Mandya ನಾಗಮಂಗಲ ಗಲಭೆ ಪೂರ್ವಯೋಜಿತ ಕೃತ್ಯ: ಬಿಜೆಪಿ

ಗಲಭೆ ಪೀಡಿತ ಪ್ರದೇಶಕ್ಕೆ ಬಿಜೆಪಿ ನಿಯೋಗ ಭೇಟಿ ಪೆಟ್ರೋಲ್‌ ಬಾಂಬ್‌ ಹಾಕಿದ್ದು ಸಣ್ಣ ಘಟನೆಯೇ?: ವಿಪಕ್ಷ ನಾಯಕ ಆರ್‌. ಅಶೋಕ್‌

Team Udayavani, Sep 13, 2024, 12:11 AM IST

Mandya ನಾಗಮಂಗಲ ಗಲಭೆ ಪೂರ್ವಯೋಜಿತ ಕೃತ್ಯ: ಬಿಜೆಪಿ

ಮಂಡ್ಯ: ಗಣೇಶ ಮೆರವಣಿಗೆ ವೇಳೆ ನಾಗಮಂಗಲ ಪಟ್ಟಣದಲ್ಲಿ ನಡೆದ ಗಲಭೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಬಿಜೆಪಿ ನಾಯಕರು, ನಾಗಮಂಗಲ ಗಲಭೆ ಪೂರ್ವಯೋಜಿತ ಕೃತ್ಯ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ದೇಶದ್ರೋಹಿಗಳಿಗೆ ಕಾಂಗ್ರೆಸ್‌ ಸರಕಾರ ಸಹಕಾರ ನೀಡುತ್ತಿರುವುದರಿಂದಲೇ ಇಂಥ ಕೃತ್ಯಗಳು ಹೆಚ್ಚುತ್ತಿವೆ ಎಂದು ಕಿಡಿ ಕಾರಿದ್ದಾರೆ.

ಗಲಭೆ ಹಿನ್ನೆಲೆಯಲ್ಲಿ ಗುರುವಾರ ಸಂಜೆ ನಾಗಮಂಗಲ ಪಟ್ಟಣಕ್ಕೆ ಭೇಟಿ ನೀಡಿದ ಬಿಜೆಪಿ ನಿಯೋಗ ಪರಿಸ್ಥಿತಿ ಅವಲೋಕನ ಮಾಡಿತು. ಬೆಂಕಿಯಿಂದ ಸುಟ್ಟು ಕರಕಲಾದ ಅಂಗಡಿಗಳನ್ನು ವೀಕ್ಷಿಸಿ ಮಾಲೀಕರಿಂದ ಮಾಹಿತಿ ಪಡೆದುಕೊಂಡು, ದೇಶದ್ರೋಹಿಗಳಿಗೆ ಕಾಂಗ್ರೆಸ್‌ ಸರಕಾರ ಸಹಕಾರ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿತು.

ಇದು ಸಣ್ಣ ಘಟನೆಯೇ?
ಸುದ್ದಿಗಾರರೊಂದಿಗೆ ಮಾತನಾಡಿ, ಗೃಹ ಸಚಿವರು ಇದನ್ನು ಸಣ್ಣ ಘಟನೆ ಎನ್ನುತ್ತಾರೆ. ಪೆಟ್ರೋಲ್‌ ಬಾಂಬ್‌ ಹಾಕಿರುವುದು ಅವರಿಗೆ ಸಣ್ಣ ಘಟನೆಯೇ? ಭಯೋತ್ಪಾದನ ಕೃತ್ಯವೂ ಈ ರೀತಿ ನಡೆಯುವುದಿಲ್ಲ. ಕಾನೂನನ್ನು ಸಂಪೂರ್ಣವಾಗಿ ಕೈಗೆತ್ತುಕೊಂಡಿದ್ದಾರೆ. ಕಳೆದ ಬಾರಿಯೂ ಗಣಪತಿ ವಿಚಾರಕ್ಕೆ ಗಲಾಟೆಯಾಗಿದೆ. ಇದು ಪೂರ್ವ ನಿಯೋಜಿತ ಕೃತ್ಯ. ಮಸೀದಿಯಲ್ಲಿ ಪ್ಲಾನ್‌ ಮಾಡಿ ಗಲಭೆ ಎಬ್ಬಿಸಿದ್ದಾರೆ. ಗಣಪತಿ ಹಬ್ಬ ನಡೆಯಬಾರದು ಎಂದು ಕುತಂತ್ರ ಮಾಡಿ ಈ ಕೃತ್ಯ ಮಾಡಿದ್ದಾರೆ. ಕೃತ್ಯದಲ್ಲಿ ಅಂಗಡಿ-ಮುಂಗಟ್ಟು ಕಳೆದುಕೊಂಡವರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಚಿವರಾದ ಕೆ.ಸಿ. ನಾರಾಯಣಗೌಡ, ಡಾ| ಅಶ್ವತ್ಥನಾರಾಯಣ್‌, ಸುನಿಲ್‌ಕುಮಾರ್‌, ಮಾಜಿ ಶಾಸಕ ಕೆ. ಸುರೇಶ್‌ಗೌಡ, ಮಾಜಿ ಸಂಸದ ಪ್ರತಾಪ್‌ ಸಿಂಹ ಮತ್ತಿತರರು ನಿಯೋಗದಲ್ಲಿದ್ದರು.

ದೇಶದ್ರೋಹಿಗಳಿಗೆ ಕಾಂಗ್ರೆಸ್‌ ಸಹಕಾರ: ವಿಜಯೇಂದ್ರ
ದೇಶದ್ರೋಹಿಗಳಿಗೆ ಕಾಂಗ್ರೆಸ್‌ ಸರಕಾರ ಸಹಕಾರ ನೀಡುತ್ತಿರುವುದರಿಂದಲೇ ರಾಜ್ಯದಲ್ಲಿ ಇಂಥ ಘಟನೆಗಳು ನಡೆಯಲು ಕಾರಣವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು. ನಾಗಮಂಗಲದಲ್ಲಿ ಶಾಂತಿಯುತವಾಗಿ ಗಣಪತಿ ಮೆರಣಿಗೆ ಮಾಡುತ್ತಿದ್ದರು. ಪೂರ್ವನಿಯೋಜಿತವಾಗಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಅಂಗಡಿಗಳಿಗೆ ಬೆಂಕಿ ಹಾಕಿ ನಾಶ ಮಾಡಿದ್ದಾರೆ. ದೇಶ ದ್ರೋಹಿಗಳು ಅಶಾಂತಿ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ ಎಂದರು. ಪೊಲೀಸರು ಘಟನೆ ವೇಳೆ ಮೂಕ ಪ್ರೇಕ್ಷಕರಾಗಿದ್ದಾರೆ. ಕಾಂಗ್ರೆಸ್‌ ಶಾಸಕರೇ, ಮುಂದಿನ ದಿನಗಳಲ್ಲಿ ನಿಮ್ಮ ಮನೆಗಳಿಗೂ ಈ ದೇಶ ದ್ರೋಹಿಗಳು ನುಗ್ಗುತ್ತಾರೆ. ಬಂಧಿತ ಹಿಂದೂಗಳನ್ನು ಬಿಡುಗಡೆ ಮಾಡಬೇಕು. ದೇಶ ದ್ರೋಹಿಗಳಿಗೆ ಶಿಕ್ಷೆ ನೀಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ಮೇಲೆ ದಾಳಿ ನಡೆಸಿದ್ದು ಪೂರ್ವನಿಯೋಜಿತ ಕೃತ್ಯ. ಘಟನೆ ಸಂಬಂಧ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು. ಮತಾಂಧ ಮುಸ್ಲಿಮರು ಕಳೆದ ವರ್ಷವೂ ಗಲಭೆ ಸೃಷ್ಟಿಸುವ ಪ್ರಯತ್ನ ಮಾಡಿದ್ದರು.
– ಸಿ.ಟಿ. ರವಿ, ವಿಧಾನ ಪರಿಷತ್‌ ಸದಸ್ಯ

ಹಿಂದೂಗಳೆಲ್ಲರೂ ಸೇರಿ ಆರಾಧ್ಯ ದೈವ ಗಣಪತಿ ಮೆರವಣಿಗೆ ನಡೆಸುವ ವೇಳೆ ಪಾಕಿಸ್ತಾನದ ಮನಃಸ್ಥಿತಿ ಇರುವವರು ಕಿಡಿ ಹಚ್ಚಿದ್ದಾರೆ. ರಾಜ್ಯ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು.
– ಕೆ.ಎಸ್‌. ಈಶ್ವರಪ್ಪ, ಮಾಜಿ ಡಿಸಿಎಂ

ರಾಜ್ಯ ಸರಕಾರ ಇಡೀ ಹಿಂದೂ ಸಮಾಜದ ಕ್ಷಮೆ ಕೇಳಬೇಕು. ಹಿಂದೂ ಸಮಾಜದ ಮೇಲೆ ಸರಕಾರವೇ ಗದಾಪ್ರಹಾರ ಮಾಡುತ್ತಿದೆ. ಸರಕಾರ ನಡೆದುಕೊಳ್ಳುವ ರೀತಿ ಸರಿ ಇಲ್ಲ. ಗಲಾಟೆ ಮಾಡುವವರಿಗೆ ಶಕ್ತಿ, ಕುಮ್ಮಕ್ಕು ನೀಡುತ್ತಿದೆ.
– ಎಸ್‌.ಎನ್‌. ಚನ್ನಬಸಪ್ಪ, ಶಾಸಕ

 

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

Nagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿNagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿ

Nagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿ

RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ

RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ

Bharathinagar: ಕಾರು ಡಿಕ್ಕಿ ಹೊಡೆದು ಅಜ್ಜಿ, ಮೊಮ್ಮಗ ಸ್ಥಳದಲ್ಲೇ ಮೃತ್ಯು

Bharathinagar: ಕಾರು ಡಿಕ್ಕಿ ಹೊಡೆದು ಅಜ್ಜಿ, ಮೊಮ್ಮಗ ಸ್ಥಳದಲ್ಲೇ ಮೃತ್ಯು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.