Medicine ಜನೌಷಧ ಕೇಂದ್ರದಲ್ಲಿ ಸಿಗುತ್ತಿಲ್ಲ ಅಗತ್ಯ ಔಷಧ!

ಪೂರೈಕೆಯ ವ್ಯತ್ಯಯದಿಂದಾಗಿ ಜನೌಷಧ ಮೇಲಣ ಜನರ ವಿಶ್ವಾಸ ನಷ್ಟ

Team Udayavani, Sep 12, 2024, 7:45 AM IST

ಜನೌಷಧ ಕೇಂದ್ರದಲ್ಲಿ ಸಿಗುತ್ತಿಲ್ಲ ಅಗತ್ಯ ಔಷಧ!

ಉಡುಪಿ: ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕೈಗೆಟುಕುವ ದರದಲ್ಲಿ ಜನ ಸಾಮಾನ್ಯರಿಗೆ ಔಷಧ ಸಿಗಬೇಕು ಎಂಬ ಪರಿ ಕಲ್ಪನೆಯಲ್ಲಿ ಆರಂಭಗೊಂಡಿರುವ ಜನೌಷಧ ಕೇಂದ್ರಗಳಿಗೆ ಪ್ರಸ್ತುತ ತುರ್ತು ಔಷಧಗಳೇ ಸರಿಯಾಗಿ ಪೂರೈಕೆ ಆಗುತ್ತಿಲ್ಲ.

ಜನೌಷಧ ಕೇಂದ್ರ ಗಳಲ್ಲಿ ವಿವಿಧ ಮಾತ್ರೆ, ಔಷಧ ಹಾಗೂ ಶಸ್ತ್ರ ಚಿಕಿತ್ಸೆಯ ಸಾಮಗ್ರಿಗಳ ಸಹಿತ ಸುಮಾರು 2 ಸಾವಿರ ಉತ್ಪನ್ನಗಳ ಮಾರಾಟಕ್ಕೆ ಕೇಂದ್ರ ಸರಕಾರ ಅನುಮತಿ ಕಲ್ಪಿಸಿದೆ.

ಜನೌಷಧ ಕೇಂದ್ರಗಳಲ್ಲಿ ಲಭ್ಯವಿರುವ ಎಲ್ಲ ಮಾತ್ರೆಗಳು ಮತ್ತು ಔಷಧಗಳು ಇತರ ಔಷಧಾಲಯಗಳಲ್ಲಿ ಸಿಗುವ ಅದೇ ಮಾದರಿಯ ಔಷಧಕ್ಕಿಂತ ಶೇ. 50ರಿಂದ ಶೇ. 80ರಷ್ಟು ಕಡಿಮೆ ದರದಲ್ಲಿ ಜನಸಾಮಾನ್ಯರಿಗೆ ಸಿಗುತ್ತಿವೆ.

ಆದರೆ ಇತ್ತೀಚೆಗಿನ ದಿನಗಳಲ್ಲಿ ಔಷಧಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಜನೌಷಧ ಕೇಂದ್ರಗಳ ಮೇಲೆ ಜನರಲ್ಲಿ ನಂಬಿಕೆ ಕ್ಷಿಣಿಸಲಾರಂಭಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ರಾಜ್ಯದಲ್ಲಿ 1,280 ಜನೌಷಧ ಕೇಂದ್ರಗಳಿವೆ. ಈ ಪೈಕಿ ಉಡುಪಿಯಲ್ಲಿ 64 ಹಾಗೂ ದಕ್ಷಿಣ ಕನ್ನಡದಲ್ಲಿ 102 ಇವೆ. ಆದರೆ ಇಡೀ ರಾಜ್ಯಕ್ಕೆ ಇರುವುದು ಕೇವಲ ಮೂವರು ಔಷಧ ವಿತರಕರು. ಹೀಗಾಗಿ ಉಡುಪಿ, ದ.ಕ. ಜಿಲ್ಲೆಗಳಿಗೆ ಜನರಿಗೆ ಅಗತ್ಯವಿರುವ ಔಷಧಗಳು ಕ್ಲಪ್ತ ಸಮಯದಲ್ಲಿ ಪೂರೈಕೆಯಾಗುತ್ತಿಲ್ಲ. ಉಡುಪಿ, ದ.ಕ., ಉ.ಕ. ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಪ್ರತ್ಯೇಕ ವಿತರಕರನ್ನು ನಿಯೋಜಿಸುವಂತೆ ಈಗಾಗಲೇ ಜನೌಷಧ ಕೇಂದ್ರಗಳ ಮಾಲಕರ ಸಂಘದ ಮೂಲಕ ಜನಪ್ರತಿನಿಧಿಗಳಿಗೆ ಮನವಿಯನ್ನು ಸಲ್ಲಿಸಲಾಗಿದೆ.

ಇದ್ದ ಏಕೈಕ ಉಗ್ರಾಣವೂ ಮುಚ್ಚಿದೆ
ಜನೌಷಧ ಕೇಂದ್ರಗಳಿಗೆ ಔಷಧ ಪೂರೈಕೆ ಮಾಡಲು ಬೆಂಗಳೂರಿನಲ್ಲಿ ಒಂದು ಉಗ್ರಾಣ ತೆರೆಯಲಾಗಿತ್ತು. ಅಲ್ಲಿಂದ ಪೂರೈಕೆಯಾಗುತ್ತಿದ್ದ ಸಂದರ್ಭದಲ್ಲಿ ಸಮಯಕ್ಕೆ ಸರಿಯಾಗಿ ಔಷಧಗಳು ಬರುತ್ತಿದ್ದವು. ಈಗ ಈ ಉಗ್ರಾಣವನ್ನು ತಾತ್ಕಾಲಿಕವಾಗಿ ಮುಚ್ಚಿರುವುದರಿಂದ ಔಷದಗಳು ಹೊರ ರಾಜ್ಯಗಳಿಂದ ಪೂರೈಕೆ ಆಗಬೇಕಿದೆ. ಇದರಿಂದ ವೆಚ್ಚವೂ ಹೆಚ್ಚಾಗುತ್ತಿದೆ, ಪೂರೈಕೆಯೂ ವಿಳಂಬವಾಗುತ್ತಿದೆ. ಕೆಲವೊಮ್ಮೆ ಅಗತ್ಯವಿರುವ ಕೆಲವು ಉತ್ಪನ್ನಗಳು ಎಷ್ಟು ದಿನ ಕಳೆದರೂ ಬರುವುದೇ ಇಲ್ಲ. ಒಂದು ಸಲ ಬಂದ ಔಷಧ ಇನ್ನೊಂದು ಸಲ ಬರುವುದಿಲ್ಲ. ಹೀಗಾಗಿ ನಿರಂತರತೆ ಕಾಪಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರಿಂದ ಜನರು ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಒಂದು ಸುಸಜ್ಜಿತ ಉಗ್ರಾಣ ಆಗಬೇಕು ಎಂಬುದು ಜನೌಷಧ ಕೇಂದ್ರದ ಮಾಲಕರು ಆಗ್ರಹವಾಗಿದೆ.

ಅರಿವು ಅಗತ್ಯ
ಜನೌಷಧ ಕೇಂದ್ರಗಳಲ್ಲಿ ಕಡಿಮೆ ದರದಲ್ಲಿ ಔಷಧಗಳು ಲಭ್ಯವಾಗುತ್ತಿವೆ. ಈ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಕಾರ್ಯ ಆಗಬೇಕು. ವಿಶೇಷವಾಗಿ ಸರಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಮೊದಲಾದ ಕಡೆಗಳಿಗೆ ಅಗತ್ಯವಿರುವ ಸರ್ಜಿಕಲ್‌ ಐಟಂಗಳನ್ನು ಜನೌಷಧ ಕೇಂದ್ರಗಳ ಮೂಲಕ ಖರೀದಿಸುವಂತೆ ಅರಿವು ಮೂಡಿಸುವ ಅಗತ್ಯವಿದೆ ಎಂದ ಜನೌಷಧ ಕೇಂದ್ರದ ಮಾಲಕರ ಸಂಘದ ಪ್ರತಿನಿಧಿ ಸುಂದರ್‌ ಪೂಜಾರಿ ತಿಳಿಸಿದ್ದಾರೆ.

ಯಾವ ಔಷಧಗಳಿಗೆ ಬೇಡಿಕೆ ಹೆಚ್ಚು?
ಮಧುಮೇಹ (ಶುಗರ್‌), ಅಧಿಕ ರಕ್ತದೊತ್ತಡ (ಬಿಪಿ) ಮನೋರೋಗ, ಮೈಕೈ ನೋವು ಹಾಗೂ ಜ್ವರ, ಶೀತ, ಕೆಮ್ಮು ಸಹಿತ ದಿಢೀರ್‌ ಅನಾರೋಗ್ಯಗಳಿಗೆ ಸಂಬಂಧಿಸಿದ ಔಷಧಗಳು.

ಜನೌಷಧ ಕೇಂದ್ರಗಳಿಗೆ
ತುರ್ತು ಅಗತ್ಯದ ಔಷಧಗಳು ಲಭ್ಯವಾಗದೆ ಇರುವುದರ ಸಹಿತ ಜನೌಷಧ ಕೇಂದ್ರಗಳು ಎದುರಿಸುತ್ತಿರುವ ಕೆಲವು ಸಮಸ್ಯೆಗಳ ಬಗ್ಗೆ ಇತ್ತೀಚೆಗೆ ಜನೌಷಧ ಕೇಂದ್ರಗಳ ಮಾಲಕರ ಸಂಘದಿಂದ ಮನವಿ ಸಲ್ಲಿಸಿದ್ದಾರೆ. ಅದರಂತೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದು ಸಮಸ್ಯೆಯ ತೀವ್ರತೆಯನ್ನು ತಿಳಿಸಲಾಗುವುದು. ಹಾಗೆಯೇ ಅವರನ್ನು ಖುದ್ದು ಭೇಟಿ ಮಾಡಿ ಜನೌಷಧ ಕೇಂದ್ರಗಳ ಬಲವರ್ಧನೆಗೆ ಅಗತ್ಯವಾದ ಎಲ್ಲ ಕ್ರಮ ತೆಗೆದುಕೊಳ್ಳಲು ಕೋರಲಾಗುವುದು.
-ಕೋಟ ಶ್ರೀನಿವಾಸ ಪೂಜಾರಿ, ಸಂಸದರು

- ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.