Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?
Team Udayavani, Sep 12, 2024, 1:39 PM IST
ಮುಂಬಯಿ: ಬಾಲಿವುಡ್ (Bollywood) ನಟಿ ಮಲೈಕಾ ಆರೋರಾ(Malaika Arora) ಅವರ ತಂದೆ ಆತ್ಮಹತ್ಯೆ ಮಾಡಿಕೊಂಡ ವಿಚಾರಕ್ಕೆ ಸಂಬಂಧಿಸಿ ಮರಣೋತ್ತರ ಪರೀಕ್ಷೆಯ ವರದಿ ಹೊರಬಿದ್ದಿದೆ.
ಬುಧವಾರ(ಸೆ.11ರಂದು) ಬಾಂದ್ರಾದಲ್ಲಿರುವ ತನ್ನ ನಿವಾಸದಿಂದ ಹಾರಿ ಅನಿಲ್ ಮೆಹ್ತಾ(Anil Mehta) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಂದ್ರಾದ ಬಾಬಾ ಆಸ್ಪತ್ರೆಯಲ್ಲಿ ಅವರ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಅದರ ವರದಿ ಹೊರಬಿದ್ದಿದೆ.
ಇದನ್ನೂ ಓದಿ: Dosa King: ಜೊತೆಯಾಗಲಿದ್ದಾರೆ ಹೇಮಂತ್ – ಜ್ಞಾನವೇಲ್; ತೆರೆಗೆ ಬರಲಿದೆ ʼಸರವಣ ಭವನ್ ಕೇಸ್ʼ
ಕಟ್ಟಡದಿಂದ ಹಾರಿದ ಪರಿಣಾಮ ಅನಿಲ್ ಮೆಹ್ತಾ ಅವರಿಗೆ ಬಹು ಗಾಯಗಳಾಗಿವೆ ಇದರಿಂದಲೇ ಅವರು ಮೃತಪಟ್ಟಿರುವುದಾಗಿ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿರುವುದಾಗಿ ʼನ್ಯೂಸ್ 18ʼ ವರದಿ ಮಾಡಿದೆ.
ಪ್ರತಿ ದಿನದಂತೆ ಅನಿಲ್ ಬುಧವಾರ ಬೆಳಗ್ಗೆ ಬಾಲ್ಕನಿಯಲ್ಲಿ ಪ್ರತಿಕೆ ಓದುತ್ತಾ ಕೂತಿದ್ದರು. ಅವರನ್ನು ಕರೆಯಲು ಮಲೈಕಾ ತಾಯಿ ಜೋಯಿಸ್ ಹೋಗಿದ್ದಾರೆ. ಈ ವೇಳೆ ಅವರ ಕೂಗಿಗೆ ಅನಿಲ್ ಪ್ರತಿಕ್ರಿಯೆ ನೀಡದೆ ಇದ್ದಾಗ, ಬಾಲ್ಕನಿಗೆ ಬಂದು ನೋಡಿದ್ದಾರೆ. ಈ ವೇಳೆ ಅವರು ಕಟ್ಟಡದಿಂದ ಹಾರಿ ಕೆಳಗೆ ಬಿದ್ದಿದ್ದಾರೆ. ಅವರು ಯಾವುದೇ ಕಾಯಿಲೆಯಿಂದ ಬಳಲುತ್ತಿರಲಿಲ್ಲ. ಅವರಿಗೆ ಮೊಣಕಾಲು ನೋವು ಮಾತ್ರ ಇತ್ತು ಎಂದು ಜೋಯಿಸ್ ಹೇಳಿದ್ದಾರೆ.
ಸಾಯುವ ಮೊದಲು ಅನಿಲ್ ಮಕ್ಕಳಾದ ಮಲೈಕಾ ಮತ್ತು ಅಮೃತಾಗೆ ಕರೆ ಮಾಡಿ “ನನಗೆ ಹುಷಾರಿಲ್ಲ ಸುಸ್ತಾಗಿದೆ” ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್ ಬಾಸ್ʼ ಖ್ಯಾತಿಯ ಅಬ್ದು ವಿವಾಹ
National Cinema Day: ಈ ದಿನ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
Tumbbad 2: ಪ್ರಳಯ್ ಆಯೇಗಾ.. ಹಾರಾರ್ ಥ್ರಿಲ್ಲರ್ ‘ತುಂಬಾಡ್ʼ ಸೀಕ್ವೆಲ್ ಅನೌನ್ಸ್
Jawan Movie: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ಸೂಪರ್ ಹಿಟ್ ʼಜವಾನ್ʼ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.