Krishna Byre Gowda “ದಕ್ಷಿಣ ರಾಜ್ಯಗಳು ಜಿಎಸ್‌ಟಿ ಪಾಲಿಗೆ ಧ್ವನಿ ಎತ್ತಬೇಕಿದೆ’

ತೆರಿಗೆ ಸಂಗ್ರಹ ಹೆಚ್ಚುತ್ತಲೇ ಇದ್ದರೂ, ನಮ್ಮ ಪಾಲು ಕುಸಿಯುತ್ತಿದೆ

Team Udayavani, Sep 13, 2024, 12:33 AM IST

Krishna Byre Gowda “ದಕ್ಷಿಣ ರಾಜ್ಯಗಳು ಜಿಎಸ್‌ಟಿ ಪಾಲಿಗೆ ಧ್ವನಿ ಎತ್ತಬೇಕಿದೆ’

ಬೆಂಗಳೂರು: 15ನೇ ಹಣಕಾಸು ಆಯೋಗದ ಶಿಫಾರಸುಗಳಿಂದ ರಾಜ್ಯಕ್ಕೆ ಆಗಿರುವ ಅನ್ಯಾಯಕ್ಕೆ 16ನೇ ಹಣಕಾಸು ಆಯೋಗದಲ್ಲಿ ಪರಿಹಾರ ನೀಡಬೇಕಾಗಿದೆ. ಭವಿಷ್ಯದ ದೃಷ್ಟಿಯಲ್ಲಿ ಇದು ನಿರ್ಣಾಯಕ ಘಟ್ಟವಾಗಿದ್ದು, ವೈಯಕ್ತಿಕವಾಗಿ ಹಾಗೂ ಒಟ್ಟಾಗಿ ದಕ್ಷಿಣದ ರಾಜ್ಯಗಳು ದನಿ ಎತ್ತಬೇಕಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಕರೆ ನೀಡಿದ್ದಾರೆ.

ಕೇರಳ ರಾಜ್ಯ ಆಯೋಜಿಸಿದ್ದ ದಕ್ಷಿಣ ರಾಜ್ಯಗಳ ಹಣಕಾಸು ಸಚಿವರ ಶೃಂಗ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತೆರಿಗೆ ಸಂಗ್ರಹದಲ್ಲಿ ಉತ್ತಮ ಸಾಧನೆ ಮಾಡುವ ರಾಜ್ಯಗಳನ್ನು ಗುರುತಿಸುವ ಕೆಲಸವಾಗಬೇಕು. ಕರ್ನಾಟಕ ಸೇರಿ ಕೆಲವು ರಾಜ್ಯಗಳ ತೆರಿಗೆ ಸಂಗ್ರಹ ಹೆಚ್ಚುತ್ತಲೇ ಇದೆ. ಆದರೆ ಈ ರಾಜ್ಯದ ಪಾಲು ಕುಸಿಯುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಮುಂದಿನ ಜನ ಗಣತಿ ಆಧರಿಸಿ ಲೋಕಸಭೆ ಕ್ಷೇತ್ರಗಳ ಪುನರ್ವಿಂಗಡಣೆಯಾಗಲಿದೆ. ಇದರಿಂದ ದಕ್ಷಿಣ ರಾಜ್ಯಗಳ ರಾಜಕೀಯ ಪ್ರಾತಿನಿಧ್ಯ ಕೇಂದ್ರದಲ್ಲಿ ಕಡಿಮೆಯಾಗುವ ಸಾಧ್ಯತೆ ಇದೆ. ಒಂದೆಡೆ ತೆರಿಗೆ ಸಂಗ್ರಹದ ಕೊಡುಗೆ ಹೆಚ್ಚುತ್ತಲೇ ಹೋಗಲಿದೆ, ರಾಜಕೀಯ ಪ್ರಾತಿನಿಧ್ಯ ಕಡಿಮೆಯಾಗಲಿದೆ. ಹೀಗಾಗಿ ಒಟ್ಟಾಗಿ ದನಿ ಎತ್ತುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಕರ್ನಾಟಕದ ತೆರಿಗೆ ಪಾಲನ್ನು ಸಭೆಯ ಗಮನಕ್ಕೆ ತಂದ ಅವರು, 100 ರೂ. ತೆರಿಗೆ ಸಂಗ್ರಹ ಕೇಂದ್ರಕ್ಕೆ ಕಳಿಸಿದರೆ 14-15 ರೂ. ಮಾತ್ರ ವಾಪಸ್‌ ಬರುತ್ತಿದೆ. ಎಲ್ಲ ರೀತಿಯ ತೆರಿಗೆ ಮೂಲಗಳಿಂದ ಕರ್ನಾಟಕವು 4.5 ಲಕ್ಷ ಕೋಟಿ ರೂ. ವಾರ್ಷಿಕ ಕೇಂದ್ರಕ್ಕೆ ನೀಡುತ್ತಿದೆ. ನಮ್ಮ ತೆರಿಗೆ ಪಾಲು ಶೇ.20-25 ವಾಪಸ್‌ ಸಿಗುವಂತಾಗಬೇಕು ಎಂದರು.

15ನೇ ಹಣಕಾಸು ಆಯೋಗವು ಕರ್ನಾಟಕ ಸೇರಿ ಹಲವು ರಾಜ್ಯಕ್ಕೆ ಅನ್ಯಾಯ ಮಾಡಿದೆ. ಕೇಂದ್ರ ಹಣಕಾಸು ಆಯೋಗದ ಶಿಫಾರಸನ್ನು ಜಾರಿ ಮಾಡಲಿಲ್ಲ.

ಹೆಚ್ಚು ಕೇಳಿದರೆ ನೀವು ಮುಂದುವರಿದ ರಾಜ್ಯಗಳು ನಿಮ್ಮ ಆದಾಯ ನೀವೇ ವೃದ್ಧಿಸಿಕೊಳ್ಳಿ ಎನ್ನುತ್ತಾರೆ. ಜಿಎಸ್ಟಿ ಜಾರಿಯಾದ ಮೇಲೆ ಕೈ ಕಟ್ಟಿಹಾಕಿಸಿಕೊಂಡಂತಾಗಿದೆ. ಜಿಎಸ್ಟಿ ಜಾರಿ ಹಾಗೂ ನಂತರದ ಅವಲೋಕನ ನಡೆಸಿದರೆ ಕರ್ನಾಟಕಕ್ಕೆ ವಾರ್ಷಿಕ 20-22 ಸಾವಿರ ಕೋಟಿ ರೂ.ನಷ್ಟು ಕಳೆದುಕೊಳ್ಳುವಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.