Nagamangala: ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ: ಉದ್ವಿಗ್ನ

ಪೊಲೀಸರು ಸೇರಿದಂತೆ ಹಲವರಿಗೆ ಗಾಯ, ಪೊಲೀಸ್‌ ಠಾಣೆ ಮುಂದೆ ಹಿಂದೂ ಯುವಕರ ಪ್ರತಿಭಟನೆ

Team Udayavani, Sep 12, 2024, 6:50 AM IST

Nagamangala: ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ: ಉದ್ವಿಗ್ನ

ನಾಗಮಂಗಲ(ಮಂಡ್ಯ): ಗಣೇಶಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಪರಿಣಾಮ ಪೊಲೀಸರು ಸೇರಿ ಹಲವು ಯುವಕರು ಗಾಯಗೊಂಡಿರುವ ಘಟನೆ ಪಟ್ಟಣದಲ್ಲಿ ಬುಧವಾರ ರಾತ್ರಿ ನಡೆದಿದ್ದು, ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ಪಟ್ಟಣದ ಬದರಿಕೊಪ್ಪಲು ಮತ್ತು ನಾಗಮಂಗಲ ಪಟ್ಟಣದ ವಿನಾಯಕ ಬಳಗ ಯುವಕರ ಸಂಘದ ವತಿಯಿಂದ ಬುಧವಾರ ಗಣಪತಿ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಈ ಹಿನ್ನೆಲೆಯಲ್ಲಿ ಪಟ್ಟಣದ ಮುಖ್ಯರಸ್ತೆಯಲ್ಲಿ ಶಾಂತಿಯುತವಾಗಿ ಮೆರವಣಿಗೆ ನಡೆಯುತ್ತಿತ್ತು. ಪಟ್ಟಣದ ಮಂಡ್ಯ ವೃತ್ತ, ಮೈಸೂರು ರಸ್ತೆಯ ಬಳಿ ಮೆರವಣಿಗೆ ಸಾಗಿತ್ತು. ಮಂಡ್ಯ ವೃತ್ತಕ್ಕೆ ಮೆರವಣಿಗೆ ಆಗಮಿಸುತ್ತಿದ್ದಂತೆ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬರುತ್ತಿದ್ದಂತೆ ಅನ್ಯಕೋಮಿನ ಕೆಲವು ಯುವಕರು ನಮ್ಮ ದರ್ಗಾದ ಬಳಿ ಮೆರವಣಿಗೆ ಮಾಡಬೇಡಿ, ಪಟಾಕಿ, ತಮಟೆ, ನಗಾರಿ ಬಾರಿಸಬೇಡಿ, ಜೈಕಾರ ಕೂಗಬೇಡಿ ಎಂದು ಗಣಪತಿ ಮೆರವಣಿಗೆ ನಡೆಸುತ್ತಿದ್ದ ಯುವಕರಿಗೆ ತಾಕೀತು ಮಾಡಿದ್ದಾರೆ. ಇದನ್ನು ಹಿಂದೂ ಯುವಕರು ಪ್ರಶ್ನಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ಅನ್ಯಕೋಮಿನ ಯುವಕರು ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಕೆರಳಿದ ಹಿಂದೂ ಯುವಕರು ಜೈಶ್ರೀರಾಂ ಎಂದು ಘೋಷಣೆ ಕೂಗಿದ್ದಾರೆ.

ಅನ್ಯ ಕೋಮಿನ ಯುವಕರು ಕಲ್ಲು ತೂರಾಟ ತೀವ್ರಗೊಳಿಸಿದ ಪರಿಣಾಮ ಪೊಲೀಸರು ಸೇರಿದಂತೆ ಯುವಕರು ಗಾಯಗೊಂಡಿದ್ದಾರೆ. ಎಚ್ಚೆತ್ತ ಪೊಲೀಸರು ಲಾಠಿ ಬೀಸಿ ಉದ್ರಿಕ್ತ ಗುಂಪನ್ನು ಚದುರಿಸಿದರೂ, ಅನ್ಯಕೋಮಿನ ಯುವಕರು ಲಾಂಗ್‌ ಮಚ್ಚುಗಳನ್ನು ಹಿಡಿದು ಬೀದಿಗಿಳಿದು ಗಲಾಟೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಗಣೇಶ ಮೂರ್ತಿ ನಿಲ್ಲಿಸಿ ಪ್ರತಿಭಟನೆ
ಗಲಾಟೆ ತೀವ್ರಗೊಳ್ಳುತ್ತಿದ್ದಂತೆ ಮೆರವಣಿಗೆಯನ್ನು ಸ್ಥಗಿತಗೊಳಿಸಿ ಯುವಕರು ಪೊಲೀಸ್‌ ಠಾಣೆ ಮುಂದೆ ಗಣೇಶ ಮೂರ್ತಿ ನಿಲ್ಲಿಸಿ ಪ್ರತಿಭಟನೆ ನಡೆಸಿದ್ದಾರೆ. ಗಣಪತಿ ಉತ್ಸವ ನಡೆಯಲು ಬಿಡದೇ ವಿನಾಕಾರಣ ನಮ್ಮ ಮೇಲೆ ಹಲ್ಲೆ ಮಾಡಿದ ಅನ್ಯಕೋಮಿನ ಯುವಕರನ್ನು ಬಂಧಿ ಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಗಲಾಟೆಯಲ್ಲಿ ಪೊಲೀಸ್‌ ಅ ಧಿಕಾರಿಗಳೂ ಸೇರಿದಂತೆ ಹತ್ತಾರು ಮಂದಿ ಗಾಯಗೊಂಡಿದ್ದಾರೆ. ಘಟನೆಯಿಂದ ನಾಗಮಂಗಲ ಪಟ್ಟಣ ಪ್ರಕ್ಷುಬ್ಧಗೊಂಡಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪಟ್ಟಣದಲ್ಲೇ ಮೊಕ್ಕಾಂ ಹೂಡಿದ್ದು, ಪರಿಸ್ಥಿತಿ ಹತೋಟಿಗೆ ತರಲು ಹರಸಾಹಸ ಪಡುತ್ತಿದ್ದಾರೆ.

ಮಚ್ಚು, ಲಾಂಗ್‌, ಪೆಟ್ರೋಲ್‌ ಬಾಂಬ್‌ ಹಿಡಿದು ಓಡಾಟ?
ಅನ್ಯಕೋಮಿನ ಯುವಕರು ಮಚ್ಚು, ಲಾಂಗ್‌ ಹಾಗೂ ಪೆಟ್ರೋಲ್‌ ಬಾಂಬ್‌ನಂಥ ಅಪಾಯಕಾರಿ ವಸ್ತುಗಳನ್ನು ಹಿಡಿದು ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಮೆರವಣಿಗೆ ನಡೆಯಲು ಬಿಡುತ್ತಿಲ್ಲ. ಅಲ್ಲದೆ, ಹಿಂದೂಗಳ ಕೆಲವು ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಹಿಂದೂ ಯುವಕರು ಆರೋಪಿಸಿದ್ದಾರೆ. ಇದರಿಂದ ಕೆರಳಿದ ಕೆಲ ಹಿಂದೂ ಯುವಕರು ಮುಸ್ಲಿಮರಿಗೆ ಸೇರಿದ ಅಂಗಡಿಗಳಿಗೂ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಪಟ್ಟಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಟಾಪ್ ನ್ಯೂಸ್

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

Nagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿNagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿ

Nagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿ

RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ

RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.