![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Sep 13, 2024, 7:20 AM IST
ತಿರುವನಂತಪುರ: ಕೇಂದ್ರ ಸರಕಾರ ಸಂಗ್ರಹಿಸುವ ತೆರಿಗೆ ಹಂಚಿಕೆಯಲ್ಲಿ ಸಮಪಾಲು ದೊರೆಯಬೇಕೆಂಬ ಆಗ್ರಹ ಕೇರಳ ರಾಜಧಾನಿ ತಿರುವನಂತಪುರದಲ್ಲಿ ಗುರುವಾರ ನಡೆದ ಬಿಜೆಪಿಯೇತರ ಐದು ರಾಜ್ಯಗಳ ನಾಯಕರ ಸಭೆಯಲ್ಲಿ ಕೇಳಿ ಬಂತು.
16ನೇ ಹಣಕಾಸು ಆಯೋಗಕ್ಕೆ ರಾಜ್ಯಗಳ ಬೇಡಿಕೆಗೆ ಸಂಬಂಧಿಸಿದಂತೆ ಕರ್ನಾಟಕ, ತೆಲಂಗಾಣ, ತಮಿಳುನಾಡು, ಪಶ್ಚಿಮ ಬಂಗಾಲ ಮತ್ತು ಕೇರಳ ರಾಜ್ಯಗಳ ಹಣಕಾಸು ಸಚಿವರು ಹಾಗೂ ನಾಯಕರು ನಡೆಸಿದ ಸಭೆಯಲ್ಲಿ ಕೇಂದ್ರ ಸರಕಾರದಿಂದ ಆಗುತ್ತಿರುವ ತೆರಿಗೆ ಅನ್ಯಾಯದ ಬಗ್ಗೆ ಚರ್ಚಿಸ ಲಾಯಿತು.
ಒಟ್ಟು ತೆರಿಗೆ ಆದಾಯದಲ್ಲಿ ಕೇಂದ್ರ ಸರಕಾರವು ರಾಜ್ಯಗಳಿಗೆ ನೀಡುವ ಪಾಲನ್ನು ಕಳೆದ ಹಣಕಾಸು ಆಯೋಗವು ಶಿಫಾರಸು ಮಾಡಿದ ಶೇ. 41ರಿಂದ ಶೇ. 50ಕ್ಕೆ ಹೆಚ್ಚಿಸಬೇಕೆಂಬ ಆಗ್ರಹ ಕೇಳಿ ಬಂತು.
ಬೇಡಿಕೆಗಳೇನು?
-ತೆರಿಗೆ ಆದಾಯ ಹಂಚಿಕೆಯಲ್ಲಿ ಆಗುತ್ತಿರುವ ಅನ್ಯಾಯ ತಡೆಯಬೇಕು
-ತೆರಿಗೆಯ ಸಮಪಾಲು ಬಗ್ಗೆ 16ನೇ ಹಣ ಕಾಸು ಆಯೋಗ ಗಮನಹರಿಸ ಬೇಕು
-ತೆರಿಗೆ ಹಂಚಿಕೆ ವೇಳೆ ಹೆಚ್ಚುತ್ತಿರುವ ಕೇಂದ್ರದ ಸೆಸ್, ಸರ್ಚಾರ್ಜ್ ಪರಿಗಣಿಸಬೇಕು
15ನೇ ಹಣಕಾಸು ಆಯೋಗದ ಶಿಫಾರಸುಗಳಿಂದ ರಾಜ್ಯಕ್ಕೆ ಆಗಿರುವ ಅನ್ಯಾಯಕ್ಕೆ 16ನೇ ಹಣಕಾಸು ಆಯೋಗದಲ್ಲಿ ಪರಿಹಾರ ನೀಡಬೇಕಾಗಿದೆ. ಭವಿಷ್ಯದ ದೃಷ್ಟಿಯಲ್ಲಿ ಇದು ನಿರ್ಣಾಯಕ ಘಟ್ಟವಾಗಿದ್ದು, ವೈಯಕ್ತಿಕವಾಗಿ ಹಾಗೂ ಒಟ್ಟಾಗಿ ದಕ್ಷಿಣದ ರಾಜ್ಯಗಳು ದನಿ ಎತ್ತಬೇಕು.
– ಕೃಷ್ಣಬೈರೇಗೌಡ, ಕಂದಾಯ ಸಚಿವ
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.