Vijayapura; ಮೀಸಲಾತಿ ಕಾಂಗ್ರೆಸ್ ಕೊಟ್ಟ ಭಿಕ್ಷಾಪಾತ್ರೆಯಲ್ಲ, ಅದು ದಲಿತರ ಹಕ್ಕು: ಜಿಗಜಿಣಗಿ
Team Udayavani, Sep 13, 2024, 11:50 AM IST
ವಿಜಯಪುರ: ದೇಶದಲ್ಲಿ ಕಾಂಗ್ರೆಸ್ ಯಾವಾಗಲೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿರೋಧಿಯಾಗಿದೆ. ಈಗ ರಾಹುಲ್ ಗಾಂಧಿ ಮೀಸಲಾತಿ ರದ್ದು ಮಾಡುತ್ತೇವೆ ಎಂದು ಹೇಳುವ ಮೂಲಕ ಅದನ್ನೇ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಮೀಸಲು ರದ್ದು ಮಾಡುತ್ತೇವೆ ಎಂದು ಹೇಳಲು ಮೀಸಲಾತಿ ಕಾಂಗ್ರೆಸ್ ಕೊಟ್ಟಿರುವ ಭಿಕ್ಷಾ ಪಾತ್ರೆಯಲ್ಲ. ಮೀಸಲಾತಿ ದಲಿತರ ಜನ್ಮ ಸಿದ್ಧ ಹಕ್ಕು ಎಂದು ಸಂಸದ ರಮೇಶ್ ಜಿಗಜಿಣಗಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮೆರಿಕದಲ್ಲಿ ಮೀಸಲಾತಿ ರದ್ದು ಪಡಿಸುವ ಬಗ್ಗೆ ರಾಹುಲ್ ಗಾಂಧಿ ಹೇಳಿಕೆ ಕೊಟ್ಟಿದ್ದಾರೆ. ಆಮೇಲೆ ನಾನು ಆ ಹೇಳಿಕೆ ಕೊಟ್ಟಿಲ್ಲ ಎಂದು ರಾಹುಲ್ ಹೇಳುತ್ತಾನೆ. ದಲಿತರ ಕುರಿತು ಕಾಂಗ್ರೆಸ್ ಕೇವಲ ಮೊಸಳೆ ಕಣ್ಣೀರು ಹಾಕುತ್ತದೆ. ಸಂಸತ್ತಿನಲ್ಲಿ ಸಂವಿಧಾನ ಹಿಡಿದು ರಾಹುಲ್ ಪ್ರಮಾಣ ವಚನ ಸ್ವೀಕರಿಸಿದ್ದರು. ಇದೆಲ್ಲ ಸುಮ್ಮನೆ ಅವರ ತೋರಿಕೆ ಮಾತ್ರ. ದಲಿತರ 25 ಸಾವಿರ ಕೋಟಿ ಹಣವನ್ನು ಬೇರೆ ಯೋಜನೆಗಳಿಗೆ ರಾಜ್ಯ ಸರ್ಕಾರ ಹಂಚಿಕೆ ಮಾಡಿದೆ ಎಂದು ಕಿಡಿಕಾರಿದರು.
ಅಲ್ಲದೇ, ದೇಶದ ವಿಭಜನೆಯ ಶಕ್ತಿಯೊಂದಿಗೆ ರಾಹುಲ್ ಕಾಣಿಸಿಕೊಂಡಿದ್ದಾರೆ. ದೇಶದ ಭದ್ರತೆಗೆ ಯಾವಾಗಲೂ ರಾಹುಲ್ ಬೆದರಿಕೆ ಒಡ್ಡಿಡುತ್ತಿದ್ದಾರೆ ಎಂದು ಆರೋಪಿಸಿದರು.
ಮಂಡ್ಯದಲ್ಲಿ ಗಣೇಶ ವಿಸರ್ಜನೆ ಗಲಾಟೆ ವಿಚಾರ ಪ್ರತಿಕ್ರಿಯಿಸಿ, ಈ ಗಲಾಟೆಗೆ ಪ್ರಚೋದನೆಯೇ ಕಾರಣ. ಈ ರೀತಿ ಪ್ರಚೋದನೆಯಿಂದ ದೇಶ, ಇತರ ರಾಜ್ಯದಲ್ಲಿ ಆಗುತ್ತದೆ ಎಂದರು.
ರಾಜ್ಯದಲ್ಲಿ ದಲಿತ ಸಿಎಂ ವಿಚಾರವಾಗಿ ಪ್ರತಿಕ್ರಿಯಿಸಿದ ಜಿಗಜಿಣಗಿ, ಸಿಎಂ ಆಗದಿರಲು ದಲಿತರು ಅಯೋಗ್ಯರಾ? ಸಿಎಂ ಬದಲಾವಣೆ ಮಾಡಿದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಲ್ಲಿಗೆ ತಂದು ಮುಖ್ಯಮಂತ್ರಿ ಮಾಡಲಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.