Form a New committee: 103 ಎ ದರ್ಜೆ ದೇಗುಲಗಳಿಗಿಲ್ಲ ವ್ಯವಸ್ಥಾಪನ ಸಮಿತಿ

ಉಡುಪಿಯ 20, ದಕ್ಷಿಣ ಕನ್ನಡದ 25 ದೇಗುಲಗಳ ಸಮಿತಿ ಅವಧಿ ಮುಕ್ತಾಯ, ಆಕಾಂಕ್ಷಿಗಳು ಹೆಚ್ಚಿರುವುದು ವಿಳಂಬಕ್ಕೆ ಪ್ರಮುಖ ಕಾರಣ, ಅಭಿವೃದ್ಧಿ ಕಾರ್ಯ ಕುಂಠಿತ

Team Udayavani, Sep 13, 2024, 7:24 AM IST

Temple-kota

ಕೋಟ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ವ್ಯಾಪ್ತಿಗೆ ಒಳಪಡುವ ರಾಜ್ಯದ ಪ್ರಮುಖ 103 ಎ ದರ್ಜೆ ದೇಗುಲಗಳಿಗೆ 2023 ಅಕ್ಟೋಬರ್‌ನಲ್ಲಿ ವ್ಯವಸ್ಥಾಪನ ಸಮಿತಿಯ ಅವಧಿ ಮುಕ್ತಾಯಗೊಂಡಿತ್ತು. ಅನಂತರ ಹೊಸ ಸಮಿತಿ ರಚಿಸಲು ನವೆಂಬರ್‌ನಲ್ಲಿ ಅರ್ಜಿ ಆಹ್ವಾನಿಸಿ ಪರಿಶೀಲನೆ ಪ್ರಕ್ರಿಯೆ ನಡೆಸಿ 9 ತಿಂಗಳು ಕಳೆದಿದ್ದರೂ ಘೋಷಣೆ ಆಗಿಲ್ಲ. ಇದರಿಂದ ದೇಗುಲಗಳ ಅಭಿವೃದ್ಧಿ ಸಹಿತ ಹಲವು ಕಾರ್ಯಗಳಿಗೆ ತೊಡಕಾಗುತ್ತಿದೆ.

ಉಡುಪಿ ಜಿಲ್ಲೆಯಲ್ಲಿ 29, ದ.ಕ.ದಲ್ಲಿ 44 ಸಹಿತ ರಾಜ್ಯದಲ್ಲಿ ಒಟ್ಟು 201 ಎ ಗ್ರೇಡ್‌ ದೇವಸ್ಥಾನಗಳಿವೆ. ಉಡುಪಿಯ 20 ಮತ್ತು ದಕ್ಷಿಣ ಕನ್ನಡದ 25 ದೇಗುಲಗಳ ಅವ ಧಿ ಪೂರ್ಣಗೊಂಡಿದೆ. ಇದರಲ್ಲಿ ಉಡುಪಿ ಜಿಲ್ಲೆಯ ಕೊಲ್ಲೂರು, ಅಮೃತೇಶ್ವರೀ ಸಹಿತ ಮೂರು, ದ.ಕ.ದ ಹನ್ನೊಂದು ದೇವಾಲಯಗಳಿಗೆ ಮೊದಲ ಹಂತದಲ್ಲಿ ಅರ್ಜಿ ಆಹ್ವಾನಿಸಿ ಪರಿಶೀಲನೆ ಮುಗಿದಿದ್ದು, ಇನ್ನುಳಿದವುಗಳಿಗೆ ಈಗ ಅರ್ಜಿ ಆಹ್ವಾನಿಸಲಾಗಿದೆ.

ಅಭಿವೃದ್ಧಿಗೆ ಹಿನ್ನಡೆ
ಈ ದೇಗುಲಗಳಲ್ಲಿ ಒಂದೂವರೆ ವರ್ಷದಿಂದ ಆಡಳಿತಾ ಧಿಕಾರಿಗಳೇ ಆಡಳಿತ ನಡೆಸುತ್ತಿದ್ದು, ನಿತ್ಯ ಚಟುವಟಿಕೆಗಳು, ವಿಶೇಷ ಹಬ್ಬ ಹರಿದಿನಗಳ ಆಚರಣೆ ಮಾತ್ರ ನಡೆಯುತ್ತಿದೆ. ಹೊಸ ಯೋಜನೆಗಳು, ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲು ಸಾಧ್ಯವಾಗುತ್ತಿಲ್ಲ, ನವರಾತ್ರಿ ಮುಂತಾದ ಪ್ರಮುಖ ಉತ್ಸವಗಳ ಸಂದರ್ಭದಲ್ಲಿ ತಯಾರಿ ನಡೆಸಲು, ಪ್ರಮುಖ ತೀರ್ಮಾನ ಕೈಗೊಳ್ಳಲು ವ್ಯವಸ್ಥಾಪನ ಸಮಿತಿ ಇದ್ದರೆ ಅನುಕೂಲವಾಗುತ್ತದೆ ಎನ್ನುವ ಅಭಿಪ್ರಾಯ ಇದೆ.

ಆಕಾಂಕ್ಷಿಗಳ ರಾಜಕೀಯ ಮೇಲಾಟ?
ಎ ದರ್ಜೆ ದೇಗುಲಗಳ ವ್ಯವಸ್ಥಾಪನ ಸಮಿತಿ ಸದಸ್ಯರು, ಅಧ್ಯಕ್ಷರಾಗಲು ಭಾರೀ ಪೈಪೋಟಿ ಇದ್ದು, ಹಲವೆಡೆ 9 ಸ್ಥಾನಗಳಿಗೆ ನೂರಾರು ಮಂದಿ ಆಕಾಂಕ್ಷಿಗಳಿರುತ್ತಾರೆ. ಇವರೆಲ್ಲರೂ ಬೇರೆ ಬೇರೆ ರಾಜಕೀಯ ಪ್ರಭಾವ ಹೊಂದಿರುವುದೂ ಇದೆ. ಈ ಕಾರಣದಿಂದ ಒಂದೊಂದು ದೇಗುಲಗಳ 9 ಸ್ಥಾನಗಳಿಗೆ ನೂರಾರು ಆಕಾಂಕ್ಷಿಗಳು ಮೂರ್‍ನಾಲ್ಕು ಪಟ್ಟಿಗಳು ಸಚಿವರ ಕೈ ಸೇರಿವೆ. ಆದ್ದರಿಂದ ಆಯ್ಕೆ ಕಗ್ಗಂಟಾಗುತ್ತಿದೆ ಎನ್ನಲಾಗುತ್ತಿದೆ.

ಶೀಘ್ರದಲ್ಲಿ ಪ್ರಕಟ
ಮೊದಲ ಹಂತದಲ್ಲಿ ಆರ್ಜಿ ಆಹ್ವಾನಿಸಿದ ಕೊಲ್ಲೂರು ಸಹಿತ ಇತರ ಎ ದರ್ಜೆ ದೇಗುಲಗಳ ವ್ಯವಸ್ಥಾಪನ ಸಮಿತಿ ರಚನೆಗೆ ಎಲ್ಲ ಪ್ರಕ್ರಿಯೆ ಮುಗಿದಿದ್ದು, ಯಾವುದೇ ಸಮಸ್ಯೆಗಳಿಲ್ಲ. ಶೀಘ್ರದಲ್ಲಿ ಸಮಿತಿ ಘೋಷಣೆಯಾಗಲಿದೆ.
ರಾಮಲಿಂಗಾ ರೆಡ್ಡಿ, ಹಿಂದೂ ಧಾರ್ಮಿಕ ಸಂಸ್ಥೆ, ಧರ್ಮಾದಾಯ ದತ್ತಿ ಸಚಿವರು

– ರಾಜೇಶ್‌ ಗಾಣಿಗ ಅಚ್ಲಾಡಿ 

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.