Mandya; ನಾಗಮಂಗಲದಲ್ಲಿ ನಡೆದಿದ್ದು ಸಣ್ಣ ಗಲಾಟೆ: ಗೃಹ ಸಚಿವ ಪರಮೇಶ್ವರ್
ಕೆಎಸ್ಆರ್ಪಿ ತುಕಡಿ ಸ್ಥಳದಲ್ಲಿ ನಿಯೋಜನೆ ; ಯಾರಿಗೂ ಪ್ರಾಣಹಾನಿ, ಮತ್ತಿತರ ತೊಂದರೆ ಆಗಿಲ್ಲ
Team Udayavani, Sep 13, 2024, 12:08 AM IST
ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಗಲಾಟೆ ಸಣ್ಣ ಪ್ರಮಾಣದಲ್ಲಿ ಪ್ರಾರಂಭವಾಗಿ ಅಲ್ಲಿಯೇ ಅಂತ್ಯಗೊಂಡಿದೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಘಟನೆ ನಡೆಯಬಾರದಾಗಿತ್ತು. ಆದರೆ, ಸಣ್ಣ ಪ್ರಮಾಣದಲ್ಲಿ ಪ್ರಾರಂಭವಾಗಿ ಅಂತ್ಯವಾಗಿದೆ. ಮುಂಜಾಗ್ರತೆಯ ಕ್ರಮವಾಗಿ ಕೆಎಸ್ಆರ್ಪಿ ತುಕಡಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು. ಪೊಲೀಸರು ಹತೋಟಿಗೆ ತೆಗೆದುಕೊಂಡಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಏನೂ ಗಲಾಟೆ ಆಗಿಲ್ಲ ಎಂದು ಹೇಳಿದರು.
ಮೆರವಣಿಗೆ ವೇಳೆ ಕಲ್ಲು ತೂರಾಟವಾದಾಗ ಒಬ್ಬರಿಗೊಬ್ಬರಿಗೆ ಘರ್ಷಣೆ ಮಾಡಿಕೊಂಡಿದ್ದಾರೆ. ಅನಂತರ ಎಲ್ಲವೂ ಸರಿ ಹೋಯಿತು ಅಂತ ವಾಪಸ್ ಹೋಗುವಾಗ ಕೆಲವರು ವಾಹನಗಳಿಗೆ ಬೆಂಕಿ ಇಟ್ಟಿದ್ದಾರೆ. ಅಷ್ಟರೊಳಗೆ ಪೊಲೀಸರು ಎಚ್ಚೆತ್ತುಕೊಂಡು ಹತೋಟಿಗೆ ತೆಗೆದುಕೊಂಡಿದ್ದಾರೆ ಎಂದರು.
ಎಸ್ಪಿ, ಐಜಿಪಿ, ಕೆಎಸ್ಆರ್ಪಿ ತುಕಡಿ ಸ್ಥಳದಲ್ಲಿದೆ. ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರನ್ನು ಸ್ಥಳಕ್ಕೆ ಕಳುಹಿಸಿಕೊಟ್ಟಿದ್ದೇವೆ. ಈ ಘಟನೆಯನ್ನು ಕೋಮುಗಲಭೆ ಅಂತ ಹೇಳಲಾಗುವುದಿಲ್ಲ. ಇದನ್ನು ಹೆಚ್ಚು ಬೆಳೆಯಲು ಬಿಡುವುದಿಲ್ಲ, ಪೊಲೀಸರು ಬಿಟ್ಟಿಲ್ಲ. ಹೆಚ್ಚು ಪ್ರಚಾರ ನೀಡುವುದೂ ಬೇಡ ಎಂದು ಮನವಿ ಮಾಡಿದರು.
ಘಟನೆಗೆ ಅತಿಯಾದ ಓಲೈಕೆಯೇ ಕಾರಣ ಎಂದಿರುವ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, ಅದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಅವರು ಈ ಹಿಂದೆ ಯಾವ ರೀತಿ ಓಲೈಕೆ ಮಾಡುತ್ತಿದ್ದರೋ ಗೊತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.