Kinnigoli: ಪಾದಚಾರಿಗೆ ಯುವಕನಿಂದ ಹಲ್ಲೆ; ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು


Team Udayavani, Sep 11, 2024, 8:21 PM IST

Kinnigoli: ಪಾದಚಾರಿಗೆ ಯುವಕನಿಂದ ಹಲ್ಲೆ; ಚಕಮಕಿ

ಕಿನ್ನಿಗೋಳಿ: ಕಿನ್ನಿಗೋಳಿ ಪೇಟೆಯ ಕೇಂದ್ರ ಬಸ್‌ ನಿಲ್ದಾಣದಲ್ಲಿ ಬೈಕ್‌ ಸವಾರ ಯುವಕನೋರ್ವ ವ್ಯಕ್ತಿಯೋರ್ವರಿಗೆ ಢಿಕ್ಕಿ ಹೊಡೆಸಿದ್ದು, ಮಾತ್ರವಲ್ಲದೆ ಅವರ ಮೇಲೆಯೇ ಹಲ್ಲೆ ನಡೆಸಿದ ಘಟನೆ ಬುಧವಾರ(ಸೆ.11) ನಡೆದಿದೆ.

ಯುವಕನ ವಿರುದ್ಧ ಆಕ್ರೋಶಗೊಂಡ ಸಾರ್ವಜನಿಕರು ಸ್ಥಳಕ್ಕೆ ಜಮಾಯಿಸಿದ್ದು, ಆತನನ್ನು ತರಾಟೆಗೆ ತೆಗೆದುಕೊಂಡರು.

ಘಟನೆಯ ವಿವರ
ಕಿನ್ನಿಗೋಳಿ ಬಸ್ಸು ನಿಲ್ದಾಣದಲ್ಲಿ ವ್ಯಕ್ತಿಯೋರ್ವರು ನಡೆದುಕೊಂಡು ಹೋಗುತ್ತಿರುವ ಸಂದರ್ಭ ಬೈಕ್‌ನಲ್ಲಿ ಬಂದ ಯುವಕ ಅವರಿಗೆ ಢಿಕ್ಕಿ ಹೊಡೆದಿದ್ದ. ಈ ಸಂದರ್ಭ ಪಾದಚಾರಿ ಕೈಯಲ್ಲಿದ್ದ ಮೊಬೈಲ್‌ ನೆಲಕ್ಕೆ ಬಿದ್ದಿತ್ತು. ಈ ವೇಳೆ ಅವರು ಬೈಕ್‌ ಸವಾರನಿಗೆ ಸ್ವಲ್ಪ ನಿಧಾನವಾಗಿ ವಾಹನ ಚಲಾಯಿಸಿ ಎಂದು ಕಿವಿಮಾತು ಹೇಳಿದ್ದಾರೆ. ಇದರಿಂದ ಕೆರಳಿದ ಯುವಕ ಪಾದಚಾರಿ ವ್ಯಕ್ತಿಗೆ ಕೈಯಿಂದ ಹೊಡೆದಿದ್ದ. ಇದನ್ನು ಗಮನಿಸಿದ ಜನರು ಒಬ್ಬೊಬ್ಬರಾಗಿ ಬಂದು ಸ್ಥಳದಲ್ಲಿ ಸೇರಿದ್ದು, ಈ ವೇಳೆ ಕೆಲ ಹೊತ್ತು ಯುವಕ ಹಾಗೂ ಸಾರ್ವಜನಿಕರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಬಳಿಕ ಪೊಲೀಸರ ಮಧ್ಯಪ್ರವೇಶವಾಯಿತು.

ಬುಧವಾರ ಕಿನ್ನಿಗೋಳಿಯ ಸಾರ್ವಜನಿಕ ಗಣೇಶೋತ್ಸವ ಮೆರವಣಿಗೆ ನಡೆಯಲಿದ್ದ ಕಾರಣ ನೂರಾರು ಸಂಖ್ಯೆಯಲ್ಲಿ ಜನ ಪೇಟೆಯಲ್ಲಿ ಸೇರಿದ್ದರು. ಘಟನೆಗೆ ಕಾರಣನಾದ ಯುವಕನೇ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ದರ್ಪ ತೋರಿದ್ದನ್ನು ಅಲ್ಲಿದ್ದ ಜನ ಆಕ್ಷೇಪಿಸಿದರು. ಈ ವೇಳೆ ಆತನೂ ಜನರೊಂದಿಗೆ ಮಾತಿಗೆ ಮಾತು ಬೆಳೆಸಿದ್ದ. ಪರಿಣಾಮ ಜನ ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಲೇ ಇದ್ದರು.

ಈ ಬಗ್ಗೆ ಮಾಹಿತಿ ಪಡೆದ ಮೂಲ್ಕಿ ಠಾಣೆಯ ಪೊಲೀಸರು ತತ್‌ಕ್ಷಣ ಘಟನಾ ಸ್ಥಳಕ್ಕಾಗಮಿಸಿ ಜನರನ್ನು ಸ್ಥಳದಿಂದ ಚದುರುವಂತೆ ಸೂಚಿಸಿದರು. ಅನಂತರ ಗಲಾಟೆಗೆ ಕಾರಣನಾದ ಯುವಕನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು. ಗಣೇಶೋತ್ಸವ ಮೆರವಣಿಯ ಬಂದೋಬಸ್ತ್ನಲ್ಲಿ 100-150ಕ್ಕೂ ಅಧಿಕ ಪೊಲೀಸರು ಕಿನ್ನಿಗೋಳಿ ಪೇಟೆಯಲ್ಲೇ ಇದ್ದರು. ಆದ್ದರಿಂದ ಘಟನಾ ಸ್ಥಳಕ್ಕೆ ಕೂಡಲೇ ಪೊಲೀಸರು ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಇಲ್ಲವಾದರೆ ಅಹಿತಕರ ಘಟನೆ ನಡೆಯುವ ಸಂಭವವಿತ್ತು ಎನ್ನಲಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.