Film Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ನಾಳೆ ತೆರೆಗೆ


Team Udayavani, Sep 12, 2024, 12:36 AM IST

Children-Movie

ಮಂಗಳೂರು: ಫೀನಿಕ್ಸ್‌ ಫಿಲ್ಮ್ಸ್ ಲಾಂಛನದಡಿಯಲ್ಲಿ ನಿರ್ಮಾಣವಾಗಿರುವ ಮಹೇಂದ್ರ ಕುಮಾರ್‌ ನಿರ್ಮಾಣದ ಹಾಗೂ ಗೌರಿ ಶ್ರೀನಿವಾಸರವರ ನಿರ್ದೇಶನದ “ದಿ ಜರ್ನಿ ಆಫ್‌ ಬೆಳ್ಳಿ’ ಮಕ್ಕಳ ಚಲನಚಿತ್ರ ಸೆ.13ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮಲ್ಟಿಪ್ಲೆಕ್ಸ್‌ ಸಿನೆಮಾ ಥಿಯೇಟರ್‌ಗಳಲ್ಲಿ ಪ್ರದರ್ಶನಗೊಳ್ಳಲಿದೆ.
ಈ ಹಿಂದೆ “ಕಾರ್ನಿಕೊದ ಕಲ್ಲುರ್ಟಿ’ ಎಂಬ ಚಾರಿತ್ರಿಕ ತುಳು ಸಿನೆಮಾವನ್ನು ಮಹೇಂದ್ರ ಕುಮಾರ್‌ ನಿರ್ಮಾಣ ಮಾಡಿ ಯಶಸ್ವಿಯಾಗಿದ್ದು, ಇದು ಅವರ ಎರಡನೇ ಚಿತ್ರವಾಗಿದೆ.

ಕಥಾ ಸಾರಾಂಶ
9 ವರ್ಷದ ಹುಡುಗಿ ಬೆಳ್ಳಿ, ಭಾರತೀಯ ಸೇನೆಯಲ್ಲಿ ಗಡಿಪ್ರದೇಶದಲ್ಲಿ ಕರ್ತವ್ಯನಿರತನಾಗಿರುವ ತನ್ನ ತಂದೆಯ ಬರವಿಗಾಗಿ ಕಾಯುತ್ತಿರುವ ಕಥೆ, ಕ್ರಮೇಣ ಬೆಳ್ಳಿಯ ಬದುಕಿನಲ್ಲಿ ನಡೆದ ಘಟನೆಗಳಿಂದಾಗಿ ಅವಳ ಸ್ವಭಾವ ಕೋಪ ಮತ್ತು ದ್ವೇಷಕ್ಕೆ ತಿರುಗುತ್ತದೆ. ತಂದೆ ಹತ್ತಿರವಿಲ್ಲದ ಕಾರಣಕ್ಕಾಗಿ ಅವಳ ಬದುಕಿನಲ್ಲಿ ಹಲವು ಘಟನೆ, ಹೋರಾಟಗಳು ಸಂಭವಿಸುತ್ತವೆ. ಮುಂದೆ ಒಂದು ಸಂದರ್ಭದಲ್ಲಿ ಅವಳ ತಂದೆ ಮನೆಯವರನ್ನು ನೋಡಲು ಬಂದರೂ ಬೆಳ್ಳಿ ಕೋಪ ಹಾಗೂ ನಿರ್ಲಕ್ಷ್ಯ ತೋರಿಸುತ್ತಾಳೆ. ಮುಂದೆ ಈ ಕಥೆಗೆ ಬಂದ ಒಂದು ತಿರುವು ಮತ್ತು ಕೂಡಿಬಂದ ಕೆಲವು ಸಂದರ್ಭಗಳು ಹೊಸ ಕನಸೊಂದರ ಆವಿಷ್ಕಾರಕ್ಕೆ ನಾಂದಿಯಾಗುತ್ತದೆ.

ಸೈನಿಕನೊಬ್ಬನ ಮನೆಯಲ್ಲಿ ಹುಟ್ಟಿದ 9 ವರ್ಷದ ಮುಗ್ಧ ಹುಡುಗಿ ಬೆಳ್ಳಿಯ ದೃಷ್ಟಿಯಲ್ಲಿ ನಡೆಯುವ ಕಥೆ ಇದು. ಬೆಳ್ಳಿಯ ಜೀವನದಲ್ಲಿ ಉಂಟಾಗುವ ಬದಲಾವಣೆ ದೇಶಭಕ್ತಿಗೆ ಸುಂದರ ಬುನಾದಿ ಹಾಕಿದೆ. ಮುಗ್ಧ ಬೆಳ್ಳಿಯ ಪಾತ್ರದ ಮೂಲಕ ಭಾರತೀಯ ಸೇನೆಯ ಮರೆಯಲಾಗದ ಸೇವೆ, ಶೌರ್ಯ ಸಾಧನೆಗಳು, ಶಿಸ್ತು, ಬಲಿದಾನ, ಯಶೋಗಾಥೆ. ಎಳೆ ಎಳೆಯಾಗಿ ಪ್ರೇಕ್ಷಕರ ಮನದಲ್ಲಿ ತೆರೆದುಕೊಂಡು ರಾಷ್ಟ್ರಪ್ರೇಮದ ಕಿಚ್ಚನ್ನು ಹೊತ್ತಿಸುತ್ತದೆ.

ಈ ಚಲನಚಿತ್ರವು ಮೊಖೋ, ಕ್ರೌನ್‌ ವುಡ್‌, ಇಂಡೋ ಫ್ರೆಂಚ್‌, ತ್ರಿಲೋಕ, ಜ್ಯೂರಿ ಬಿರ್ಸಮುಂಡಾ, ರೋಶನಿ ಮುಂತಾದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಿರ್ಮಾಪಕ, ನಿರ್ದೇಶಕ, ಉತ್ತಮ ಮಕ್ಕಳ ಚಲನಚಿತ್ರ, ವಿನ್ನರ್‌, ಜ್ಯೂರಿ ಪ್ರಶಸ್ತಿಗಳನ್ನು ಪಡೆದಿದೆ.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.