Hosanagar: ಅಡಗೋಡಿ ಶ್ರೀಮೂಕಾರ್ತೇಶ್ವರ ದೇಗುಲದ ಶಿವಲಿಂಗ 14-15ನೇ ಶತಮಾನದ್ದು!
Team Udayavani, Sep 12, 2024, 10:33 PM IST
ಹೊಸನಗರ: ತಾಲೂಕಿನ ನಗರ ಹೋಬಳಿಯ ಅಡಗೋಡಿಯ ಶ್ರೀಮೂಕಾರ್ತೇಶ್ವರ ದೇಗುಲದ ಶಿವಲಿಂಗ ಪುರಾತನ ಕಾಲಕ್ಕೆ ಸೇರಿದ್ದೆಂಬ ಅಂಶ ಬೆಳಕಿಗೆ ಬಂದಿದೆ. ಮೂಕಾರ್ತೇಶ್ವರ ದೇಗುಲ ಶಿಥಿಲಗೊಂಡಿದ್ದರಿಂದ ಸಮಿತಿ ಜೀರ್ಣೋದ್ಧಾರಕ್ಕೆ ಮುಂದಾದ್ದರಿಂದ ತಿಳಿದು ಬಂದಿದೆ.
ಶಿವಲಿಂಗ ಕಿತ್ತ ಸಂದರ್ಭದಲ್ಲಿ ಇದರ ವಿನ್ಯಾಸ ವಿಶೇಷವಾಗಿ ಗಮನಸೆಳೆದಿದೆ. ಬಳಿಕ ಕಲ್ಲಿನ ವಿಶೇಷತೆ ಬಗ್ಗೆ ಇತಿಹಾಸ ತಜ್ಞರ ಗಮನಕ್ಕೆ ತಂದಾಗ ಇದು 14- 15 ಶತಮಾನದ ಶಿವಲಿಂಗ ಎಂದು ತಿಳಿದು ಬಂದಿದೆ. ಶಿವಲಿಂಗ ಪೀಠ ಸೇರಿ 4 ಅಡಿ ಎತ್ತರವಿದೆ. 2.5 ಅಡಿಗೂ ಹೆಚ್ಚು ಸುತ್ತಳತೆ ಹೊಂದಿದ್ದು, ಪೀಠದಿಂದ ಶಿವಲಿಂಗ 1.5 ಅಡಿ ಎತ್ತರವಿದೆ.
ಶಿವಲಿಂಗದ ಮಹತ್ವ:
ಕರ್ಣಾಟ ಸಾಮ್ರಾಜ್ಯದ (ವಿಜಯನಗರ) ಕಾಲಮಾನದ ಶಿವಲಿಂಗ (ಪೀಠ ಸಹಿತ) ಇರುವುದು ಗಮನಕ್ಕೆ ಬಂದಿದೆ. ಶಿವಲಿಂಗ ಮತ್ತು ಪೀಠವು 14 -15ನೇ ಶತಮಾನದಾಗಿದ್ದು, ಇತಿಹಾಸ ತಜ್ಞ ಡಾ. ಜಗದೀಶ್ ಅಗಸಿಬಾಗಿಲು, ಪುರಾತತ್ವ ಇಲಾಖೆಯ ಡಾ.ಶೇಜೇಶ್ವರ, ಅಜಯಕುಮಾರ ಶರ್ಮಾ, ಶಿವಲಿಂಗ ಮತ್ತು ಅದರ ಪೀಠದ ಆಧಾರದ ಮೇಲೆ ಇದರ ಕಾಲಮಾನ 14-15ನೇ ಶತಮಾನದ್ದು, ಅಂದರೆ 1301 ರಿಂದ 1500ರ ಕಾಲಘಟ್ಟಕ್ಕೆ ಸೇರಿರಬಹುದು ಎಂದು ಅಂದಾಜಿಸಿದ್ದಾರೆ.
ದೇವಸ್ಥಾನ ಸಮಿತಿ ಅಧ್ಯಕ್ಷ ನಾಗಪ್ಪ ನೇತೃತ್ವದಲ್ಲಿ ದೇಗುಲದ ಜೀರ್ಣೋದ್ಧಾರಕ್ಕೆ ಮುಂದಾಗಿದ್ದು ರೂ.20 ಲಕ್ಷ ವೆಚ್ಚ ಅಂದಾಜಿಸಲಾಗಿದೆ. ಲಿಂಗ ಪುರಾತನ ಕಾಲದ ಮಹತ್ವ ಹೊಂದಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಜೀರ್ಣೋದ್ಧಾರಕ್ಕೆ ಮತ್ತಷ್ಟು ಮಹತ್ವ ಬಂದಿದೆ ಎಂದು ಸ್ಥಳೀಯರಾದ ಶುಶ್ರುತ್ ಭಟ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
Thirthahalli ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಫ್ಲೆಕ್ಸ್:ಕ್ರಮಕ್ಕೆ ಆರಗ ಒತ್ತಾಯ
Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.