Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ
ಪವಿತ್ರ ಸ್ಥಳದಲ್ಲೇ ಈ ಮಟ್ಟದ ಲೂಟಿ ಮಾಡಲು ಸಾಧ್ಯವಾಗಿದ್ದರೆ, ಇನ್ನು ...
Team Udayavani, Sep 12, 2024, 6:35 PM IST
ಲಕ್ನೋ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ(Ayodhya) ನಡೆದ ದೊಡ್ಡ ಭೂ ಹಗರಣದಲ್ಲಿ ಆಡಳಿತಾರೂಢ ಬಿಜೆಪಿ(BJP) ಸದಸ್ಯರು ಮತ್ತು ಸರಕಾರಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಸಮಾಜವಾದಿ ಪಕ್ಷದ(Samajwadi Party) ಅಧ್ಯಕ್ಷ ಅಖಿಲೇಶ್ ಯಾದವ್ ಗುರುವಾರ(ಸೆ 12) ಆರೋಪಿಸಿದ್ದಾರೆ.
ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ‘ಪವಿತ್ರ ನಗರದಲ್ಲಿ ನಡೆಯುತ್ತಿರುವ ಭೂ ಸಂಬಂಧಿತ ಕಳ್ಳತನವು ಅಧಿಕಾರದಲ್ಲಿರುವವರು ಸುಗಮಗೊಳಿಸುವ ಭ್ರಷ್ಟಾಚಾರದ ವಿಶಾಲ ಮಾದರಿಯ ಭಾಗವಾಗಿದೆ’ ಎಂದು ಆರೋಪಿಸಿದರು.
ಅಧಿಕಾರಿಗಳು ಮತ್ತು ಬಿಜೆಪಿಯವರು ಲೂಟಿಯಲ್ಲಿ ತೊಡಗಿದ್ದಾರೆ.ಎಲ್ಲಿ ಕಳ್ಳತನವಾಗಿದೆ, ಅಲ್ಲಿ ಯಾವುದೇ ಅಭಿವೃದ್ಧಿಯಾಗುವುದಿಲ್ಲ. ಅಯೋಧ್ಯೆಯಲ್ಲಿ ನಡೆದ ಲೂಟಿಯ ಕರಾಳ ವಾಸ್ತವವನ್ನು ಬಹಿರಂಗಪಡಿಸಿದ್ದಕ್ಕಾಗಿ ನಮ್ಮ ಪಕ್ಷದ ನಾಯಕರಿಗೆ ನಾನು ಧನ್ಯವಾದ ಹೇಳುತ್ತೇನೆ ಎಂದು ಯಾದವ್ ಹೇಳಿದರು.
“ಅಯೋಧ್ಯೆಯಂತಹ ಪವಿತ್ರ ಸ್ಥಳದಲ್ಲಿ ಈ ಮಟ್ಟದ ಲೂಟಿ ಮಾಡಲು ಸಾಧ್ಯವಾಗಿದ್ದರೆ, ಉತ್ತರ ಪ್ರದೇಶದ ಇತರ ಜಿಲ್ಲೆಗಳಲ್ಲಿ ಎಷ್ಟರ ಮಟ್ಟಿಗೆ ಲೂಟಿ ನಡೆಯುತ್ತಿದೆ ಎಂದು ಊಹಿಸಿ” ಎಂದರು.
‘ಒಳ್ಳೆಯ ಕಾರಣಗಳಿಗಾಗಿ ಭೂಮಿ ನೀಡಲು ಬಯಸಿದ ರೈತರಿಗೆ ಪರಿಹಾರವನ್ನು ನಿರಾಕರಿಸಲಾಯಿತು.ಬಡ ಮತ್ತು ನಿಷ್ಕಪಟ ವ್ಯಕ್ತಿಗಳು ತಮ್ಮ ಭೂಮಿಯನ್ನು ಇತರರಿಗೆ ಹಸ್ತಾಂತರಿಸಿದಾಗ ಭೂಮಿಯ ದರವನ್ನು ಹೆಚ್ಚಿಸಲಾಯಿತು. ಇದು ಆದಾಯದ ನಷ್ಟವಲ್ಲವೇ? ”ಎಂದು ಪ್ರಶ್ನಿಸಿದರು.
“ಬಿಜೆಪಿ ಅಧಿಕಾರಿಗಳನ್ನು ಒಳಗೊಂಡ ಭೂ ನೋಂದಣಿಯ ಪ್ರತಿಗಳನ್ನು ನಾವು ಸ್ವೀಕರಿಸಿದ್ದೇವೆ ಎನ್ನುವುದು ನನಗೆ ಸಂತೋಷ ತಂದಿದೆ. ಆರ್ಟಿಲರಿ ಅಭ್ಯಾಸಕ್ಕೆ ಮೀಸಲಾದ ರಕ್ಷಣ ಭೂಮಿಯನ್ನು ಬಿಜೆಪಿ ಸದಸ್ಯರು ಮಾರಾಟ ಮಾಡಿದ್ದಾರೆ. ಅವರು ರೈಲ್ವೆ ಜೋಡಣೆಯನ್ನು ಸಹ ಬದಲಾಯಿಸಿದ್ದಾರೆ, ಇದು ಹಿಂದೆ ಬಡವರ ಭೂಮಿಯಾಗಿದ್ದರೂ ಅವರ ವ್ಯವಹಾರಗಳ ಮೇಲೆ ಪರಿಣಾಮ ಬೀರಲಿಲ್ಲ’ ಎಂದು ಆರೋಪ ಮಾಡಿದ್ದಾರೆ.
ಅಖಿಲೇಶ್ ಈ ಹಿಂದೆ ಜುಲೈ 10 ರಂದು ಉತ್ತರ ಪ್ರದೇಶ ಸರಕಾರ ಅಯೋಧ್ಯೆಯಲ್ಲಿನ ಭೂಮಿಯನ್ನು ಹೊರಗಿನವರಿಗೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಕೋಟ್ಯಂತರ ರೂ. ಹಗರಣ ಆರೋಪ ಮಾಡಿ ಭೂ ವ್ಯವಹಾರಗಳ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.