Udupi: ಪ್ರಯಾಣಿಕ ಮಹಿಳೆಯ ಸಾವಿರಾರು ರೂ. ಮೌಲ್ಯದ ಸೊತ್ತು ಕಳವು
Team Udayavani, Sep 12, 2024, 1:20 AM IST
ಉಡುಪಿ: ಕೆಎಸ್ಸಾರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್ನಲ್ಲಿದ್ದ ನಗ ನಗದು ಸಹಿತ ಸಾವಿರಾರು ರೂ. ಮೌಲ್ಯದ ಸೊತ್ತು ಕಳವು ಮಾಡಿರುವ ಘಟನೆ ಸೆ. 10ರಂದು ಸಂಜೆ ಉಡುಪಿಯಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಮೂಡ ಗ್ರಾಮದ ಗೀತಾ ಬಾಯಿ (59) ಅವರು ಮಂಗಳೂರಿಗೆ ಹೋಗಲು ಉಡುಪಿಯ ಬನ್ನಂಜೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ಸಿನಲ್ಲಿ ಕುಳಿತಿದ್ದು, ಪಕ್ಕದ ಖಾಲಿ ಸೀಟಿನಲ್ಲಿ ಅವರ ತಂಗಿ ಕುಳಿತುಕೊಳ್ಳಲು ವ್ಯಾನಿಟಿ ಬ್ಯಾಗ್ ಅನ್ನು ಇಟ್ಟಿದ್ದರು.
ಆ ವೇಳೆ ಬಸ್ಸಿನಲ್ಲಿ ಸುಮಾರು 30-32 ವರ್ಷ ಪ್ರಾಯದ ಅಪರಿಚಿತ ಮಹಿಳೆ ವ್ಯಾನಿಟಿ ಬ್ಯಾಗ್ ಮೇಲೆ ಬಿದ್ದಂತೆ ನಟನೆ ಮಾಡಿ, ಸೀಟಿನ ಕೆಳಭಾಗದಲ್ಲಿ ಕುಳಿತಿದ್ದ ಮಗುವನ್ನು ಎತ್ತಿಕೊಂಡು ಹೋಗಿದ್ದರು. ಬಸ್ ಕಟಪಾಡಿ ದಾಟಿದ ಅನಂತರ ಬ್ಯಾಗ್ ಅನ್ನು ತೆರೆದು ನೋಡಿದಾಗ ಅದರಲ್ಲಿದ್ದ ಪರ್ಸ್ ಕಳವಾಗಿರುವುದು ಕಂಡುಬಂದಿತ್ತು.
ಅದರಲ್ಲಿ 40,000 ರೂ. ನಗದು, 1 ಜತೆ ಹಳೆಯ ಚಿನ್ನದ ಬೆಂಡೋಲೆ, ಕಲ್ಲಿನ ಚಿನ್ನದ ಮೂಗುಬೊಟ್ಟು ಹಾಗೂ 10,000 ರೂ. ಮೌಲ್ಯದ ಓಮನ್ ದೇಶದ ರಿಯಾಲ್ ಕರೆನ್ಸಿ ನೋಟುಗಳಿದ್ದವು. ಕಂಡಕ್ಟರ್ ಬಳಿ ವಿಚಾರಿಸಿದಾಗ ಇಬ್ಬರು ಮಹಿಳೆಯರು ಮತ್ತು ಒಂದು ಮಗು ಉಡುಪಿ ಹಳೆ ತಾಲೂಕು ಕಚೇರಿ ಬಳಿ ಬಸ್ಸಿನಿಂದ ಇಳಿದು ಹೋಗಿರುವುದಾಗಿ ತಿಳಿಸಿದ್ದಾರೆ. ಈ ಮಹಿಳೆಯರೇ ಬ್ಯಾಗ್ ಕಳವು ಮಾಡಿರುವ ಬಗ್ಗೆ ಶಂಕಿಸಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
High Court: ಬಾಂಬ್ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್ ರದ್ದು
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿನ್ ಸನಿಲ್ ಕುರ್ಕಾಲು
Commonwealth ಚಾಂಪಿಯನ್ಶಿಪ್ : ಅಲ್ಲುರಿ ಅಜಯ್ಗೆ ಬಂಗಾರ
High Court; “ಅರ್ಧ ಪಾಕಿಸ್ಥಾನ’: ಯತ್ನಾಳ್ ಹೇಳಿಕೆಗೆ ಹೈಕೋರ್ಟ್ ಸಿಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.