, ಜಮೀಲಹ್ಮದ ಸಂಗೊಳ್ಳಿ,
ಇಮಾಮಸಾಬ ನದಾಫ, ಮೌಲಾನಾ ಅಕೀಲ್, ಬುಡ್ಡೆಸಾಬ ದಾಸ್ತಿಕೊಪ್ಪ, ಮಹ್ಮದಷಾ ನದಾಫ, ರಿಯಾಜಹ್ಮದ ಮಿರ್ಜನ್ನವರ ಸೇರಿದಂತೆ ಸಮಾಜದದವರು ಉಪಸ್ಥಿತರಿದ್ದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.