Ankola: ಸಿಸಿ ಕೆಮರಾ ನಿಷ್ಕ್ರಿಯಗೊಳಿಸಿ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ರೂ. ದೋಚಿದ ಕಳ್ಳರು!
ಶ್ವಾನದಳ, ಬೆರಳಚ್ಚು ತಜ್ಞರೊಂದಿಗೆ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಪೊಲೀಸರು
Team Udayavani, Sep 12, 2024, 9:48 PM IST
ಅಂಕೋಲಾ: ತಾಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಿಸಿ ಕೆಮೆರಾಗಳ ನಿಷ್ಕ್ರಿಯಗೊಳಿಸಿ, ಕಚೇರಿಯಲ್ಲಿದ್ದ ಡಿವಿಆರ್ ಬಾಕ್ಸ್ ನಾಶಪಡಿಸಿ ಲಕ್ಷಾಂತರ ರೂಪಾಯಿಗಳ ಕಳ್ಳರು ದೋಚಿದ ಘಟನೆ ಪಟ್ಟಣ ವ್ಯಾಪ್ತಿಯಲ್ಲಿ ನಡೆದಿದೆ.
ಪೂರ್ಣಪ್ರಜ್ಞ ಕರುಣಾ ವಿಜ್ಞಾನ ಪಿಯು ಕಾಲೇಜಿನಲ್ಲಿ ಕಳವು ಘಟನೆ ನಡೆದಿದ್ದು, ಪದವಿ ಪೂರ್ವ ಕಾಲೇಜಿನ ಪಕ್ಕದಲ್ಲಿದ್ದ ಪ್ರೀ ಪ್ರೈಮರಿ ಶಾಲೆಯಲ್ಲಿ ಕಳವು ನಡೆಸಿದ ಕಳ್ಳರು ಕಚೇರಿ ಒಳ ನುಗ್ಗಿ 18,000 ಮೌಲ್ಯದ ವಸ್ತುಗಳ ಅಪಹರಿಸಿದ್ದರೆ, ಕಾಲೇಜು ಹಾಗೂ ಪ್ರಿ ಪ್ರೈಮರಿ ಸೇರಿ 1.75 ಲಕ್ಷದಿಂದ 2 ಲಕ್ಷದವರೆಗಿನ ಮೌಲ್ಯದ ವಸ್ತುಗಳು, ನಗದು ಕಳವಾಗಿರುವ ಬಗ್ಗೆ ಶಿಕ್ಷಣ ಸಂಸ್ಥೆಯು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.
ಮಧ್ಯರಾತ್ರಿ ಕಳ್ಳರ ಕಾರ್ಯಾಚರಣೆ?
ಗುರುವಾರ ಮುಂಜಾನೆ ಎಂದಿನಂತೆ ಸಿಬ್ಬಂದಿಗಳು ಬೆಳಗ್ಗೆ ಕಚೇರಿಯ ಬಾಗಿಲು ತೆರೆದಾಗ ಕಳ್ಳತನದ ಬಗ್ಗೆ ತಿಳಿದು ಬಂದಿದೆ. ತಕ್ಷಣವೇ ಕಚೇರಿ ಸಿಬ್ಬಂದಿ ಸಂಸ್ಥೆಯ ಮುಖ್ಯಸ್ಥರಿಗೆ ಮಾಹಿತಿ ನೀಡಿದ್ದರಿಂದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಶ್ವಾನದಳ ಮತ್ತು ಬೆರಳಚ್ಚು ತಜ್ಞರೊಂದಿಗೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮಧ್ಯರಾತ್ರಿ ವೇಳೆ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಕಳ್ಳರು ಹೆದ್ದಾರಿ ಮೂಲಕ ಆಗಮಿಸಿ ಶಿಕ್ಷಣ ಸಂಸ್ಥೆಗೆ ನುಗ್ಗಿದ್ದಾರೆ ಎಂದು ತಿಳಿದು ಬಂದಿದೆ.
ಪಿಯು ಕಾಲೇಜಿನ ಕಚೇರಿಯ ಬಾಗಿಲುಗಳ ಮುರಿದು ಒಳ ನುಗ್ಗಿ ಕಪಾಟಿನ ಬೀಗ ಮುರಿದು ಅಲ್ಲಿಯೇ ಇದ್ದ 1,75,000 ರೂ. ಮತ್ತು ಪ್ರಿ ಪ್ರೈಮರಿಯಲ್ಲಿದ್ದ 18 ಸಾವಿರ ರೂಪಾಯಿ ಕಳ್ಳತನ ನಡೆಸಿದ್ದಾರೆ ಎಂದು ಅಂದಾಜಿಸಲಾಗಿದೆ. ಕಳ್ಳತನದಲ್ಲಿ ಹಣವಷ್ಟೆ ಕಳವಾಗಿದೆಯೋ ಅಥವಾ ಕಡತಗಳು ಯಾವುದಾದರೂ ನಾಪತ್ತೆಯಾಗಿದೆಯೋ ಎನ್ನುವುದು ತನಿಖೆಯಿಂದ ತಿಳಿದು ಬರಬೇಕಿದೆ. ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Sirsi: ಬಸ್ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು
Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ
Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.