Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

ಫಲಿತಾಂಶ ಪ್ರಕಟಿಸಲಿರುವ ಕೋರ್ಟ್ ; ''ಕೋವಿಡ್ ಕಳ್ಳ'' ನನ್ನು ಜೈಲಿಗೆ ಹಾಕದೆ ಬಿಡುವುದಿಲ್ಲ...!!!

Team Udayavani, Sep 12, 2024, 5:33 PM IST

1-ffsdf

ಚಿಕ್ಕಬಳ್ಳಾಪುರ: ಭಾರೀ ನಿರೀಕ್ಷೆ ಮೂಡಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಗುರುವಾರ(ಸೆ 12 )ನಡೆದಿದ್ದು ಬಿಜೆಪಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಕಾಂಗ್ರೆಸ್ ನ ಆರು ಮಂದಿ ಸದಸ್ಯರು ಪಕ್ಷಾಂತರ ಮಾಡಿ ಬಿಜೆಪಿಗೆ ಬೆಂಬಲ ಸೂಚಿಸಿದ್ದು ರಾಜಕೀಯ ಸಂಘರ್ಷ ಇನ್ನಷ್ಟು ಹೆಚ್ಚಾಗುವಂತೆ ಮಾಡಿದೆ.

ನಗರಸಭೆಯಲ್ಲಿ ಒಟ್ಟು 35 ಮತಗಳಿದ್ದವು. 31 ನಗರಸಭಾ ಸದಸ್ಯರು,ಸಂಸದ ಡಾ. ಸುಧಾಕರ್, ಶಾಸಕ ಪ್ರದೀಪ್ ಈಶ್ವರ್ ಮತ್ತು ಇಬ್ಬರು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರ ಮತವಿತ್ತು.

ಕಾಂಗ್ರೆಸ್ 16 ಸದಸ್ಯರನ್ನು ಹೊಂದಿದ್ದರೂ ಕೊನೆಕ್ಷಣದಲ್ಲಿ 6 ಮಂದಿ ಬಿಜೆಪಿ ಪಾಳಯಕ್ಕೆ ಜಿಗಿದು ಲೆಕ್ಕಾಚಾರ ತಲೆಕೆಳಗೆ ಮಾಡಿದ್ದಾರೆ. ಕಾಂಗ್ರೆಸ್ 10 ಸದಸ್ಯರು,1 ಪಕ್ಷೇತರ, ಪಕ್ಷಾಂತರ ಮಾಡಿದ್ದ ಇಬ್ಬರು ಜೆಡಿಎಸ್ ಸದಸ್ಯರು ಸೇರಿ 16 ಮತಗಳನ್ನು ಮಾತ್ರ ಹೊಂದಿ ಡಾ.ಸುಧಾಕರ್ ಅವರ ರಣತಂತ್ರದ ಮುಂದೆ ಅಧಿಕಾರ ಕಳೆದುಕೊಂಡಿದೆ. ಬಿಜೆಪಿ 9 ಸದಸ್ಯರು, ಕಾಂಗ್ರೆಸ್ ನಿಂದ ಪಕ್ಷಾಂತರ ಮಾಡಿದ 6 ಸದಸ್ಯರು, 3 ಮಂದಿ ಪಕ್ಷೇತರರು ಮತ್ತು 1 ಸಂಸದರ ಮತದಿಂದ ಬಿಜೆಪಿ ಅಧಿಕಾರಕ್ಕೇರಲು  ಸಾಧ್ಯವಾಯಿತು.

ಸಾಮಾನ್ಯಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಗಜೇಂದ್ರ ಅವರು 19 ಮತ ಪಡೆದು ಹುದ್ದೆಗೇರಿದ್ದಾರೆ. ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ ಅಂಬರೀಷ್ 16 ಮತಗಳನ್ನು ಮಾತ್ರ ಪಡೆದರು. ಪರಿಶಿಷ್ಟ ಜಾತಿ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ನಾಗರಾಜ್ 20 ಮತ ಪಡೆದಿದ್ದು, ಕಾಂಗ್ರೆಸ್ ನ ಅಭ್ಯರ್ಥಿ ಮೀನಾಕ್ಷಿ 15 ಮತಗಳನ್ನು ಪಡೆದಿದ್ದಾರೆ ಎಂದು ವಿವರ ಲಭ್ಯವಾಗಿದೆ.

ಅಧಿಕೃತ ಫಲಿತಾಂಶ ಪ್ರಕಟವಿಲ್ಲ
ವಿಧಾನ ಪರಿಷತ್ ಸದಸ್ಯರಾದ ಅನಿಲ್ ಕುಮಾರ್ ಹಾಗೂ ಸೀತಾರಾಂ ಅವರು ಮತದಾನ ಮಾಡಲು ಅರ್ಹರಲ್ಲ ಎಂದು ಸಂಸದ ಡಾ. ಸುಧಾಕರ್ ಬೆಂಬಲಿಗರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಮತದಾನಕ್ಕೆ ಅವಕಾಶ ಮಾಡಿಕೊಟ್ಟು ಚುನಾವಣೆ ಮುಗಿದರೂ ಫಲಿತಾಂಶ ರಿಟ್ ಅರ್ಜಿಯ ತೀರ್ಪಿಗೆ ಒಳಪಟ್ಟಿರುವುದಾಗಿ ಆದೇಶಿಸಿದೆ. ಚುನಾವಣೆ ಮುಗಿದರೂ ಚುನಾವಣಾಧಿಕಾರಿ ಅಧಿಕೃತ ಫಲಿತಾಂಶ ಪ್ರಕಟ ಮಾಡಿಲ್ಲ.

ಬಿಜೆಪಿಗರ ವಿಜಯೋತ್ಸವ
ಅಧಿಕಾರ ಸಿಕ್ಕಿರುವುದು ತಿಳಿಯುತ್ತಿದ್ದಂತೆ ಡಾ.ಸುಧಾಕರ್ ಸೇರಿ ಬಿಜೆಪಿ ಸದಸ್ಯರು, ವಿಜಯೋತ್ಸವ ಆಚರಿಸಿದರು. ಈ ವೇಳೆ ನಗರಸಭೆ ಆವರಣದಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿತ್ತು. ಅಧಿಕಾರಿಗಳು ಸೇರಿ 200 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು.

ಪ್ರದೀಪ್ ಈಶ್ವರ್ ಕೆಂಡಾಮಂಡಲ ; ಪ್ರತಿಜ್ಞೆ!!
ಅಧಿಕಾರ ಕಳೆದುಕೊಂಡ ಬಳಿಕ ಕೆಂಡಾಮಂಡಲವಾದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಏಕವಚನದಲ್ಲೇ ಡಾ.ಸುಧಾಕರ್ ವಿರುದ್ಧ ಕಿಡಿ ಕಾರಿದರು. ‘ಅವನಪ್ಪ ಬಂದರೂ ನನ್ನನ್ನೂ ಏನೂ ಮಾಡಲು ಆಗುವುದಿಲ್ಲ. ಅವನ ಕೋಟೆಯಲ್ಲೇ ಅವನನ್ನು ಹೊಡೆದಿದ್ದೇನೆ. ಕೋವಿಡ್ ಕಳ್ಳನನ್ನು ಜೈಲಿಗೆ ಕಳುಹಿಸದೆ ವಿರಮಿಸುವುದಿಲ್ಲ’ ಎಂದು ಕಿಡಿ ಕಾರಿದರು.

ನಗರಸಭೆ ಚುನಾವಣೆಗೆ 7-8 ಕೋಟಿ ರೂಪಾಯಿ ಖರ್ಚು ಮಾಡಿ ಕಾಂಗ್ರೆಸ್ ಸದಸ್ಯರನ್ನು ಖರೀದಿ ಮಾಡಲಾಗಿದೆ. ಹೆಣಗಳ ಮೇಲೆ ದುಡ್ಡು ಮಾಡಿ ನಗರಸಭೆ ಚುನಾವಣೆಯಲ್ಲಿ ಮೇಲುಗೈ ಸಾಧಿಸಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.

ಸುಧಾಕರ್ ಹರ್ಷ
‘ಅಧಿಕಾರ ಸಿಕ್ಕಿರುವುದು ಖಚಿತವಾಗುತ್ತಿದಂತೆ ಮಾತನಾಡಿದ ಡಾ.ಸುಧಾಕರ್ ‘ನಮ್ಮ ಸದಸ್ಯರನ್ನು ಕಾಂಗ್ರೆಸ್‌ನವರು ಹೈಜಾಕ್ ಮಾಡಲು ಭಾರೀ ಪ್ರಯತ್ನ ಮಾಡಿದರು. ಪ್ರದೀಪ್ ಈಶ್ವರ್ ಉಡಾಫೆ ಮಾತುಗಳು, ದ್ವೇಷದ ರಾಜಕಾರಣ ನನಗೆ ಹೂಮಾಲೆಯಾಗಿ ನನ್ನ ಕೊರಳಿಗೆ ಬಿದ್ದಿದೆ. ಇನ್ನೂ ಮೂರು ವರ್ಷ ಹೀಗೆ ಮಾಡಲಿ ಆಮೇಲೆ ರಾಜ್ಯ, ದೇಶದಲ್ಲಿ ಎಲ್ಲೂ ಅವರಿಗೆ ಅವಕಾಶ ಇಲ್ಲ’ ಎಂದರು.

ಟಾಪ್ ನ್ಯೂಸ್

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.