Bengaluru, ಸುತ್ತಲಿನ 3 ಜಿಲ್ಲೆಯಲ್ಲಿ ಅಪಘಾತ ಹೆಚ್ಚಳ

3 ವರ್ಷಗಳಲ್ಲಿ 5335 ಸಾವು; ರಾಜ್ಯದ ಒಟ್ಟು ಸಾವಿನ ಪ್ರಮಾಣದಲ್ಲಿ ಶೇ.25ರಷ್ಟು ಮಂದಿ ಬೆಂಗ್ಳೂರಿನವರೇ

Team Udayavani, Sep 11, 2024, 5:52 PM IST

byndoor

ರಾಮನಗರ: ರಾಜಧಾನಿ ಬೆಂಗಳೂರು ಹಾಗೂ ಇದಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳು ರಸ್ತೆ ಅಪಘಾತದ ಹಾಟ್‌ಸ್ಪಾಟ್‌ ಆಗಿದೆಯಾ..?

ಹೌದು ಎನ್ನುತ್ತಿದೆ ಪೊಲೀಸ್‌ ಇಲಾಖೆಯ ಅಂಕಿ ಅಂಶಗಳ ಮಾಹಿತಿ!. ಕಳೆದ 3 ವರ್ಷಗಳ ಆಗಸ್ಟ್‌ವರೆಗಿನ ಅಪಘಾತ ಪ್ರಮಾಣ ಪರಿಶೀಲಿಸಿದರೆ ಬೆಂಗಳೂರು ನಗರ ಹಾಗೂ ರಾಜಧಾನಿಗೆ ಹೊಂದಿಕೊಂಡಿರುವ ಬೆಂ. ಗ್ರಾಮಾಂತರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲೇ ಹೆಚ್ಚು ರಸ್ತೆ ಅಪಘಾತ ಸಂಭವಿಸಿವೆ. ಇಡೀ ರಾಜ್ಯದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಪೈಕಿ ಈ 4 ಜಿಲ್ಲೆಗಳಲ್ಲೇ ಶೇ.25ರಷ್ಟು ಮಂದಿ ಸಾವಿಗೀಡಾಗಿದ್ದಾರೆ.

3 ವರ್ಷಗಳಲ್ಲಿ 5 ಸಾವಿರ ಮಂದಿ ಸಾವು:
ಬೆಂಗಳೂರು ನಗರ, ರಾಜಧಾನಿಗೆ ಹೊಂದಿಕೊಂಡ 3 ಜಿಲ್ಲೆಗಳಲ್ಲಿ ಕಳೆದ 3 ವರ್ಷದ ಅವಧಿಯ ಆಗಸ್ಟ್‌ ಅಂತ್ಯಕ್ಕೆ ರಸ್ತೆ ಅವಘಡದಲ್ಲಿ 5,335 ಮಂದಿ ಸಾವಿಗೀಡಾಗಿದ್ದರೆ, ಇಡೀ ರಾಜ್ಯದಲ್ಲಿ ಈ ಅವಧಿಗೆ 23,738 ಮಂದಿ ಮೃತಪಟ್ಟಿದ್ದಾರೆ. ಈ ಭಾಗದಲ್ಲಿ ಹೆಚ್ಚಿನ ವಾಹನ ದಟ್ಟಣೆಯೇ ಅಪಘಾತ ಹೆಚ್ಚಳಕ್ಕೆ ಕಾರಣ ಎನ್ನಲಾಗುತ್ತಿದೆ.

ಕಮಿಷನರೇಟ್‌ಗಳಲ್ಲಿ ಅಪಘಾತ ಹೆಚ್ಚು:
ರಾಜ್ಯದಲ್ಲಿ ಬೆಂಗಳೂರು ನಗರ ಸೇರಿ 6 ಪೊಲೀಸ್‌ ಕಮಿಷನ ರೇಟ್‌ಗಳಿವೆ. ಕಳೆದ 3 ವರ್ಷಗಳಲ್ಲಿ ಹುಬ್ಬಳ್ಳಿ ಮತ್ತು ಕಲಬುರಗಿ ಕಮಿಷನರೇಟ್‌ ಹೊರತುಪಡಿಸಿದರೆ ಬೆಂಗಳೂರು ನಗರ, ಮೈಸೂರು ನಗರ, ಹುಬ್ಬಳ್ಳಿ ಧಾರವಾಡ, ಬೆಳಗಾವಿ ವ್ಯಾಪ್ತಿಯಲ್ಲಿ ಅಪಘಾತ ಪ್ರಮಾಣ ಈ ಹಿಂದಿನ ಸಾಲಿಗಿಂತ ಈ ಬಾರಿ ಹೆಚ್ಚಾಗಿದೆ. ರಾಜ್ಯದ 32 ಪೊಲೀಸ್‌ ವಿಭಾಗಗಳ ಪೈಕಿ (ರೈಲ್ವೆ, ಕೆಜಿಎಫ್‌) ಸೇರಿ 15ರಲ್ಲಿ ಅಪಘಾತ ಪ್ರಮಾಣ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಹೆಚ್ಚಾಗಿದೆ. ಉಳಿದಂತೆ 17 ವಿಭಾಗಗಳಲ್ಲಿ ರಸ್ತೆ ಅಪಘಾತದಲ್ಲಿ ಮೃತರ ಪ್ರಮಾಣ ಕಡಿಮೆಯಾಗಿದೆ.

ಅತಿ ಹೆಚ್ಚು, ಕಡಿಮೆ ಅಪಘಾತದ ವಿವರ:
ಪ್ರಸಕ್ತ ವರ್ಷದ ಆಗಸ್ಟ್‌ ವರೆಗೆ ಅತಿ ಹೆಚ್ಚು ರಸ್ತೆ ಅಪಘಾತ ಸಂಭವಿಸಿದ ವಿಭಾಗಗಳ ಈ ವಿವರ ಇಂತಿದೆ. ಬೆಂಗಳೂರು ನಗರ 564, ತುಮಕೂರು 470, ಬೆಂಗಳೂರು ಗ್ರಾಮಾಂತರ . 454, ಬೆಳಗಾವಿ 450, ಮಂಡ್ಯ 340 ರಸ್ತೆ ಅಪಘಾತಗಳು ಸಂಭವಿಸಿವೆ.

ರಾಜ್ಯದಲ್ಲಿ ತಗ್ಗಿದ ಅಪಘಾತ ಮರಣ ಸಂಖ್ಯೆ
ರಾಜ್ಯದಲ್ಲಿ ರಸ್ತೆ ಅಪಘಾತದಲ್ಲಿ ಸಾವಿಗೀಡಾಗು ವವರ ಸಂಖ್ಯೆ ಕಳೆದ 3 ವರ್ಷಗಳಿಗೆ ಹೋಲಿಕೆ ಮಾಡಿದರೆ ಈ ವರ್ಷ ಕಡಿಮೆಯಾಗಿದೆ. 2022ರಲ್ಲಿ ಆಗಸ್ಟ್‌ವರೆಗೆ 7,996 ಮಂದಿ, 2023ರಲ್ಲಿ ಈ ಸಂಖ್ಯೆ 8,146 ಇತ್ತು. ಈ ವರ್ಷದ ಆಗಸ್ಟ್‌ ಅಂತ್ಯಕ್ಕೆ 7,596 ಮಂದಿ ಮೃತಪಟ್ಟಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 550 ಸಾವಿನ ಪ್ರಮಾಣ ಕಡಿಮೆಯಾಗಿದೆ.

ರಸ್ತೆ ಅಪಘಾತ ಮತ್ತು ಸಾವು ನಿಯಂತ್ರಿಸುವುದು ಹಾಗೂ ರಸ್ತೆ ಸುರಕ್ಷತೆ ಖಚಿತಪಡಿಸುವುದು ಸವಾಲಿನ ಕೆಲಸ. ಪೊಲೀಸ್‌ ಅಧಿಕಾರಿಗಳು ಅಪಘಾತದಿಂದಾಗುವ ಸಾವಿನ ಪ್ರಮಾಣ ತಗ್ಗಿಸಲು ಸಾಕಷ್ಟು ಪರಿಶ್ರಮ ವಹಿಸಿದ್ದಾರೆ. ಅವರಿಗೆ ಅಭಿನಂದನೆ.
-ಅಲೋಕ್‌ಕುಮಾರ್‌, ಎಡಿಜಿಪಿ ರಸ್ತೆ ಸುರಕ್ಷತೆ ಮತ್ತು ಸಂಚಾರ

-ಸು.ನಾ.ನಂದಕುಮಾರ್‌

ಟಾಪ್ ನ್ಯೂಸ್

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.