Malpe: ಅರ್ಧ ತಡೆಗೋಡೆ ಇಲ್ಲದೆ ಸೇತುವೆ ಅಪಾಯಕಾರಿ
Team Udayavani, Sep 12, 2024, 4:43 PM IST
ಮಲ್ಪೆ: ಕೊಡಂಕೂರು ವಾರ್ಡ್ ತೋಟದಮನೆ ಶಿರ್ಡಿ ಸಾಯಿಬಾಬ ಮಂದಿರದ ಸಮೀಪವಿರುವ ಇಂದ್ರಾಣಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯಲ್ಲಿ ಅರ್ಧ ತಡೆಗೋಡೆ ಇರುವ ವಾಹನ ಸವಾರರು ಆತಂಕದಲ್ಲಿಯೇ ಸಂಚಾರ ಮಾಡುವಂತಹ ಪರಿಸ್ಥಿತಿ ಬಂದಿದೆ.
ಸಣ್ಣ ಸೇತುವೆ ಆಗಿದ್ದರೂ ಕೂಡ ಈ ರಸ್ತೆಯ ತಿರುವಿನಲ್ಲಿ ಅರ್ಧಕ್ಕೆ ತಡೆಗೋಡೆ ಇಲ್ಲದಿರುವುದರಿಂದ ಅಪಾಯಕಾರಿ ಸಂಗತಿಯಾಗಿದೆ ಎನ್ನಬಹುದು. ಆದರೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಾತ್ರ ಇದಕ್ಕೂ ತಮಗೂ ಯಾವುದೇ ರೀತಿಯಿಂದ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿರುವುದು ಮಾತ್ರ ಪ್ರಯಾಣಿಕರಿಗೆ ತೀವ್ರ ಆಕ್ರೋಶ ಮೂಡುವಂತಾಗಿದೆ.
ನಿತ್ಯ ಈ ಸೇತುವೆ ಮೂಲಕ ನೂರಾರು ವಾಹನಗಳು ತೆರಳುತ್ತವೆ ಆದರೂ ಅವರು ತಡೆಗೋಡೆ ನಿರ್ಮಾಣ ಮಾಡಲು ಮಾತ್ರ ಆಸಕ್ತಿ ತೋರಿಸುತ್ತಿಲ್ಲ ಏಕೆ ಎಂಬ ಪ್ರಶ್ನೆ ಪ್ರಯಾಣಿಕರಲ್ಲಿ ಕಾಡಲಾರಂಭಿಸಿದೆ. ಕಾರು ಸಹಿತ ಬೈಕ್ ಸವಾರರು ವೇಗವಾಗಿ ಹೋಗುವಾಗ ಒಂದು ವೇಳೆ ಏನಾದರೂ ಆಯ ತಪ್ಪಿದರೆ ನೇರವಾಗಿ ಹಳ್ಳದೊಳಗೆ ಬೀಳಬೇಕಾಗುತ್ತದೆ. ಹೀಗಾಗಿ ಜೀವ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಳವಾಗುತ್ತದೆ. ಅಮಾಯಕರು ಜೀವ ಕಳೆದುಕೊಳ್ಳುವ ಮುಂಚಿತವಾಗಿಯೇ ಎಚ್ಚೆತ್ತುಕೊಳ್ಳುವುದು ಅತ್ಯವಶ್ಯವಿದೆ ಎನ್ನಬಹುದು. ಈ ಸೇತುವೆ ರಸ್ತೆ ಕೂಡ ಸಾಕಷ್ಟು ಪ್ರಮಾಣದಲ್ಲಿ ತಗ್ಗು ದಿನ್ನೆಗಳಿಂದ ಕೂಡಿದೆ. ಆದರೂ ಕೂಡ ದುರಸ್ಥಿ ಭಾಗ್ಯ ಕಂಡಿಲ್ಲ ಎಂಬುದು ಈ ಪ್ರದೇಶದ ವಾಹನ ಸವಾರರ ಗಂಭೀರ ಆರೋಪವಾಗಿದೆ.
ಯಾವ ಸ್ಪಂದನೆಯೂ ಇಲ್ಲ
ಈ ಭಾಗದಲ್ಲಿ ಎರಡು ವಾಹನಗಳು ಎದುರು ಬದರು ಆದಾಗ ಬದಿಗೆ ಸರಿದರೆ ಅನಾಹುತ ತಂದು ಕೊಳ್ಳಬೇಕಾಗುತ್ತದೆ. ಈಗಾಗಲೇ ಇಲ್ಲಿ ಕಾರು, ಬೈಕು ಸವಾರರು ಆಯತಪ್ಪಿ ಹೊಳೆಗೆ ಬಿದ್ದಿದ್ದಾರೆ. ಸೇತುವೆ ತಡೆಗೋಡೆ ನಿರ್ಮಾಣ ಮಾಡಬೇಕೆಂದು ಹಲವಾರು ಬಾರಿ ಮನವಿ ಮಾಡಿದರೂ ಯಾವ ಸ್ಪಂದನೆಯೂ ಇಲ್ಲ.
-ತೋಟದಮನೆ ದಿವಾಕರ ಶೆಟ್ಟಿ, ಶಿರ್ಡಿ ಸಾಯಿಬಾಬಾ ಮಂದಿರ
ಅನುದಾನ ಬಿಡುಗಡೆಯಾಗಿದೆ
ಸೇತುವೆಯ ಎರಡೂ ಬದಿ 10 ಮೀಟರ್ ಅಂತರದಲ್ಲಿ ತಡೆಗೋಡೆ ನಿರ್ಮಾಣಕ್ಕೆ ನಗರೋತ್ಥಾನದಡಿ ವರ್ಷದ ಹಿಂದೆ ಅನುದಾನ ಬಿಡುಗಡೆಯಾಗಿದೆ. ಟೆಂಡರ್ ಪ್ರಕ್ರಿಯೆಯೂ ಆಗಿದೆ. ಆದರೆ ಕಾಮಗಾರಿ ವಹಿಸಿಕೊಂಡ ಗುತ್ತಿಗೆದಾರರು ವಿಳಂಬಿಸುತ್ತಿದ್ದಾರೆ. ಈ ಬಗ್ಗೆ ಮತ್ತೆ ಒತ್ತಡ ತರಲಾಗುವುದು.
– ಸಂಪಾವತಿ, ನಗರಸಭಾ ಸದಸ್ಯರು ಕೊಡಂಕೂರು ವಾರ್ಡ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.