Kundapura ತಾಲೂಕು ಕಚೇರಿ ಅವ್ಯವಸ್ಥೆ ಈಗ ವಿದ್ಯುತ್‌ ಇಲ್ಲ ನಾಳೆ ಬನ್ನಿ

ಜನರೇಟರ್‌ ಡೀಸೆಲ್‌ಗಾಗಿ ಹಣ ಹೊಂದಿಸಲು ಮುಂದಾದ ಸಾರ್ವಜನಿಕರು

Team Udayavani, Sep 11, 2024, 6:27 PM IST

Kundapura ತಾಲೂಕು ಕಚೇರಿ ಅವ್ಯವಸ್ಥೆ ಈಗ ವಿದ್ಯುತ್‌ ಇಲ್ಲ ನಾಳೆ ಬನ್ನಿ

ಕುಂದಾಪುರ: ಮಂಗಳವಾರದಂದು ಇಲ್ಲಿನ ತಾಲೂಕು ಕಚೇರಿಗೆ ಸಾರ್ವಜನಿಕರು ಭೇಟಿ ನೀಡಿದರೆ ಕೇಳುವ ಮಾತೆಂದರೆ, ಕರೆಂಟ್‌ ಇಲ್ಲ ನಾಳೆ ಬನ್ನಿ ಎಂದು. ಸಾರ್ವಜನಿಕರ ಯಾವುದೇ ಕೆಲಸ ಮಾಡಿಕೊಡಲು ಇಲ್ಲಿನ ಸಿಬಂದಿ ನಿರಾಕರಿಸಿ ನಾಳೆ ಬನ್ನಿ ಎಂದು ಕಳುಹಿಸುತ್ತಾರೆ. ಇನ್ನು ಮುಂದೆ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಸರಕಾರಿ ಕಚೇರಿಯಲ್ಲಿ ತೊಂದರೆಯಾಗಬಾರದು ಎಂದು ಇಲ್ಲಿನ ಸಾಮಾಜಿಕ ಕಾರ್ಯಕರ್ತರು ತಾಲೂಕು ಕಚೇರಿಯಲ್ಲಿ ಜನರೇಟರ್‌ ಅಳವಡಿಕೆ ಗಾಗಿ ಸಾರ್ವಜನಿಕವಾಗಿ ಭಿಕ್ಷಾಟನೆಗೆ ಮುಂದಾಗಿದ್ದಾರೆ.

ವಿದ್ಯುತ್‌ ಕಡಿತ
ಅನೇಕ ಸಮಯಗಳಿಂದ ನಿಶ್ಚಿತವಾಗಿ ಮಂಗಳವಾರ ತಾಲೂಕಿನ ವಿವಿಧೆಡೆ ನಿರ್ವಹಣೆ ಸಲುವಾಗಿ ವಿದ್ಯುತ್‌ ವ್ಯತ್ಯಯ ಮಾಡಲಾಗುತ್ತದೆ. ಈ ಬಗ್ಗೆ ಮುಂಚಿತ ಪ್ರಕಟನೆಯನ್ನೂ ನೀಡಲಾಗುತ್ತದೆ. ನಿರ್ವಹಣೆಯ ತುರ್ತು ಇಲ್ಲದಿದ್ದಲ್ಲಿ ವಿದ್ಯುತ್‌ ನೀಡಿ, ಎಲ್ಲಿ ಅವಶ್ಯವೋ ಅಲ್ಲಿಯಷ್ಟೇ ಕಡಿತ ಮಾಡಲಾಗುತ್ತದೆ.

ರಜೆ ಕೊಡಲಿ
ಇದು ಇಂದು ನಿನ್ನೆಯ ಸಮಸ್ಯೆ ಅಲ್ಲ. ಹೀಗೆ ಬರಿಗೈಲಿ ಮರಳಿ ಕಳುಹಿಸುವುದಾದರೆ ವಿದ್ಯುತ್‌ ಕಡಿತದ ದಿನ ತಾಲೂಕು ಕಚೇರಿಗೆ ರಜೆ ಕೊಟ್ಟು ಬಿಡಿ ಇದರಿಂದ ಜನರಿಗೆ ಅನುಕೂಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಆಹಾರ ಶಾಖೆ ಸೇರಿದಂತೆ ವಿವಿಧೆಡೆಯಿಂದ ಪಡಿತರ ಚೀಟಿ, ಆಧಾರ್‌ ಹೀಗೆ ಬೇರೆ ಬೇರೆ ಕೆಲಸಗಳಿಗಾಗಿ ಬಂದವರು ಬಂದ ದಾರಿಗೆ ಸುಂಕ ಇಲ್ಲ ಎಂದು ಮರಳಿ ಹೋಗುತ್ತಿದ್ದರು. ಅದೆಷ್ಟೋ ಬಡ ಜನರು ತಮ್ಮ ನಿತ್ಯದ ಕೆಲಸ ಕಾರ್ಯ ಬಿಟ್ಟು, ಕಚೇರಿಯ ಕೆಲಸದ ನಿಮಿತ್ತ ಎಷ್ಟೋ ದೂರದ ಹಳ್ಳಿಯಿಂದ ತಾಲೂಕು ಕಚೇರಿಗೆ ಬಂದರೆ ಇಲ್ಲಿ ಕರೆಂಟ್‌ ಇಲ್ಲ ನಾಳೆ ಬನ್ನಿ ಎಂಬ ಸಿದ್ಧ ಉತ್ತರ. ಕಚೇರಿಯ ಒಳಗೆ ಅಧಿ ಕಾರಿಗಳು ಕೂಡ ಕತ್ತಲಲ್ಲೇ ಕುಳಿತಿರುತ್ತಾರೆ.

ಯುಪಿಎಸ್‌ ಕಡಿಮೆ ಅವಧಿ
ಇಡೀ ದಿನ ಕರೆಂಟ್‌ ಇಲ್ಲದಾಗ ತಾಲೂಕು ಕಚೇರಿಯ ಯುಪಿಎಸ್‌ ಅವಧಿ ಕಡಿಮೆಯಾದಾಗ ಸಮಸ್ಯೆಯಾಗುತ್ತದೆ. ತುಂಬಾ ಕೆಲಸ ಕಾರ್ಯಗಳಿದ್ದರೆ ಜನರೇಟರ್‌ ಹಾಕುತ್ತೇವೆ. ಇವತ್ತು ಅನೇಕ ಅಧಿಕಾರಿಗಳು ಬೇರೆ ಬೇರೆ ಕಾರಣಗಳಿಂದ ಕಚೇರಿಯಲ್ಲಿ ಇಲ್ಲದ ಕಾರಣ ಗೊಂದಲ ಆಗಿರಬಹುದು. ಸಾರ್ವಜನಿಕರಿಗೆ ತೊಂದರೆ ಮಾಡುವುದಿಲ್ಲ.
-ಶೋಭಾಲಕ್ಷ್ಮೀ, ತಹಶೀಲ್ದಾರ್‌, ಕುಂದಾಪುರ

ಎರಡು ತಿಂಗಳಾದರೂ ಸರಿಯಾಗದ ವ್ಯವಸ್ಥೆ
ಎರಡು ತಿಂಗಳ ಹಿಂದೆಯೂ ತಾಲೂಕು ಕಚೇರಿಯಲ್ಲಿ ಕರೆಂಟ್‌ ಇಲ್ಲದೆ ಅದೆಷ್ಟೋ ಜನ ಅರ್ಜಿ ಹಿಡಿದುಕೊಂಡು ಹೊರಗಡೆ ಕಾಯುತ್ತಾ ನಿಲ್ಲುವಂತಹ ಪರಿಸ್ಥಿತಿ ಉಂಟಾಗಿತ್ತು. ಈ ಬಗ್ಗೆ ತಹಶೀಲ್ದಾರ್‌ ಕಚೇರಿಗೆ ಹೋಗಿ ಸಮಸ್ಯೆ ಹೇಳಿದಾಗ ಜನರೇಟರ್‌ ಡೀಸೆಲ್‌ಗೆ ಸರಕಾರದಿಂದ ಹಣ ಬರುವುದಿಲ್ಲ, ಹಣ ಹೊಂದಿಸಲು ಸಾಧ್ಯವಿಲ್ಲ ಎಂದು ಉತ್ತರ ಬಂತು. ಸಾರ್ವಜನಿಕರು ಸಾಲುಗಟ್ಟಲೆ ಅರ್ಜಿ ಹಿಡಿದು ನಿಂತದ್ದನ್ನು ನೋಡಿ ಕಚೇರಿಯ ಸಿಬಂದಿ ಅರ್ಧ ಗಂಟೆ ಜನರೇಟರ್‌ ಚಾಲೂ ಮಾಡಿಸಿದ್ದರು. ಈ ಘಟನೆ ನಡೆದು ತಿಂಗಳೆರಡಾದರೂ ಇಲ್ಲಿಯ ತನಕ ಈ ಸಮಸ್ಯೆ ಬಗೆ ಹರಿಯಲೇ ಇಲ್ಲ.

ಡೀಸೆಲ್‌ಗಾಗಿ ಹಣ ಹೊಂದಿಸುವ ನಿರ್ಧಾರ
ಈ ಮಂಗಳವಾರ ಕೂಡ ಜನ ಕಾಯುತ್ತಿದ್ದಾರೆ. ಅರ್ಜಿಗಳನ್ನು ತಂದಿದ್ದಾರೆ. ಕರೆಂಟ್‌ ಇಲ್ಲ ನಾಳೆ ಬನ್ನಿ ಎಂಬ ಉತ್ತರ ಪಡೆದಿದ್ದಾರೆ. ಹಾಗಾಗಿ ಇದಕ್ಕೆ ಪರಿಹಾರ ಒಂದೇ ಎಂದು ಸಾರ್ವಜನಿಕರು ಒಟ್ಟಾಗಿ ಜನರೇಟರ್‌ಗೆ ಡೀಸೆಲ್‌ ಹಾಕಲು ಹಣ ಹೊಂದಿಸಲು ಮುಂದಾಗಿದ್ದಾರೆ.

ಒಂದಿಷ್ಟು ಸಾರ್ವಜನಿಕರು ಒಟ್ಟು ಸೇರಿಕೊಂಡು ತಾಲೂಕು ಕಚೇರಿಯ ಹೊರಗೆ ಇಲ್ಲಿಯ ಸಮಸ್ಯೆಗಳನ್ನು ಹೇಳಿ ಜನರೇಟರಿಗೆ ಡೀಸೆಲ್‌ ಹಾಕಲು ಹಣ ಒಟ್ಟುಗೂಡಿಸಿ ತಾಲೂಕು ಕಚೇರಿಗೆ ನೀಡುವುದೆಂದು ತೀರ್ಮಾನ ಮಾಡಿದ್ದಾರೆ. ಮುಂದಿನ ಮಂಗಳವಾರವೂ ಇದೇ ರೀತಿ ಇದ್ದರೆ ಪರಿಸ್ಥಿತಿ ಬಿಗಡಾಯಿಸುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.