Nagamangala Case; ಹಿಂದೂಗಳ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ: ಹರಿಪ್ರಕಾಶ ಕೋಣೆಮನೆ


Team Udayavani, Sep 12, 2024, 5:45 PM IST

ಶಿರಸಿ: ದೇಶ, ರಾಷ್ಟ್ರ, ಜನ ವಿರೋಧ ಕೆಲಸಕ್ಕೆ ಕಾಂಗ್ರೆಸ್ ಪಕ್ಷ ಕೈ ಹಾಕಿದ್ದು, ನಾಗಮಂಗಲದಲ್ಲಿ ಮುಸ್ಲಿಂ ಮತಾಂಧರು ಗಣೇಶನ ಮೆರವಣಿಗೆ ಮೇಲೆ ದಾಳಿ ನಡೆಸಿ, ಹಿಂದೂಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ, ದೇಶ ಹಾಗೂ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ರಾಜ್ಯ ಬಿಜೆಪಿ ಮಾಧ್ಯಮ ವಕ್ತಾರ ಹರಿಪ್ರಕಾಶ ಕೋಣೆಮನೆ ಹೇಳಿದರು.

ಅವರು ಗುರುವಾರ ನಗರದ ದೀನ ದಯಾಳ್ ಸಭಾಭವನದಲ್ಲಿ ಮಾತನಾಡಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವರ್ತನೆ ದೇಶ ವಿರೋಧಿಶಕ್ತಿಗಳಿಗೆ ಕುಮ್ಮಕ್ಕು ನೀಡುತ್ತಿದೆ. ರಾಹುಲ್ ಗಾಂಧಿ ದೇಶದ ಒಳಗೆ ಮತ್ತು ಹೊರಗಡೆ ಅಖಂಡತೆಯನ್ನು ದುರ್ಬಲಗೊಳಿಸುವ ಕೆಲಸ ಮಾಡುತ್ತಿದ್ದಾರೆ. ದೇಶದ ಒಳಗೆ ಮತೀಯವಾಧಿ ವಿಭಜಕ, ನಕ್ಸಲ್ ವಾದಿ ಧೋರಣೆ ಹಾಗೂ ವಿದೇಶದಲ್ಲಿ ಭಾರತದ ಕುರಿತಾಗಿ ನಕಾರಾತ್ಮಕ ಧೋರಣೆ ಬೆಳೆಯುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಅಮೆರಿಕಾ  ಯುನಿವರ್ಸಿಟಿಯಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷ ಮೀಸಲಾತಿ ಸ್ಥಗಿತಗೊಳಿಸುತ್ತದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಇದೇ ಮೊದಲಲ್ಲ ಇಂತಹ ಹೇಳಿಕೆ ನೀಡಿರುವುದು.‌ ಬಹಳಷ್ಟು ಬಾರಿ ಹೇಳಿದೆ. ರಾಹುಲ್ ಗಾಂಧಿ ಹೇಳಿರುವ ಮೀಸಲಾತಿ ವಿರೋಧಿ ಹೇಳಿಕೆಯನ್ನು ಖಂಡಿಸಿ, ರಾಷ್ಟ್ರ ವ್ಯಾಪಿ ಹೋರಾಟಕ್ಕೆ ಮುಂದಾಗಿದ್ದೇವೆ. ಭಾರತದ ಚುನಾವಣಾ ವ್ಯವಸ್ಥೆ ಸರಿಯಿಲ್ಲ ಎಂದು ವಿದೇಶಿ ನೆಲದಲ್ಲಿ ಹೇಳುತ್ತಾರೆ. ಇದರಿಂದ ಸಂವಿಧಾನಕ್ಕೆ ವಿರೋಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದರು.

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮುಸ್ಲಿಂ ಮತಾಂದರು ಗಣೇಶನ ಮೆರವಣಿಗೆ ಮೇಲೆ ದಾಳಿ ನಡೆಸಿ, ಹಿಂದೂಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಕಾಂಗ್ರೆಸ್ ಆಳ್ವಿಕೆಯಿಂದ ಈ ರೀತಿ ಘಟನೆ ಮರುಕಳಿಸುತ್ತಿದೆ ಎಂದು ಆರೋಪಿಸಿದರು.
ಕಾಶ್ಮೀರದ ಆರ್ಟಿಕಲ್ 370 ರದ್ದು ಮಾಡಿ, ಕಾಶ್ಮೀರದಲ್ಲಿ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದೆ. ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಿ ಮಹಾತ್ಮಾ ಗಾಂಧಿ ಕಂಡ ಕನಸನ್ನು ಪ್ರಧಾನಿ ನರೇಂದ್ರ ಮೋದಿ ನನಸು ಮಾಡಿದ್ದಾರೆ ಎಂದರು.
ಜಿಲ್ಲೆಯಲ್ಲಿ 5 ಲಕ್ಷಕ್ಕೂ ಹೆಚ್ಚು ಹೊಸ ಸದಸ್ಯರ ನೋಂದಣಿ ಯಶಸ್ವಿಯಾಗಿ ನಡೆಯುತ್ತಿದೆ. ಹಳಿಯಾಳದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧ್ಯಕ್ಷರು ಪಕ್ಷದ ಚೌಕಟ್ಟಿನಲ್ಲಿ ಕ್ರಮ ತೆಗೆದುಕೊಂಡಿದ್ದಾರೆ. ಕ್ಯಾದಗಿಯಲ್ಲಿ ನಡೆದ ಘಟನೆ ನನ್ನ ಗಮನಕ್ಕಿಲ್ಲ. ಜಿಲ್ಲಾಧ್ಯಕ್ಷರು ಸೂಕ್ತ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.

ಈ ವೇಳೆ ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ನಗರ ಮಂಡಳಾಧ್ಯಕ್ಷ ಆನಂದ ಸಾಲೇರ, ಎಸ್ .ಟಿ ಮೋರ್ಚಾ ಅಧ್ಯಕ್ಷ ಶ್ರೀಕಾಂತ ಬಳ್ಳಾರಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ, ಸಾಮಾಜಿಕ ಜಾಲತಾಣದ ಸಂಚಾಲಕ ರವಿಕುಮಾರ ಶೆಟ್ಟಿ ಇದ್ದರು.

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Buffellow

Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.